ಬಿಕೋ ಎನ್ನುತ್ತಿವೆ ಜಿಲ್ಲೆಯ ಬಸ್ ನಿಲ್ದಾಣಗಳು
Team Udayavani, May 23, 2020, 10:19 AM IST
ಬೈಲಹೊಂಗಲ: ಕೋವಿಡ್-19 ಲಾಕ್ಡೌನ್ ಸಡಿಲಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಸರಕಾರ ಸಾರಿಗೆ ಬಸ್ ಸಂಚಾರ ಕಲ್ಪಿಸಿದ್ದರೂ ಸಹ ಬಸ್ನಲ್ಲಿ ಪ್ರಯಾಣಿಕರು ಇಲ್ಲದೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಿ, ಸ್ಯಾನಿಟೈಸ್ ಮಾಡಿ ಬಸ್ ನಿಲ್ದಾಣದೊಳಗಡೆ ಬಿಡಲಾಗುತ್ತಿದ್ದು, ಬೈಲಹೊಂಗಲ ಸಾರಿಗೆ ಘಟಕದಿಂದ ಸುಮಾರು 28 ಬಸ್ಗಳನ್ನು ಬಿಟ್ಟರೂ ಸಹ ಪ್ರಯಾಣಿಕರ ಕೊರತೆ ಎದ್ದು ಕಾಣುತ್ತಿದೆ. ಒಂದು ಬಸ್ನಲ್ಲಿ ಕೇವಲ 10-15 ಜನರಂತೆ ಹತ್ತುತ್ತಿದ್ದಾರೆ. ಬೆಳಗಾವಿ, ಧಾರವಾಡ, ನೇಸರಗಿ, ಯರಗಟ್ಟಿ, ಮುನವಳ್ಳಿ, ಇಂಚಲ, ಸವದತ್ತಿ, ಸಂಗೊಳ್ಳಿ, ಗರ್ಜೂರ, ಇನ್ನೂ ಹಲವು ಕಡೆ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರು ಮಾತ್ರ ಬಸ್ಸಿನತ್ತ ಸುಳಿಯುತ್ತಿಲ್ಲ. ಇನ್ನು ಕೆಲವೆಡೆ ಬಸ್ ಸೌಲಭ್ಯ ಇಲ್ಲದಿರುವುದರಿಂದ ಜನ ದ್ವಿಚಕ್ರ ವಾಹನ ಅವಲಂಬಿಸಿದ್ದಾರೆ.
ಅಂಗವಿಕಲರಿಗೆ ಕೆಎಸ್ಆರ್ಟಿಸಿ ಸಬ್ಸಿಡಿ ದರದ ಪಾಸ್ಗಳನ್ನು ನೀಡಲಾಗಿದ್ದರೂ ಅವುಗಳನ್ನು ಸಾರಿಗೆ ನಿಗಮ ಪರಿಗಣಿಸುತ್ತಿಲ್ಲ. ಹಿರಿಯ ನಾಗರಿಕರಿಗೆ ಸಬ್ಸಿಡಿ ದರದ ಪಾಸ್ಗಳನ್ನು ವಿತರಿಸಿದ್ದರೂ ಈಗ ಲಾಕ್ಡೌನ್ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಅನುಮತಿ ಇಲ್ಲದಿರುವದರಿಂದ ಅವರು ಮನೆಯಲ್ಲಿರಬೇಕಾಗಿದೆ. ಬಸ್ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದೆ ಚಾಲಕ, ನಿರ್ವಾಹಕರು, ಸಿಬ್ಬಂದಿಗಳು ಎದ್ದು ಕಾಣುತ್ತಿದ್ದಾರೆ.
ಪ್ರಯಾಣಿಕರ ಆರೋಗ್ಯದ ದೃಷ್ಟಿಯಿಂದ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸ್ ಮಾಡಲಾಗುತ್ತಿದೆ. ಎಲ್ಲ ತರಹದ ಸುರಕ್ಷತಾ ಕ್ರಮ ಕೈಗೊಂಡಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ.– ಚೇತನ ಸಾಣಿಕೊಪ್ಪ, ಸಾರಿಗೆ ಘಟಕ ವ್ಯವಸ್ಥಾಪಕರು, ಬೈಲಹೊಂಗಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ