ಯುರೋಪ್‌ ಮಾದರಿ ಕಸದ ವಿಲೇ !

ಪ್ರಥಮ ಹಂತದಲ್ಲಿ 30 ಕಡೆಗಳಲ್ಲಿ ಭೂಗತ ಕಸದತೊಟ್ಟಿಗಳನ್ನು ನಿರ್ಮಾಣ ಮಾಡುವದು.

Team Udayavani, Oct 25, 2021, 9:39 PM IST

ಯುರೋಪ್‌ ಮಾದರಿ ಕಸದ ವಿಲೇ !

ಬೆಳಗಾವಿ: ಯುರೋಪ್‌ ಮಾದರಿಯ ಅತ್ಯಾಧುನಿಕ ಕಸ ಸಂಗ್ರಹಣೆ ವ್ಯವಸ್ಥೆ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಬೆಳಗಾವಿ ನಗರದಲ್ಲಿ ಜಾರಿಯಾಗುತ್ತಿದೆ. ಈ ಮೂಲಕ ಬೆಳಗಾವಿ ಹೈಟೆಕ್‌ ನಗರವಾಗುವ ನಿಟ್ಟಿನಲ್ಲಿ ಮತ್ತೂಂದು ದಿಟ್ಟ ಹೆಜ್ಜೆಯಿಟ್ಟಿದೆ. ಬೆಳಗಾವಿ ನಗರ ಅದರಲ್ಲೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ದಿನಕ್ಕೊಂದು ಹೊಸ ವಿಶಿಷ್ಟ ಯೋಜನೆಗಳನ್ನು ಅಳವಡಿಸುತ್ತಿರುವ ಶಾಸಕ ಅಭಯ ಪಾಟೀಲ ಈ ವಿನೂತನ ಯೋಜನೆ ಮೂಲಕ ಪ್ರಗತಿಯ ಹಾದಿಯಲ್ಲಿ ಹೊಸ ಹೆಜ್ಜೆ ತುಳಿದಿದ್ದಾರೆ.

ಈಗಾಗಲೇ ದಕ್ಷಿಣ ಕ್ಷೇತ್ರದಲ್ಲಿ ಹೈಟೆಕ್‌ ಡಿಜಿಟಲ್‌ ಲೈಬ್ರರಿ, ಬುದ್ಧಿಮಾಂದ್ಯ-ವಿಕಲ ಚೇತನ ಮಕ್ಕಳ ಮನರಂಜನೆಗೆ ವಿಶೇಷ ಪಾರ್ಕ್‌, ತಿನಿಸು ಕಟ್ಟೆ (ಖಾವು ಕಟ್ಟಾ) ನಿರ್ಮಾಣ ಜೊತೆಗೆ ವ್ಯಾಕ್ಸಿನ್‌ ಡಿಪೋ ಆವರಣದಲ್ಲಿ ಎವಿಯೇಶನ್‌ ಸೆಂಟರ್‌ ಮತ್ತು ನಾಥ ಪೈ ಸರ್ಕಲ್‌ ಬಳಿಯ ರಸ್ತೆಯ ಡಿವೈಡರ್‌ ಜಾಗದಲ್ಲಿ ಬೀದಿ ವ್ಯಾಪಾರಿಗಳಿಗೆ ವಿಶೇಷ ಮಳಿಗೆ ನಿರ್ಮಾಣ ಸೇರಿದಂತೆ ಹತ್ತು ಹಲವು ವಿಶೇಷ ಸವಲತ್ತುಗಳನ್ನು ತಂದು ಕೊಟ್ಟಿರುವ ಅಭಯ ಪಾಟೀಲ ಈಗ ಸ್ವತ್ಛತೆಯ ವಿಚಾರದಲ್ಲೂ ಹೈಟೆಕ್‌ ಮಾದರಿ ಅನುಸರಿಸಲು ಮುಂದಾಗಿದ್ದಾರೆ.

ನಗರದಲ್ಲಿ ಕಸದ ಸಂಗ್ರಹ ಹಾಗೂ ವಿಲೇವಾರಿ ಸಮಸ್ಯೆ ಹೊಸದೇನಲ್ಲ. ಸಾರ್ವಜನಿಕರು ಪದೇ ಪದೇ ಕಸದ ವಿಲೇವಾರಿ ಸಮಸ್ಯೆ ಬಗ್ಗೆ ದೂರು ನೀಡುತ್ತಿದ್ದರೂ ಅದಕ್ಕೆ ಪರಿಹಾರ ಸಿಕ್ಕಿಲ್ಲ. ಮಹಾನಗರಪಾಲಿಕೆ ಇದಕ್ಕಾಗಿ ಕೋಟಿಗಟ್ಟಲೇ ಹಣ ವೆಚ್ಚ ಮಾಡುತ್ತಿದ್ದರೂ ಸಮಸ್ಯೆಹಾಗೆಯೇ ಉಳಿದಿದೆ. ಪಾಲಿಕೆಯ ನಿರ್ಲಕ್ಷದಿಂದ ಬೇಸತ್ತಿದ್ದ ಪಾಟೀಲ ಸ್ವತಃ ಪಾಲಿಕೆ ಆಯುಕ್ತರ ಮನೆಯ ಮುಂದೆ ಕಸ ಚೆಲ್ಲಿ ಪ್ರತಿಭಟನೆ ವ್ಯಕ್ತಪಡಿಸಿದ್ದರು. ಶಾಸಕರ ಈ ಕ್ರಮ ಭಾರೀ ಸುದ್ದಿಮಾಡಿತ್ತು.

ಪಾಲಿಕೆಯಲ್ಲಿ ಮೊದಲೇ ಸಿಬ್ಬಂದಿಗಳ ಕೊರತೆ ಇದೆ. ಇನ್ನೊಂದು ಕಡೆ ಕಸ ಸಂಗ್ರಹಣೆ ವಿಷಯದಲ್ಲಿ ಸಾರ್ವಜನಿಕರು ಹಾಗೂ ಪೌರ ಕಾರ್ಮಿಕರ ನಡುವೆ ಪರಸ್ಪರ ದೂರುಗಳಿವೆ. ಸಮರ್ಪಕ ಕಸ ವಿಲೇವಾರಿ ಆಗುತ್ತಿಲ್ಲ ಎಂಬು ದೂರು ಒಂದು ಕಡೆಯಾದರೆ ಸಾರ್ವಜನಿಕರು ಸರಿ ಯಾಗಿ ಸಹಕಾರ ನೀಡುತ್ತಿಲ್ಲ ಎಂಬ ಆರೋಪ ಸಹ ಇದೆ. ಈ ಎಲ್ಲ ಕಾರಣಗಳಿಂದ ಕಸದ ಸಮಸ್ಯೆ ಬಗೆಹರಿಯದೇ ಇರುವುದನ್ನು ಮನಗಂಡ ಅಭಯ ಪಾಟೀಲ ಈಗ ತಾವೇ ಹೊಸ ವ್ಯವಸ್ಥೆಯನ್ನು ಅಳವಡಿಸಲು ಮುಂದಾಗಿದ್ದಾರೆ.

ಅಂಡರ್‌ಗ್ರೌಂಡ್‌ ಹೈಡ್ರೋಲಿಕ್‌ ಕಸದ ತೊಟ್ಟಿಗಳನ್ನು ಅಳವಡಿಸುವ ಯೋಜನೆಯನ್ನು ತಮ್ಮ ಕ್ಷೇತ್ರದಲ್ಲಿ ಆರಂಭಿಸಲು ಸಿದ್ಧರಾಗಿದ್ದಾರೆ. ಈ ರೀತಿಯ ವ್ಯವಸ್ಥೆ ಭಾರತ ದೇಶದಲ್ಲೇ ಪ್ರಥಮ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ. ಒಟ್ಟು ಎರಡು ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಪ್ರಥಮ ಹಂತದಲ್ಲಿ 30 ಕಡೆಗಳಲ್ಲಿ ಭೂಗತ ಕಸದತೊಟ್ಟಿಗಳನ್ನು ನಿರ್ಮಾಣ ಮಾಡುವದು.

ಎರಡನೇ ಹಂತದಲ್ಲಿ 28 ಕಡೆ ಹಾಗೂ ಮೂರನೇ ಹಂತದಲ್ಲಿ 52 ಕಡೆಗಳಲ್ಲಿ ಇದರ ನಿರ್ಮಾಣ ಕಾರ್ಯ ನಡೆಯಲಿದೆ. ಎಲ್ಲ ಅಂದುಕೊಂಡಂತೆ ನಡೆದರೆ ಬರುವ 15 ದಿನಗಳಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಹಾಪುರದಲ್ಲಿ ಈ ವಿನೂತನ ವ್ಯವಸ್ಥೆಯ ಈ ಕಾರ್ಯ ಆರಂಭವಾಗಲಿದೆ. ಈ ಭೂಗತ ಹೈಡ್ರೋಲಿಕ್‌ ಕಸದತೊಟ್ಟಿಗಳಲ್ಲಿ ಶೇ.50ರಷ್ಟು ಕಸ ತುಂಬಿದರೆ ನೇರವಾಗಿ ಕಸ ವಿಲೇವಾರಿ ಮಾಡುವ ಕಾರ್ಮಿಕರಿಗೆ ಇದರ
ಸಂದೇಶ ಹೋಗುತ್ತದೆ. ನಂತರ ಶೇ.70ರಿಂದ 80 ರಷ್ಟು ಕಸ ತುಂಬಿದರೂ ಅದರ ವಿಲೇವಾರಿ ಆಗದಿದ್ದರೆ ಹಿರಿಯ ಅಧಿಕಾರಿಗಳಿಗೆ ಮತ್ತು ಶಾಸಕರಿಗೆ ಸಂದೇಶ ಹೋಗುವ ವ್ಯವಸ್ಥೆ ಮಾಡಲಾಗಿದೆ.

ಪ್ರತಿಶತ 100ರಷ್ಟು ಕಸ ತುಂಬಿದ ನಂತರವೂ ವಿಲೇವಾರಿ ಮಾಡದೇ ಹೋದರೆ ಆಗ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು, ವಾಹನ ಮಾಲೀಕರು ಹಾಗೂ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ದಂಡ ಆಕರಿಸಲಾಗುವದು ಎಂದು ಶಾಸಕ ಅಭಯ ಪಾಟೀಲ ವಿವರಿಸಿದರು. ಜನರಲ್ಲಿ ಈಗ ಸ್ವತ್ಛತೆಯ ಬಗ್ಗೆ ಜಾಗೃತಿ ಮೂಡುತ್ತಿದೆ. ಎಲ್ಲೆಂದರಲ್ಲಿ ಕಸ ಹಾಕಬಾರದು ಎಂಬುದು ಅವರಿಗೂ ಮನವರಿಕೆಯಾಗಿದೆ. ಈಗ ನಾವು ಅಳವಡಿಸುತ್ತಿರುವ ಹೈಡ್ರೋಲಿಕ್‌ ಕಸದ ತೊಟ್ಟಿಗಳಿಂದ ಇನ್ನಷ್ಟು ಅನುಕೂಲವಾಗಲಿದೆ.

ಜನರಿಗೂ ಸಹ ಇದರಲ್ಲಿ ಕಸ ಹಾಕಲು ಬಹಳ ಸುಲಭವಾಗಲಿದೆ. ನಾವು ಮಾಡುತ್ತಿರುವ ಈ ವಿನೂತನ ಯೋಜನೆಯ ಬಗ್ಗೆ ಕೇಂದ್ರದ ಸ್ಮಾಟ್‌ ಸಿಟಿ ಅಧಿಕಾರಿಗಳು ದೂರವಾಣಿ ಕರೆ ಮಾಡಿ ವಿಚಾರಿಸಿದ್ದಾರೆ ಎಂಬುದು ಅಭಯ ಪಾಟೀಲ ಅವರ ಹೆಮ್ಮೆಯ ಮಾತು. ಕಸದ ತೊಟ್ಟಿಯಲ್ಲಿ ಒಂದು ಟನ್‌ ಕಸ ಸಂಗ್ರಹಿಸುವ ಸಾಮರ್ಥ್ಯ ಇದೆ. ಇದನ್ನು ಸಂಗ್ರಹಿಸಿ ತೆಗೆದುಕೊಂಡು ಹೋಗುವ ವಾಹನವನ್ನು 45 ಲಕ್ಷ ರೂ. ವೆಚ್ಚದಲ್ಲಿ
ಖರೀದಿಸಲಾಗಿದ್ದು ಮುಂದಿನ ವಾರ ಬೆಳಗಾವಿಗೆ ಈ ವಾಹನ ಬರಲಿದೆ. ಭೂಗತ ಹೈಡ್ರೋಲಿಕ್‌ ಕಸದ ತೊಟ್ಟಿಗಳನ್ನು ನಿರ್ಮಾಣ ಮಾಡುವ ಕಾರ್ಯ ಆರಂಭವಾಗಿದ್ದು ಶಹಾಪುರದಲ್ಲಿ ಈ ವಾರದಲ್ಲಿ ಇದರ ಕೆಲಸ ಪೂರ್ಣಗೊಳ್ಳಲಿದೆ.

ಕೇಶವ ಆದಿ

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.