ಉದ್ಯಮಶೀಲತೆ ಬೆಳೆಸಲು ಇ-ಸ್ಟೆಪ್‌ ಆರಂಭ


Team Udayavani, Sep 6, 2019, 11:07 AM IST

bg-tdy-1

ಬೆಳಗಾವಿ: ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಬೆಳೆಸಲು ನಗರದಲ್ಲಿ ಗುರುವಾರ ಇ-ಸ್ಟೆಪ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು.

ಬೆಳಗಾವಿ: ಕರ್ನಾಟಕ ಸರ್ಕಾರದ ಐಟಿ, ಬಿಟಿ ಮತ್ತು ಎಸ್‌ಅಂಡ್‌ಟಿ ಇಲಾಖೆಯು ಕರ್ನಾಟಕ ಇನ್ನೋವೇಷನ್‌ ಅಂಡ್‌ ಟೆಕ್ನಾಲಜಿ ಸೊಸೈಟಿ(ಕೆಐಟಿಎಸ್‌-ಕಿಟ್ಸ್‌) ಮೂಲಕ ಇ-ಸ್ಟೆಪ್‌ ಉಪಕ್ರಮವನ್ನು ಆರಂಭಿಸಿದೆ. ಕರ್ನಾಟಕ ಸ್ಟಾರ್ಟಪ್‌ ಸೆಲ್ನ ಈ ಉಪಕ್ರಮವನ್ನು ರಾಜ್ಯದಲ್ಲಿನ ವಿದ್ಯಾರ್ಥಿ ಸ್ಟಾರ್ಟಪ್‌ಗ್ಳನ್ನು ಉದ್ಯಮಶೀಲತೆಯ ಕಡೆಗೆ ಸಬಲೀಕರಿಸುವ ಉದ್ದೇಶದೊಂದಿಗೆ ಆರಂಭಿಸಲಾಗಿದೆ ಎಂದು ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣಾರೆಡ್ಡಿ ಹೇಳಿದರು.

ನಗರದ ಗೋಗಟೆ ತಾಂತ್ರಿಕ ಮಹಾವಿದ್ಯಾಲಯ, ಡಾ.ಎಂ.ಎಸ್‌.ಶೇಷಗಿರಿ ತಾಂತ್ರಿಕ ಮಹಾವಿದ್ಯಾಲಯ ಮತ್ತು ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸೆ. 5 ರಿಂದ 7 ರವರೆಗೆ ರಾಜ್ಯ ಸರ್ಕಾರದ ಐಟಿ, ಬಿಟಿ ಮತ್ತು ಎಸ್‌ಅಂಡ್‌ಟಿ ಇಲಾಖೆಯ

ಆಶ್ರಯದಲ್ಲಿ ಆರಂಭವಾದ ಇ-ಸ್ಟೆಪ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೂಟ್ಕ್ಯಾಂಪ್‌ಗ್ಳು, ಮಾರ್ಗದರ್ಶನ ಮತ್ತು ನಿರ್ದಿಷ್ಟ ತರಬೇತಿ ಕಾರ್ಯಕ್ರಮಗಳತ್ತ ಇ-ಸ್ಟೆಪ್‌ ಗಮನ ಕೇಂದ್ರೀಕರಿಸುತ್ತದೆ. ಅನುಭವಿ ತರಬೇತುದಾರರಿಂದ ಉದ್ಯಮಶೀಲತೆಯ ಮೂಲ ಅಂಶಗಳನ್ನು ಅರಿತುಕೊಳ್ಳಲು ಸಹಾಯಕವಾಗಲಿದೆ ಎಂದರು.

ಇ-ಸ್ಟೆಪ್‌ನ ಮೊದಲ ಹಂತದ‌ ಬೂಟ್ ಕ್ಯಾಂಪ್‌ಗ್ಳನ್ನು ರಾಜ್ಯದ ಎಲ್ಲೆಡೆ ಇರುವ ನ್ಯೂ ಏಜ್‌ ಇನ್‌ಕ್ಯೂಬೇಷನ್‌ ನೆಟ್ವರ್ಕ್‌(ಎನ್‌ಎಐಎನ್‌)ಗಳಲ್ಲಿ ಸಂಘಟಿಸಲಾಗುವುದು. ಬೂಟ್ ಕ್ಯಾಂಪ್‌ಗ್ಳನ್ನು ರಾಜ್ಯದ ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ದಕ್ಷಿಣ ಕನ್ನಡ, ಮಂಗಳೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ ಮತ್ತು ಬೀದರ್‌ಗಳಲ್ಲಿ ಸೆ. 14ರವರೆಗೆ, ನಡೆಸಲಾಗುವುದು ಎಂದು ಹೇಳಿದರು.

ಇದರಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಪೋಷಿಸಲಾಗುವುದು. ಪ್ರತಿ ದಿನ 400ಕ್ಕೂ ಹೆಚ್ಚಿನ ನೋಂದಣಿಗಳ ಜೊತೆಗೆ ರಾಜ್ಯದ ಎಲ್ಲೆಡೆ ಬೂಟ್ ಕ್ಯಾಂಪ್‌ಗ್ಳಿಗೆ ಅಪಾರ ಪ್ರತಿಕ್ರಿಯೆಯನ್ನು ನಾವು ಸ್ವೀಕರಿಸಿದ್ದೇವೆ. ಇದುವರೆಗೆ 18ರಿಂದ 26 ವರ್ಷ ವಯಸ್ಸಿನ 2499 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ ಸುಮಾರು ಶೇ.50ರಷ್ಟು ಮಹಿಳಾ ಅಭ್ಯರ್ಥಿಗಳಿದ್ದಾರೆ ಎಂದರು.

ಇ-ಸ್ಟೆಪ್‌ ಎಲ್ಲರನ್ನು ಒಳಗೊಂಡ ಬೆಳವಣಿಗೆಯಲ್ಲಿ ನೆರವಾಗುತ್ತಿದೆ. ಇದಲ್ಲದೇ 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಇದರ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲಾಗುವದು. ಭಾರತದಲ್ಲಿ ಸ್ಟಾರ್ಟ್‌ ಅಪ್‌ ರಾಜಧಾನಿಯಾಗಿ ಕರ್ನಾಟಕದ ಸ್ಥಾನವನ್ನು ಮತ್ತಷ್ಟು ದೃಢಪಡಿಸುವಲ್ಲಿ ಇಲ್ಲಿನ ಪ್ರತಿಭೆಗಳನ್ನು ಬಳಸಿಕೊಳ್ಳುವುದು ನಮ್ಮ ಉದ್ದೇಶವಾಗಿದೆ ಎಂದರು.

ಪ್ರಾಯೋಗಿಕ ನಿರ್ದೇಶನದೊಂದಿಗೆ ಸ್ಟಾರ್ಟಪ್‌ಗ್ಳನ್ನು ಕೈಗೆತ್ತಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಬೂಟ್ಕ್ಯಾಂಪ್‌ ಪ್ರಮುಖ ಹೆಜ್ಜೆಯಾಗಿದೆ. ಇದನ್ನು ಕರ್ನಾಟಕದ ಎಲ್ಲೆಡೆ ಇರುವ 30 ಕೆ-ಟೆಕ್‌ ಇನ್ನೋವೇಷನ್‌ ಹಬ್‌ಗಳಲ್ಲಿ ನಡೆಸಲಾಗುತ್ತಿದೆ. ಈ ಉಪಕ್ರಮದ ನಂತರ 2ನೇ ಮತ್ತು 3ನೇ ಹಂತದ ನಗರಗಳ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಉದ್ಯಮಶೀಲತೆಯ ಕಾರ್ಯಗಳನ್ನು ವೃತ್ತಿಜೀವನವನ್ನಾಗಿ ಆರಿಸಿಕೊಳ್ಳಲು ವಿಶ್ವಾಸ ಹೊಂದಲಿದ್ದಾರೆ ಎಂದು ಐಟಿ, ಬಿಟಿ ಇಲಾಖೆ, ಕಿಟ್ಸ್‌ನ ಎಂಡಿ, ಪ್ರಶಾಂತ್‌ ಕುಮಾರ್‌ ಮಿಶ್ರಾ ಹೇಳಿದರು

ಬೂಟ್ ಕ್ಯಾಂಪ್‌ ಪ್ರಸ್ತುತ ಸ್ಟಾರ್ಟ್‌ಅಪ್‌ ವ್ಯವಸ್ಥೆಯ ಒಟ್ಟಾರೆ ನೋಟವನ್ನು ಭಾಗವಹಿಸುವವರಿಗೆ ನೀಡುತ್ತದೆ. ಸಮಸ್ಯೆ, ಪರಿಹಾರಗಳು, ಸ್ಪರ್ಧಿಗಳು ಮತ್ತು ಗ್ರಾಹಕರನ್ನು ಆಧರಿಸಿದ ಹಲವಾರು ಚಿಂತನೆಗಳ ಮೇಲೆ ತಂಡಗಳು ಕೆಲಸ ಮಾಡಲು ಈ ಬೂಟ್ಕ್ಯಾಂಪ್‌ಗ್ಳು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ. ಬೂಟ್ಕ್ಯಾಂಪ್‌ನಲ್ಲಿ ನುರಿತ ಮಾರ್ಗದರ್ಶಕರು ಉಪನ್ಯಾಸ ನೀಡಲಿದ್ದಾರೆ ಎಂದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.