ಸಮೀಕ್ಷೆಗೆ ಹೋಗಿದ್ದ ಆಶಾ ಕಾರ್ಯಕರ್ತೆರ ಮೇಲೆ ಮದ್ಯ ವ್ಯಸನಿಯಿಂದ ಹಲ್ಲೆ: ದೂರು
Team Udayavani, May 19, 2020, 8:31 AM IST
ಬೆಳಗಾವಿ: ಕೋವಿಡ್-19 ಸಮೀಕ್ಷೆ ನಡೆಸಲು ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಮದ್ಯ ವ್ಯಸನಿಯೋರ್ವ ಹಲ್ಲೆನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಘಟನೆ ಇಲ್ಲಿಯ ಜ್ಯೋತಿ ನಗರದಲ್ಲಿ ನಡೆದಿದೆ.
ಜ್ಯೋತಿ ನಗರದ ಮದ್ಯವ್ಯಸನಿ ವಿನಾಯಕ ಪ್ರಕಾಶ ಖರಾಗಡೆ ಎಂಬ ಮದ್ಯವ್ಯಸನಿ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆಯನ್ನೂ ಹಾಕಿದ್ದಾನೆ. ಈ ಕುರಿತು ಆಶಾ ಕಾರ್ಯಕರ್ತೆಯರಾದ ಜಯಾ ಖಿಮಜಿ, ರೂಪಾ ಮುಸಳೆ, ಜ್ಯೋತಿ ಹತ್ತರಗಿ, ಲಕ್ಷ್ಮೀ ಪಾಟೀಲ ಎಂಬವರು ಕ್ಯಾಂಪ್ ಠಾಣೆಯಲ್ಲಿ ಹಲ್ಲೆಕೋರನ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ವಿಚಾರಣೆ ನಡೆಸಲೂ ಹೋದಾಗಲೂ ಈ ಮದ್ಯ ವ್ಯಸನಿ ಪೊಲೀಸರೊಂದಿಗೂ ಜಗಳವಾಡಿ ರಾದ್ಧಾಂತ ನಡೆಸಿದ್ದಾನೆ.
ಜೀವ ಕೈಯಲ್ಲಿ ಹಿಡಿದು ಹಗಲಿರುಳು ದುಡಿಯುತ್ತಿರುವ ಕೋವಿಡ್ ವಾರಿಯರ್ಸ್ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ನಿರಂತರವಾಗಿ ನಡೆಯುತ್ತಿವೆ. ಅದರಂತೆ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯೋತಿ ನಗರದಲ್ಲಿ ಸೋಮವಾರದಂದು ಸೋಂಕಿನ ಬಗ್ಗೆ ಮಾಹಿತಿ ಪಡೆಯಲು ಆಶಾ ಕಾರ್ಯಕರ್ತೆಯರು ಹೋದಾಗ ಮದ್ಯವ್ಯಸನಿ ಜಗಳ ತೆಗೆದು ಹಲ್ಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಜ್ಯೋತಿ ನಗರದಲ್ಲಿ ಆರೋಗ್ಯ ಸಿಬ್ಬಂದಿ ಜತೆಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಮೀಕ್ಷೆ ನಡೆಸುತ್ತಿದ್ದಾರೆ. ಈ ವೇಳೆ ಹಲ್ಲೆ ನಡೆಸಿರುವ ವಿನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ