ಬತ್ತಿದ ರಾಜಾಪುರ ಬ್ಯಾರೇಜ್‌


Team Udayavani, Mar 16, 2019, 12:07 PM IST

16-march-22.jpg

ಐನಾಪುರ: ಈ ಭಾಗದ ಜನ ಹಾಗೂ ಜಾನುವಾರುಗಳ ಜೀವನಾಡಿ ಆಗಿರುವ ಕೃಷ್ಣಾ ನದಿ ನೀರಿನ ಮಟ್ಟ ಇಳಿಕೆಯಾಗುತ್ತಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಮಂಗಾವತಿ ಬಳಿ ರಾಜಾಪುರ ಬ್ಯಾರೇಜ್‌ ನೀರಿಲ್ಲದೆ ಬರಿದಾಗಿದೆ. ಮೊದಲೇ ಬರಗಾಲದ ಛಾಯೆ ಇರುವ ಈ ಪ್ರದೇಶದಲ್ಲಿ ನೀರಿನ ಮೂಲಾಧಾರವಾಗಿದ್ದ ಕೃಷ್ಣಾ ನದಿ ಒಡಲು ಬತ್ತುತ್ತಿರುವುದನ್ನು ಗಮನಿಸಿದರೆ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಲಕ್ಷಣಗಳು ಕಾಣುತ್ತಿವೆ.

ಹಿಪ್ಪರಗಿ ಆಣೆಕಟ್ಟೆಯ ಅಧಿಕಾರಿಗಳ ಅಂಕಿ ಅಂಶಗಳ ಪ್ರಕಾರ ಕೃಷ್ಣಾ ನದಿಯಲ್ಲಿ ಈಗ ಸುಮಾರು 1 ಟಿಎಂಸಿ ಅಡಿ ನೀರು ಲಭ್ಯವಿದ್ದು, ಜನರ ಬಳಕೆ ಹಾಗೂ ಬಿರು ಬಿಸಿಲಿನ ತಾಪದಿಂದಾಗಿ ಪ್ರತಿದಿನ ಸುಮಾರು ಅರ್ಧ ಅಡಿ ನೀರು ಇಳಿಕೆಯಾಗುತ್ತಿದೆ. ಇದೇ ಸ್ಥಿತಿ ಮುಂದುವರಿದಲ್ಲಿ ಮಾರ್ಚ್‌ ಕೊನೆ ಒಳಗಾಗಿಯೇ ಕೃಷ್ಣೆಯ ಒಡಲು ಬರಿದಾಗುವುದರಲ್ಲಿ ಸಂದೇಹವಿಲ್ಲ. ಈ ನಿಟ್ಟಿನಲ್ಲಿ ನದಿಗೆ ಕೂಡಲೇ ಮಹಾರಾಷ್ಟ್ರದ ಡ್ಯಾಂಗಳಿಂದ ನೀರು ಬಿಡಿಸುವ ವ್ಯವಸ್ಥೆ ಮಾಡುವಂತೆ, ಅಥಣಿ, ಚಿಕ್ಕೋಡಿ, ರಾಯಬಾಗ ಹಾಗೂ ಜಮಖಂಡಿ ಭಾಗದ ರೈತರು ಜನಪ್ರತಿನಿ ಧಿಗಳು ಹಾಗೂ ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.

ಡ್ಯಾಂಗಳು ಭರ್ತಿ: ಕಳೆದ ಬಾರಿ ಮಹಾರಾಷ್ಟ್ರದಲ್ಲಿ ಮಳೆ ಚೆನ್ನಾಗಿ ಸುರಿದಿರುವುದರಿಂದ ಸದ್ಯ ಅಲ್ಲಿನ ಎಲ್ಲ ಪ್ರಮುಖ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಹೀಗಾಗಿ ಕೊಯ್ನಾ ಸೇರಿದಂತೆ ಅಗತ್ಯವಿರುವ ಎಲ್ಲ ಡ್ಯಾಂಗಳಿಂದ ನೀರು ಬಿಡಿಸುವಲ್ಲಿ ಜನಪ್ರತಿನಿ ಧಿಗಳು ಆಸಕ್ತಿ ತೋರಿಸಬೇಕಾಗಿದೆ. ಮಾರ್ಚ್‌ ಕೊನೆಯೊಳಗಾಗಿ ಕೃಷ್ಣಾ ನದಿಗೆ 2ಟಿಎಂಸಿ ಅಡಿ ನೀರು ಬಿಡುವ ವ್ಯವಸ್ಥೆ ಆಗಬೇಕಿದೆ. ಏಕೆಂದರೆ ಸಂಪೂರ್ಣ ಬರಿದಾದ ನಂತರ ನದಿಗೆ ನೀರು ಬಿಟ್ಟರೆ ಪ್ರಯೋಜನವಿಲ್ಲ ಎಂಬುದು ಈ ಭಾಗದ ಜನರ ಅಭಿಪ್ರಾಯ.

ನೀರು ಹರಿಯುತ್ತಿರುವ ಈ ಸಂದರ್ಭದಲ್ಲಿಯೇ ಜನಪ್ರತಿನಿಧಿಗಳು ನದಿಗೆ ನೀರು ಹರಿಸಬೇಕು. ನೀರು ಬತ್ತಿದಾಗ ನೀರು ಹರಿಸಿದರೆ ಮರಳು ಮತ್ತು ತಗ್ಗು ಪ್ರದೇಶದಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ನೀರು ನಿಂತು ಬಹಳಷ್ಟು ಪ್ರದೇಶಗಳ ಜನರಿಗೆ ನೀರು ಲಭ್ಯವಾಗುವುದಿಲ್ಲ. ಹೀಗಾಗಿ, ಜನಪ್ರತಿನಿಧಿಗಳು ಈಗಲೇ ಎಚ್ಚೆತ್ತುಕೊಳ್ಳಬೇಕಿದೆ.

ಕಳೆದ ಒಂದು ವಾರದಿಂದ ಕೃಷ್ಣಾ ನದಿಯ ನೀರಿನ ಪಾತ್ರ ಇಳಿಕೆಯಾಗುತ್ತಿದ್ದು, ಬರುವ 8-10 ದಿನಗಳಲ್ಲಿ ಕೃಷ್ಣೆಯ ಒಡಲು ಬತ್ತುವ ಆತಂಕ ಎದುರಾಗಿದೆ. ಜಿಲ್ಲಾಡಳಿತ ಇತ್ತ ಗಮನ ಹರಿಸಿ ನದಿಯಲ್ಲಿಯ ನೀರು ಬತ್ತುವುದಕ್ಕಿಂತ ಮುಂಚೆ ಮಹಾರಾಷ್ಟ್ರದ ಕೊಯ್ನಾ ಇಲ್ಲವೇ ಬೇರೆ ಡ್ಯಾಂನಿಂದ ನೀರನ್ನು ಹರಿ ಬಿಡಬೇಕು. ನದಿ ಬತ್ತಿದ ಮೇಲೆ ಬಿಟ್ಟರೆ ಪ್ರಯೋಜನವಾಗುವುದಿಲ್ಲ.ಅದಕ್ಕಾಗಿ ಜಿಲ್ಲಾಡಳಿತ ಇತ್ತ ಗಮನ ಹರಿಸಿ ನೀರು ಬಿಡಿಸುವ ವ್ಯವಸ್ಥೆ ಮಾಡಬೇಕು.
ಪ್ರೇಮಕುಮಾರ ಬಾಲೋಜಿ
ಅಧ್ಯಕ್ಷರು, ಜನಪರ ಹೋರಾಟ ಸಮಿತಿ 

ಒಂದೆಡೆ ಕಬ್ಬಿಗೆ ಸಕ್ಕರೆ ಕಾರ್ಖಾನೆಗಳು ಅವೈಜ್ಞಾನಿಕ ಬೆಲೆ ನೀಡಿದರೆ, ಇನ್ನೊಂದೆಡೆ ಪ್ರಕೃತಿ ಕೈ ಕೊಟ್ಟಿದೆ ಇದರ ಪರಿಣಾಮ ಕೃಷ್ಣೆಯ ಒಡಲು ಬರಿದಾಗಿದೆ. ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೊಯ್ನಾ ಇಲ್ಲವೆ ಕಾಳಮ್ಮವಾಡಿ ಡ್ಯಾಂನಿಂದ ತಕ್ಷಣವೇ 2 ಟಿಎಂಸಿ ಅಡಿ ನೀರನ್ನು ಬಿಟ್ಟರೆ ಮಾತ್ರ ರೈತ
ಬದುಕುಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿವಹಿಸಿ ಕೃಷ್ಣಾ ನದಿಗೆ ನೀರು ಬಿಡಿಸುವ ವ್ಯವಸ್ಥೆ ಮಾಡಬೇಕು.
ಶೀತಲಗೌಡ ಪಾಟೀಲ
ಅಧ್ಯಕ್ಷರು, ಪಿಎಲ್‌ಡಿ ಬ್ಯಾಂಕ್‌ ಅಥಣಿ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.