ಬೆಳಗಾವಿಯಲ್ಲಿ ಇ -ವಿಧಾನ್‌ ಮೊದಲ ಪ್ರಯೋಗ?


Team Udayavani, Dec 10, 2018, 6:00 AM IST

181209kpn6.jpg

ಬೆಳಗಾವಿ: ರಾಜ್ಯ ವಿಧಾನ ಮಂಡಲದ ಸಚಿವಾಲಯವನ್ನು ಸಂಪೂರ್ಣ ಡಿಜಟಲೀಕರಣ ಮಾಡುವ  ಪ್ರಕ್ರಿಯೆ ಆರಂಭವಾಗಿದ್ದು, ಬೆಳಗಾವಿಯಲ್ಲಿ 10 ದಿನ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಇ-ವಿಧಾನ ಯೋಜನೆಯ  ಮೊದಲ ಭಾಗವಾಗಿ ಅಧಿವೇಶನದ ಕಲಾಪಗಳನ್ನು ಲೈವ್‌ವೆಬ್‌ ಕಾಸ್ಟಿಂಗ್‌ ಮೂಲಕ ಪ್ರಸಾರ ಮಾಡಲು ವಿಧಾನಸಭೆ ಸಚಿವಾಲಯದ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.ಲೋಕಸಭೆ ಹಾಗೂ ರಾಜ್ಯಸಭೆ ಮಾದರಿಯಲ್ಲಿ ಅಧಿವೇಶನದ ಕಾರ್ಯ ಕಲಾಪಗಳನ್ನು ಸಾರ್ವಜನಿಕರು ನೇರವಾಗಿ ಆನ್‌ಲೈನ್‌ ಮೂಲಕ ವೀಕ್ಷಿಸಲು ಅವಕಾಶ “ಇ-ವಿಧಾನ್‌’ದಲ್ಲಿದೆ. 

ಈಗಾಗಲೇ ಲೈಬ್‌ವೆಬ್‌ ಕಾಸ್ಟಿಂಗ್‌ ವ್ಯವಸ್ಥೆಯ ರೂಪು ರೇಷೆಗಳನ್ನು ತಯಾರಿಸಲಾಗಿದೆ. ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ ಒಪ್ಪಿಗೆ ನೀಡಿದರೆ, ಬೆಳಗಾವಿಯಲ್ಲಿ ನಡೆಯುವ ಹತ್ತು ದಿನದ ಅಧಿವೇಶನದಲ್ಲಿಯೇ ಆನ್‌ಲೈನ್‌ ಮೂಲಕ ಕಲಾಪಗಳನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದೆ.

ಎರಡು ರೀತಿಯ ಪ್ರಸ್ತಾವನೆ
ಅಧಿವೇಶನದ ಕಲಾಪಗಳನ್ನು ಸಾರ್ವಜನಿಕರಿಗೆ ವೀಕ್ಷಿಸಲು ಅವಕಾಶ ನೀಡುವ ಮೊದಲು ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳು ವೀಕ್ಷಣೆ ಮಾಡಿದ ಬಳಿಕ  ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸುವ ರಾಜ್ಯವ್ಯಾಪಿ ನೆಟ್‌ ವರ್ಕಿಂಗ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈ ವ್ಯವಸ್ಥೆಯಲ್ಲಿ ಕಲಾಪದ ಕಾರ್ಯ ಚಟುವಟಿಕೆಗಳನ್ನು ಸಂಬಂಧಿಸಿದ ಹಿರಿಯ ಅಧಿಕಾರಿಗಳು ವೀಕ್ಷಿಸಿ, ಪರಿಶೀಲಿಸಿದ ನಂತರ ಸಾರ್ವಜನಿಕರ ವೀಕ್ಷಣೆಗೆ ಬಿಡುವುದು.

ಎರಡನೇ ಮಾದರಿಯಲ್ಲಿ ಕಲಾಪ ನಡೆಯುತ್ತಿರುವುದನ್ನು ಲೋಕಸಭೆ -ರಾಜ್ಯಸಭೆ ಮಾದರಿಯಲ್ಲಿ ನೇರವಾಗಿಯೇ ವಿಧಾನಸಭೆ ಸಚಿವಾಲಯದ ವೆಬ್‌ ಸೈಟ್‌ ಮೂಲಕ ಲೈವ್‌ಕಾಸ್ಟ್‌ ಮಾಡುವ ಬಗ್ಗೆ ಎರಡು ಪ್ರಸ್ತಾಪಗಳನ್ನು ಸಿದ್ಧ ಪಡಿಸಿ ವಿಧಾನಸಭೆಯ ಸಚಿವಾಲಯದ ಐಟಿ ವಿಭಾಗದ ಅಧಿಕಾರಿಗಳು ಸಭಾಧ್ಯಕ್ಷರಿಗೆ ನೀಡಿದ್ದು ಅವರ ಅನುಮತಿಗಾಗಿ ಕಾಯುತ್ತಿದ್ದಾರೆ.

ಇ-ವಿಧಾನದ ಮೊದಲ ಹೆಜ್ಜೆ
ದೇಶದ ಎಲ್ಲ ವಿಧಾನ ಮಂಡಲದ ಸಚಿವಾಲಯಗಳನ್ನು ಕಾಗದ ರಹಿತ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಹಿಮಾಚಲ ಪ್ರದೇಶದಲ್ಲಿ ಇ-ವಿಧಾನ್‌ ವ್ಯವಸ್ಥೆ ಅಳವಡಿಸಿಕೊಂಡಿದ್ದು  ಮಾದರಿಯಾಗಿದೆ.

ಅದೇ ರೀತಿ ಎಲ್ಲ ವಿಧಾನ ಮಂಡಲ ಕಾರ್ಯ ಕಲಾಪಗಳನ್ನು ಕಾಗದ ರಹಿತ ಮಾಡಲಾಗುತ್ತಿದ್ದು, ಈಗಾಗಲೇ ಇ-ವಿಧಾನ ವ್ಯವಸ್ಥೆ ಅಳವಡಿಸುವ ನಿಟ್ಟಿನಲ್ಲಿ ಸಚಿವಾಲಯದ ಅಧಿಕಾರಿಗಳಿಗೆ ದೆಹಲಿ ಹಾಗೂ ಬೆಂಗಳೂರಿನಲ್ಲಿ ಎರಡು ಹಂತದಲ್ಲಿ ತರಬೇತಿ ನೀಡಲಾಗಿದೆ.

ಇ-ವಿಧಾನ ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರವೇ ಹಣಕಾಸಿನ ನೆರವು ನೀಡುತ್ತಿದೆ. ಎನ್‌ಐಸಿ ಮೂಲಕ ತಾಂತ್ರಿಕ ವ್ಯವಸ್ಥೆಯನ್ನೂ ಕಲ್ಪಿಸಿಕೊಡುತ್ತಿದೆ. ಅದಕ್ಕಾಗಿ ಎರಡೂ ಸನದಗಳ ಸದಸ್ಯರಿಗೆ ತರಬೇತಿ ನೀಡಿ, ಆನ್‌ಲೈನ್‌ನಲ್ಲಿ ಬರುವ ಮಾಹಿತಿ ಪಡೆದುಕೊಂಡು ಕಲಾಪಗಳ ಚರ್ಚೆಗಳಲ್ಲಿ ಭಾಗವಹಿಸಲು ಮಾಹಿತಿ ನೀಡಬೇಕಿದೆ.  ಸಂಪೂರ್ಣ ಇ-ವಿಧಾನ ವ್ಯವಸ್ಥೆ ಜಾರಿಗೆ ತರುವ ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ಮೊದಲ ಹಂತದಲ್ಲಿ ವೆಬ್‌ಮೂಲಕ ಲೈವ್‌ ಟೆಲಿಕಾಸ್ಟ್‌ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.

ಲೋಕಸಭೆ, ರಾಜ್ಯಸಭೆ ಮಾದರಿಯಲ್ಲಿ ಕರ್ನಾಟಕ ವಿಧಾನಸಭೆಯ ಕಾರ್ಯ ಕಲಾಪಗಳನ್ನು ಸಾರ್ವಜನಿಕರು ನೇರ ವೀಕ್ಷಣೆಗೆ ಅವಕಾಶ ಕಲ್ಪಿಸಲು ಲೈವ್‌ವೆಬ್‌ ಕಾಸ್ಟಿಂಗ್‌ ವ್ಯವಸ್ಥೆ ಸಿದ್ದ ಪಡಿಸಲಾಗಿದೆ. ಈ ಬಗ್ಗೆ ಸಭಾಧ್ಯಕ್ಷರ ಒಪ್ಪಿಗೆಗೆ ಕಾಯುತ್ತಿದ್ದೇವೆ. ಅವರು ಒಪ್ಪಿಗೆ ಸೂಚಿಸಿದರೆ, ಬೆಳಗಾವಿ ಅಧಿವೇಶನವನ್ನು ಸಾರ್ವಜನಿಕರ ವೀಕ್ಷಣೆಗೆ ಲೈವ್‌ ನೀಡಲಾಗುವುದು.
-ಶಶಿಧರ್‌, ನಿರ್ದೇಶಕರು, ವಿಧಾನಸಭೆ ಸಚಿವಾಲಯದ ಐಟಿ ವಿಭಾಗ

– ಶಂಕರ ಪಾಗೋಜಿ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.