ಬೆಳಗಾವಿ ಮಾದರಿ ಯಶಸ್ವಿಯಾದರೆ ಪ್ರತಿ ಪಾಲಿಕೆಯಲ್ಲೂ ಇ-ಗ್ರಂಥಾಲಯ ನಿರ್ಮಾಣ: ಸಿಎಂ


Team Udayavani, Sep 26, 2021, 3:13 PM IST

ಬೆಳಗಾವಿ ಮಾದರಿ ಯಶಸ್ವಿಯಾದರೆ ಪ್ರತಿ ಪಾಲಿಕೆಯಲ್ಲೂ ಇ-ಗ್ರಂಥಾಲಯ ನಿರ್ಮಾಣ: ಸಿಎಂ

ಬೆಳಗಾವಿ: ಇಡೀ ಭಾರತವೇ ಬೆಳಗಾವಿಯಲ್ಲಿದೆ. ಇಲ್ಲಿಯ ಜನತೆ ಕನ್ನಡನಾಡಿನ ಬಗ್ಗೆ ಅಪಾರ ಅಭಿಮಾನ ಹೊಂದಿದವರು. ದೇಶಾಭಿಮಾನಿಗಳು. ಯಾವುದೇ ರೀತಿಯ ಸಂಕುಚಿತ ಭಾವನೆ ಹಾಗೂ ವಿಚಾರಗಳಿಗೆ ಇಲ್ಲಿ ಜಾಗವಿಲ್ಲ ಎಂಬುದನ್ನು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಶಹಾಪುರದ ಶಿವಾಜಿ ಉದ್ಯಾನದ ಬಳಿಯ ರವೀಂದ್ರ ಕೌಶಿಕ್ ಇ-ಗ್ರಂಥಾಲಯವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲೆ ಕರ್ನಾಟಕ ರಾಜ್ಯದ ಕಿರೀಟ ಪ್ರಾಯವಾಗಿದೆ. ಆದ್ದರಿಂದ ಬೆಳಗಾವಿ ಗೌರವ ಹೆಚ್ಚಿಸುವ ಕೆಲಸವನ್ನು ಸರಕಾರ ಸದಾ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.

ಬೆಳಗಾವಿಯ ಶಾಸಕರಾದ ಅಭಯ್ ಪಾಟೀಲ್ ಹಾಗೂ ಅನಿಲ್ ಬೆನಕೆ ಅವರು ಇಲ್ಲಿ ಡಬಲ್ ಇಂಜಿನ್ ಸರಕಾರದಂತೆ ಕೆಲಸ ಮಾಡುತ್ತಿದ್ದಾರೆ. ಅವರ ಶ್ರಮದಿಂದ ಬೆಳಗಾವಿಯು ಕರ್ನಾಟಕದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಎರಡನೇ ಸ್ಥಾನದಲ್ಲಿದ್ದು, ಅದನ್ನು ಮೊದಲ ಸ್ಥಾನಕ್ಕೆ ತರಲು ಸರಕಾರ ಎಲ್ಲ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದರು.

ಇ-ಗ್ರಂಥಾಲಯದ ಬಗ್ಗೆ ಪ್ರಸ್ತಾಪಿಸಿದ ಅವರು ಬದುಕಿನ ಸಾರ್ಥಕತೆಗೆ ಜ್ಞಾನ ಮತ್ತು ಧ್ಯಾನ ಅವಶ್ಯಕ. ರವೀಂದ್ರ ಕೌಶಿಕ್ ಅವರ ಜೀವನ, ಅವರ ದೇಶಭಕ್ತಿ ನಮಗೆ ಆದರ್ಶವಾಗಿದೆ. ಅವರ ಹೆಸರಿನಲ್ಲಿ ಗ್ರಂಥಾಲಯ ನಾಮಕರಣ ಮಾಡಿರುವುದು ಅವರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಅವರು  ಹೇಳಿದರು.

ಇದನ್ನೂ ಓದಿ:ಪಾಕ್ – ಚೀನಾ ಹೆಸರು ಹೇಳಲು ಮೋದಿಗೆ ಭಯವೇಕೆ ? ಕಾಂಗ್ರೆಸ್ ಪ್ರಶ್ನೆ

ಡಿಜಿಟಲ್ ಲೈಬ್ರರಿ ಜ್ಞಾನವನ್ನು ನೀಡುವ ಒಂದು ದೇವಾಲಯವಾಗಿದೆ. “ಗ್ರಂಥಾಲಯಕ್ಕೆ ಬನ್ನಿ ಅಥವಾ ಗ್ರಂಥಾಲಯವೇ ನಿಮ್ಮ ಕಡೆ ಬರುವುದು” ಇದು ಒಂದು ಹೊಸ ಪ್ರಯೋಗ.  ಈ ಪ್ರಯೋಗ ಯಶಸ್ವಿಯಾದರೆ ಪ್ರತಿ ಮಹಾನಗರ ಪಾಲಿಕೆಗಳಲ್ಲಿ ಇ-ಗ್ರಂಥಾಲಯ ನಿರ್ಮಾಣ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಸ್ಮಾರ್ಟ್ ಸಿಟಿ ಯೋಜನೆ ಈ ಹಂತಕ್ಕೆ ತಲುಪಲು ಮುಖ್ಯಮಂತ್ರಿ ಬೊಮ್ಮಾಯಿ ಅವರು ನೀಡಿದ ಸಹಕಾರ ಪ್ರಮುಖ ಪಾತ್ರ ವಹಿಸಿದೆ. ಹಿಂದೆ ಬೊಮ್ಮಾಯಿ ಅವರು ಜಿಲ್ಲಾ ಉಸ್ತುವಾರಿ ಆಗಿದ್ದಾಗಲೂ ಬೆಳಗಾವಿ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ ನೀಡಿದ್ದರು ಎಂದು ಸ್ಮರಿಸಿದರು.

ಇದೇ ವೇಳೆ, ರವೀಂದ್ರ ಕೌಶಿಕ್ ಅವರ ಸಹೋದರನ ಪತ್ನಿ ಕುಸುಮಾ ಕೌಶಿಕ್ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.