ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

"ಇಂಗ್ಲಿಷ್‌ ಫಾರ್‌ ಎಂಪಾವರ್‌ ಮೆಂಟ್‌' ಕೃತಿ ಬಿಡುಗಡೆಗೊಳಿಸಲಾಯಿತು

Team Udayavani, Jan 21, 2022, 6:23 PM IST

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ಬೆಳಗಾವಿ: ವಿಶ್ವವಿದ್ಯಾಲಯದ ವಿಭಾಗಗಳು ಮತ್ತು ಪ್ರಾಧ್ಯಾಪಕರು ನಿತ್ಯದ ಪಾಠ ಮತ್ತು ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಹೆಚ್ಚಿನ ಮಹತ್ವ ನೀಡಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕುಲಪತಿ ಪ್ರೊ| ರಾಮಚಂದ್ರಗೌಡ ಹೇಳಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇಂಗ್ಲಿಷ್‌ ಅಧ್ಯಯನ ವಿಭಾಗ ಏರ್ಪಡಿಸಿದ್ದ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಕಾರಾತ್ಮಕ ಧೋರಣೆ ಬೆಳೆಸಿಕೊಳ್ಳಬೇಕು. ವಿಷಮ ಪರಿಸ್ಥಿತಿಯಲ್ಲೂ ಧೈರ್ಯದಿಂದ ಸವಾಲು ಎದುರಿಸಲು ಮುಂದಾಗಬೇಕು ಎಂದರು.

ಹಿರಿಯ ಪತ್ರಕರ್ತ ಸಂಗಮೇಶ ಮೆಣಸಿನಕಾಯಿ ಮಾತನಾಡಿ, ಇಂಗ್ಲಿಷ್‌ ಕಲಿಕೆ ಇಂದಿನ ಮೂಲ ಅಗತ್ಯತೆಗಳಲ್ಲಿ ಒಂದಾಗಿದೆ. ಇಂಗ್ಲಿಷ್‌ ಬಾರದಿರುವ ಬಗ್ಗೆ ಕೀಳರಿಮೆ ವಿದ್ಯಾರ್ಥಿಗಳು ತೊರೆಯಬೇಕು. ಆಗ ಮಾತ್ರ ಇಂಗ್ಲಿಷ್‌ನ್ನು ಸುಲಭವಾಗಿ ಕರಗತ ಮಾಡಿಕೊಳ್ಳಬಹುದು ಎಂದರು.

ಇದೇ ಸಂದರ್ಭದಲ್ಲಿ ಡಾ| ಕವಿತಾ ಕುಸುಗಲ್ಲ ಸಂಪಾದಿಸಿದ “ಇಂಗ್ಲಿಷ್‌ ಫಾರ್‌ ಎಂಪಾವರ್‌ ಮೆಂಟ್‌’ ಕೃತಿ ಬಿಡುಗಡೆಗೊಳಿಸಲಾಯಿತು. ಸಹಾಯಕ ಪ್ರಾಧ್ಯಾಪಕಿ ಪೂಜಾ ಹಲ್ಯಾಳ ಕೃತಿ ಕುರಿತು ಮಾತನಾಡಿದರು. ಪ್ರೊ| ವಿಜಯ ನಾಗನ್ನವರ, ಡಾ| ಮಧುಶ್ರೀ ಕಳ್ಳಿಮನಿ, ಎಸ್‌.ಬಿ. ಕಮತಿ, ಎಂ.ಎಚ್‌. ಜೋಗಿ, ಎ.ಎ. ಮುಲ್ಲಾ, ಬಿ.ಎನ್‌. ಶಾಡದಳ್ಳಿ ಇತರರಿದ್ದರು.

ಕಾರ್ಯಾಗಾರದ ಸಂಘಟನಾ ಕಾರ್ಯದರ್ಶಿ ಡಾ| ಕವಿತಾ ಕುಸುಗಲ್ಲ ಪರಿಚಯಿಸಿ ಸ್ವಾಗತಿಸಿದರು. ನಂತರ ನಡೆದ ವಿವಿಧ ಗೋಷ್ಠಿಗಳಲ್ಲಿ ಸಂದರ್ಶನ ಕೌಶಲ ಮತ್ತು ಸವಾಲುಗಳು ಕುರಿತು ಮಾತನಾಡಿದ ಡಾ| ಡಿ. ಗೌತಮ ಅವಕಾಶಗಳನ್ನು ಬಳಸಿ ಸಕಾರಾತ್ಮಕ ವರ್ತನೆ ಬೆಳೆಸಿಕೊಳ್ಳುವ ಮೂಲಕ ಹೇಗೆ ಸಂದರ್ಶನ ಗೆಲ್ಲಬಹುದು ಎಂಬುದರ ಬಗ್ಗೆ ಸಲಹೆ ನೀಡಿದರು.

ಸಂದರ್ಶನ ಎದುರಿಸುವ ಕುರಿತು ಪ್ರೊ| ಅಶೋಕ ಡಿಸೋಜಾ ಮಾತನಾಡಿ, ಸಂದರ್ಶನ ಎಂದರೆ ಭಯಬೀಳುವ ಅವಶ್ಯಕತೆಯಿಲ್ಲ. ಅದರ ಬದಲಾಗಿ ಧೈರ್ಯದಿಂದ ಎದುರಿಸಬೇಕು. ಸಂದರ್ಶನ ನಿಮ್ಮ ಅನುಕೂಲಕ್ಕೆ ತಕ್ಕಂತೆ ಪರಿಸ್ಥಿತಿ ಸೃಷ್ಟಿಸಿಕೊಳ್ಳಬೇಕು ಎಂದರು. ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಪ್ಲೆಸ್‌ಮೆಂಟ್‌ ಆಫೀಸರ್‌ ಪ್ರೊ| ಆರ್‌. ಎನ್‌. ಮನಗೂಳಿ ಮಾತನಾಡಿ, ಈ ಬಗೆಯ ಕಾರ್ಯಾಗಾರಗಳು ವಿದ್ಯಾರ್ಥಿಗಳಿಗೆ ಶಿಕ್ಷಣದ ನಂತರ
ಅವರಿಗೆ ಉದ್ಯೋಗ ದೊರೆಕಿಸಿಕೊಡುವಲ್ಲಿ ಅತ್ಯಂತ ಪ್ರಯೋಜನಕಾರಿಯಾಗಿವೆ ಎಂದರು. ಡಾ| ನಾಗರತ್ನಾ ಪರಾಂಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಉದ್ಯೋಗಕ್ಕೆ ಅವಶ್ಯವಿರುವ ಕೌಶಲ ಪಡೆದರೆ ಶೀಘ್ರ ಮತ್ತು ಸುಲಭವಾಗಿ ಉದ್ಯೋಗ ಪಡೆಯಬಹುದು ಎಂದರು. ಡಾ| ಕವಿತಾ ಕುಸುಗಲ್ಲ ವಂದಿಸಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.