ಬರಗಾಲದ ಸಂಕಷ್ಟ- ಬತ್ತಿದ ಕೆರೆಗಳು; ಮೀನು ಉತ್ಪಾದನೆಗೆ ಬರ


Team Udayavani, Mar 20, 2024, 4:04 PM IST

ಬರಗಾಲದ ಸಂಕಷ್ಟ- ಬತ್ತಿದ ಕೆರೆಗಳು; ಮೀನು ಉತ್ಪಾದನೆಗೆ ಬರ

ಉದಯವಾಣಿ ಸಮಾಚಾರ
ಬೆಳಗಾವಿ: ರಾಜ್ಯದಲ್ಲಿ ತಲೆದೋರಿರುವ ಬರಗಾಲದ ಹೊಡೆತ ಮೀನು ಸಾಕಾಣಿಕೆ ಮೇಲೂ ಬಿದ್ದಿದ್ದು, ಬಹುತೇಕ ಕೆರೆಗಳಲ್ಲಿ
ನೀರಿನ ಅಭಾವದಿಂದ ಮೀನು ಉತ್ಪಾದನೆ ಇಳಿಮುಖಗೊಂಡಿದೆ. ಮೀನು ಸಾಕಾಣಿಕೆ ಮಾಡುವ ಕುಟುಂಬಗಳು ಸಂಕಷ್ಟಕ್ಕೀಡಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಕೇವಲ 127 ಕೆರೆಗಳಲ್ಲಿ ಮೀನಿನ ಮರಿ ಬಿತ್ತನೆ ಮಾಡಲಾಗಿದೆ.

ಕಳೆದ ವರ್ಷ ಮೀನು ಉತ್ಪಾದನೆಯಲ್ಲಿ ಆದ ಲಾಭ ಈ ಬಾರಿ ಸಿಗುವುದು ಅಸಾಧ್ಯವಾಗಿದೆ. ಕೆರೆಗಳಲ್ಲಿ ನೀರಿನ ಕೊರತೆ ಮೀನುಗಳ ಹುಟ್ಟು ಹಾಗೂ ಬೆಳವಣಿಗೆ ಮೇಲೆ ಭಾರೀ ಪರಿಣಾಮ ಬೀರಿದೆ. ಮತ್ಸ್ಯೋದ್ಯೋಗವನ್ನೇ ನಂಬಿಕೊಂಡು ಬದುಕು ಸಾಗಿಸುತ್ತಿರುವ ಕುಟುಂಬಗಳ ಮೇಲೆ ಭಾರೀ ಹೊಡೆತ ಬಿದ್ದಿದೆ. ಮೀನುಗಾರಿಕೆ ಇಲಾಖೆಯ ಬೆಳಗಾವಿ ವಿಭಾಗವು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳನ್ನು ಒಳಗೊಂಡಿದೆ. 2023-24ರಲ್ಲಿ 785 ಕೆರೆಗಳಲ್ಲಿ ಮೀನು ಸಾಕಾಣಿಕೆ ಮಾಡಲು ಉದ್ದೇಶ ಹೊಂದಲಾಗಿತ್ತು.

ಆದರೆ ನೀರಿನ ಕೊರತೆ, ಬರಗಾಲದ ಸಂಕಷ್ಟದಿಂದ ಕೇವಲ 522 ಕೆರೆಗಳಲ್ಲಿ ಮೀನಿನ ಮರಿಗಳ ಬಿತ್ತನೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಅತಿ ಹೆಚ್ಚು 179 ಕೆರೆಗಳಲ್ಲಿ ಮರಿಗಳನ್ನು ಬಿಡಲಾಗಿದೆ. ಗದಗ ಜಿಲ್ಲೆಯಯಲ್ಲಿ ಅತಿ ಕಡಿಮೆ ಎಂದರೆ 34 ಕೆರೆಗಳಲ್ಲಿ ಮರಿಗಳ ಬಿತ್ತನೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 127, ಧಾರವಾಡದಲ್ಲಿ 105, ವಿಜಯಪುರ 48, ಬಾಗಲಕೋಟೆ ಜಿಲ್ಲೆಯ 34 ಕೆರೆಗಳಲ್ಲಿ ಮೀನಿನ ಮರಿಗಳನ್ನು ಬಿಡಲಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅತಿ ಕಡಿಮೆ ಕೆರೆಗಳಲ್ಲಿ ಮೀನಿನ ಮರಿಗಳನ್ನು ಬಿಡಲಾಗಿದೆ. ಅಂದುಕೊಂಡಷ್ಟು ಮೀನಿನ ಉತ್ಪಾದನೆ ಆಗುವುದಿಲ್ಲ. 2022-23ರಲ್ಲಿ 618 ಕೆರೆಗಳಲ್ಲಿ 3.33 ಟನ್‌ ಮೀನಿನ ಮರಿಗಳನ್ನು ಬಿಡಲಾಗಿತ್ತು. ಅದರಿಂದ 1,03978 ಟನ್‌ ಮೀನಿನ ಉತ್ಪಾದನೆ ಆಗಿತ್ತು. ಈ ವರ್ಷ 4.47 ಕೋಟಿ ಮೀನಿನ ಮರಿಗಳನ್ನು ಬಿಟ್ಟರೂ 1.26 ಲಕ್ಷ ಟನ್‌ ಮೀನು ಉತ್ಪಾದನೆ ಆಗುವ ಉದ್ದೇಶ ಇದೆ. ಈವರೆಗೆ 3.13 ಕೋಟಿ ಮೀನುಗಳ ಪೈಕಿ 70 ಸಾವಿರ ಟನ್‌ ಉತ್ಪಾದನೆ ಆಗಿದೆ.

ಈ ವರ್ಷದ ಇನ್ನು ಕೇವಲ ಎರಡು ತಿಂಗಳು ಬಾಕಿ ಇರುವಾಗ ಶೇ.55ರಷ್ಟು ಮೀನು ಉತ್ಪಾದನೆ ಮಾತ್ರ ಆಗಿದೆ. ಮೀನು
ಸಾಕಾಣಿಕೆಗಾಗಿ ಜಿಲ್ಲೆಯ ಇನ್ನೂ ಕೆಲ ಕೆರೆಗಳನ್ನು ಬಾಡಿಗೆ ಮೇಲೆ ತೆಗೆದುಕೊಳ್ಳಲಾಗುತ್ತಿದೆ. ಆದರೆ ಬರಗಾಲದಿಂದಾಗಿ ನೀರಿನ ಸಮಸ್ಯೆ ಉದ್ಭವಿಸಿದ್ದರಿಂದ ಮೀನಿನ ಉತ್ಪಾದನೆಯಲ್ಲಿ ಕೊರತೆ ಉಂಟಾಗಿದೆ.

ಬರದ ಹೊಡೆತದ ಜತೆಗೆ ಮಾರುಕಟ್ಟೆಯಲ್ಲಿ ಮೀನಿಗೆ ದರವೂ ಸಿಗುತ್ತಿಲ್ಲ. ನೀರಿನ ಪ್ರಮಾಣ ಕಡಿಮೆ ಇದೆ ಎಂಬ ಕಾರಣಕ್ಕೆ ಮೀನುಗಳನ್ನು ತೂಕಕ್ಕಿಂತ ಮೊದಲೇ ಹೊರಗೆ ತೆಗೆಯಲಾಗುತ್ತಿದೆ. ಹೀಗಾಗಿ ದರ ಅಂದುಕೊಂಡಷ್ಟು ಸಿಗುತ್ತಿಲ್ಲ. ಪ್ರತಿ ಕೆಜಿಗೆ ಏನಿಲ್ಲವೆಂದರೂ 100-120 ರೂ. ಸಿಗುತ್ತಿದ್ದ ದರ 50-70 ರೂ. ಸಿಗುತ್ತಿದೆ. ಒಂದು ಎಕರೆಯಲ್ಲಿ ಸಾಮಾನ್ಯವಾಗಿ 1.25 ಲಕ್ಷ ರೂ. ಆದಾಯ ಬರುತ್ತಿತ್ತು. ಈಗ ಅದರ ಪ್ರಮಾಣ ಕಡಿಮೆ ಆಗಿದೆ ಎನ್ನುತ್ತಿದ್ದಾರೆ ಮೀನು ಸಾಕಾಣಿಕೆದಾರರು.

ಬರಗಾಲದ ಸಂಕಷ್ಟದಿಂದಾಗಿ ಮೀನಿನ ಉತ್ಪಾದನೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಉತ್ಪಾದನೆ ಕಡಿಮೆ ಆಗಲಿದೆ. ಆದರೂ ಉತ್ಪಾದನೆ ಅಪಾಯಕಾರಿ ಸ್ಥಿತಿ ಏನಿಲ್ಲ.
ಪಿ.ಸುಧೀರ, ಜಂಟಿ ನಿರ್ದೇಶಕರು, ಮೀನುಗಾರಿಕೆ ಇಲಾಖೆ, ಬೆಳಗಾವಿ

*ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.