ಬೆಳಗಾವಿಯಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ: ಮುಖ್ಯಮಂತ್ರಿ
Team Udayavani, Nov 24, 2022, 7:10 PM IST
ಬೆಂಗಳೂರು: ಬೆಳಗಾವಿಯಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯ ಅಭಿವೃದ್ಧಿ ಕುರಿತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಅಲ್ಲಿನ ವಾಣಿಜ್ಯೋದ್ಯಮಿಗಳ ನಿಯೋಗದೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಯವರು, ರಾಜ್ಯದ ಆರ್ಥಿಕ ಬೆಳವಣಿಗೆ ಹಾಗೂ ಕೈಗಾರಿಕಾ ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಮಹತ್ವದ ಜಿಲ್ಲೆಯಾಗಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಉದ್ಯಮ ಸ್ಥಾಪನೆಯಿಂದ ಕೈಗಾರಿಕಾ ಅಭಿವೃದ್ಧಿ ಇನ್ನಷ್ಟು ವೇಗವಾಗಿ ಆಗಲಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಫೌಂಡ್ರಿ ಮತ್ತು ಹೈಡ್ರಾಲಿಕ್ಸ್ ಉದ್ಯಮಗಳಿಗೆ ಉತ್ತೇಜನ ನೀಡಲು ಫೌಂಡ್ರಿ ಪಾರ್ಕ್ ಸ್ಥಾಪಿಸುವಂತೆ ನಿಯೋಗವು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಭೂಮಿ ಗುರುತಿಸಿ, ಸ್ವಾಧೀನಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಇದಲ್ಲದೆ ಎಂಎಸ್ಎಂಇಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ವಿಧಿಸುವ ಶುಲ್ಕ ರಾಜ್ಯದಲ್ಲಿ ಕಡಿಮೆ ಮಾಡುವ ಬಗ್ಗೆ ಪರಿಶೀಲಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಇದರೊಂದಿಗೆ ಬೆಳಗಾವಿ ಜಿಲ್ಲೆಯಲ್ಲಿ 100 ಹಾಸಿಗೆ ಸಾಮರ್ಥ್ಯದ ಇಎಸ್ಐಸಿ ಆಸ್ಪತ್ರೆ ಸ್ಥಾಪಿಸುವ ಕುರಿತಂತೆ ಕೇಂದ್ರ ಸರಕಾರದೊಂದಿಗೆ ಮಾತುಕತೆ ನಡೆಸುವುದಾಗಿಯೂ ತಿಳಿಸಿದರು.
ಮುಂಬಯಿ-ಚೆನ್ನೈ ಕಾರಿಡಾರ್ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೂ ಕೈಗಾರಿಕಾ ಟೌನ್ಶಿಪ್ ರಚಿಸಲಾಗುವುದು. ಇದರ ಸದುಪಯೋಗವನ್ನು ಉದ್ಯಮಿಗಳು ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬೆಳಗಾವಿಯಲ್ಲಿ ಇಂಟೆಗ್ರೇಟೆಡ್ ಟೆಕ್ಸ್ಟೈಲ್ ಉದ್ಯಮ ಸ್ಥಾಪಿಸಲು ಮುಂದೆ ಬರುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು, ಬೆಳಗಾವಿಯ ಕೈಗಾರಿಕೋದ್ಯಮಗಳ ಬೆಳವಣಿಗೆ ಕುರಿತಂತೆ ಬೆಳಗಾವಿಗೆ ಭೇಟಿ ನೀಡಿದಾಗ ಉದ್ಯಮಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ