ಪರಿಹಾರ ನೀಡದಿದ್ದರೆ ಚುನಾವಣೆ ಬಹಿಷ್ಕಾರ
Team Udayavani, Nov 25, 2019, 11:53 AM IST
ಸಂಬರಗಿ: ಸಂತ್ರಸ್ತರಿಗೆ ಸರ್ಕಾರದ ಪರಿಹಾರ ಕಲ್ಪಿಸಬೇಕು ಇಲ್ಲದಿದ್ದರೆ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ತಂಗಡಿ ಗ್ರಾಮಸ್ಥರು ತಾಪ ಇಒ ಹಾಗೂ ಚುನಾವಣಾ ಅಧಿಕಾರಿಗೆ ಮನವಿ ಸಲ್ಲಿಸಿದರು.
ಕೃಷ್ಣಾ ನದಿಗೆ ಪ್ರವಾಹ ಬಂದಾಗ 373 ಕುಟುಂಬಗಳ ಮನೆ ನೀರಿನಿಂದ ಮುಳುಗಿ ಹೋಗಿದ್ದು, ಆ ಕುಟುಂಬಗಳು ಪರಿಹಾರ ಸಿಗದೇ ಬೀದಿಪಾಲಾಗಿವೆ. ಪರಿಹಾರ ನೀಡುವಂತೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಶೀಘ್ರವೇ ಸಂತ್ರಸ್ತರಿಗೆ ಪರಿಹಾರ ನೀಡಿದಿದ್ದರೆ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ತಂಗಡಿ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಮಾಡಲಾಗುವುದು. ಅಲ್ಲದೇ ಡಿ. 1ರಂದು ತಂಗಡಿ ಗ್ರಾಮ ಪಂಚಾಯತ ಎದುರಿಗೆ ಧರಣಿ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಗ್ರಾಮದಲ್ಲಿ ಹಾನಿಗೊಂಡ 373 ಕುಟುಂಬಗಳು ಸರಕಾರದಿಂದ ಯಾವುದೇ ಪ್ರಕಾರದ ಸರ್ವೇ ಆಗಿಲ್ಲ. ಸುಮಾರು 120 ಕುಟುಂಬಗಳಿಗೆ 10 ಸಾವಿರ ರೂ. ತಾತ್ಕಾಲಿಕ ಪರಿಹಾರವು ದೊರೆತ್ತಿಲ್ಲ. ಬಿದ್ದು ಹೋಗಿರುವ ಕೆಲವು ಮನೆಗಳನ್ನು ಮಾತ್ರ ಸರ್ವೇ ಮಾಡಿ ಪಟ್ಟಿಯನ್ನು ತಯಾರಿಸಿ ಅರ್ಧಕ್ಕೆ ಸರ್ವೇ ಕಾರ್ಯದಿಂದ ಕೈ ಬಿಟ್ಟಿದ್ದಾರೆ. ಶೀಘ್ರವೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಸಂತ್ರಸ್ತರ ನೋವಿಗೆ ಸ್ಪಂದಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ವೇಳೆ ರಾಜಾರಾಮ ಪಾಟೀಲ ಶ್ರೀಕಾಂತ ಪಾಟೀಲ, ರಾಮಚಂದ್ರ ಮಹಾದೇವ ಪಾಟೀಲ, ಪೊಪಟ ಮೊರೆ, ಶಂಕರ ಚೌಗಲಾ, ಮಲ್ಲಪ್ಪ ಬಂಡಗರ, ಸಲಿಂ ಖೀಲೆದಾರ ಸೇರಿದಂತೆ ಗ್ರಾಮದ ಗಣ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ