ವೈದ್ಯ ವೃತ್ತಿಯಲ್ಲಿ ಅತಿಯಾದ ವ್ಯಾಪಾರಿ ಮನೋಭಾವ; ಜಗದ್ಗುರು ಶಿವಾನಂದ ಸ್ವಾಮಿ

ಚಿಕಿತ್ಸೆ ಪಡೆದವರು ಅವರಿಗೆ ಕಾಳು-ಕಡಿ ಮತ್ತಿತರೆ ವಸ್ತುಗಳನ್ನು ನೀಡುತ್ತಿದ್ದರು.

Team Udayavani, Dec 8, 2021, 5:57 PM IST

ವೈದ್ಯ ವೃತ್ತಿಯಲ್ಲಿ ಅತಿಯಾದ ವ್ಯಾಪಾರಿ ಮನೋಭಾವ; ಜಗದ್ಗುರು ಶಿವಾನಂದ ಸ್ವಾಮಿ

ಬೆಳಗಾವಿ: ಪರಮ ಪವಿತ್ರವಾದ ವೈದ್ಯ ವೃತ್ತಿಯಲ್ಲಿ ಅತಿಯಾದ ವ್ಯಾಪಾರಿ ಮನೋಭಾವ ಕಂಡು ಬರುತ್ತದೆ. ಅಲ್ಲಿ ನಿಷ್ಕಲ್ಮಶವಾದ ಸೇವೆ ಕಡಿಮೆಯಾಗುತ್ತಿದೆ ಎಂದು ಗದುಗಿನ ಶಿವಾನಂದ ಮಠದ ಜಗದ್ಗುರು ಶಿವಾನಂದ ಸ್ವಾಮಿಗಳು ವಿಷಾದ ವ್ಯಕ್ತಪಡಿಸಿದರು . ನಗರದ ನಾಗನೂರು ರುದ್ರಾಕ್ಷಿಮಠದಲ್ಲಿ ಲಿಂ| ಡಾ| ಶಿವಬಸವ ಸ್ವಾಮೀಜಿಯವರ 132 ನೇ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ವೈದ್ಯಕೀಯ ವೃತ್ತಿ ಸಂಪೂರ್ಣ ವ್ಯಾಪಾರವಾಗಿದೆ. ಆರೋಗ್ಯ ಎನ್ನುವುದು ಮಾರಾಟದ ವಸ್ತುವಾಗಿದೆ. ಆರೋಗ್ಯ ಕ್ಷೇತ್ರ ಹಾಳಾಗಿ ಹೋಗಿದೆ. ಅಲ್ಲಿ ನ್ಯಾಯ-ನೀತಿಗಳು ಉಳಿದಿಲ್ಲ. ಇದು ಅತ್ಯಂತ ಕೆಟ್ಟ ಬೆಳವಣಿಗೆ ಎಂದರು.

ಈ ಹಿಂದೆ ವೈದ್ಯರಾದವರು ರೋಗಿಗಳ ಸೇವೆಯನ್ನು ದೇವರ ಸೇವೆಯೆಂದೇ ಮಾಡುತ್ತಿದ್ದರು. ಅವರು ನೀಡುವ ಚಿಕಿತ್ಸೆಗೆ ಹಣ ಪಡೆಯುತ್ತಿರಲಿಲ್ಲ. ಬದಲಾಗಿ ಚಿಕಿತ್ಸೆ ಪಡೆದವರು ಅವರಿಗೆ ಕಾಳು-ಕಡಿ ಮತ್ತಿತರೆ ವಸ್ತುಗಳನ್ನು ನೀಡುತ್ತಿದ್ದರು. ಆದರೀಗ ವ್ಯವಸ್ಥೆ ಸಂಪೂರ್ಣ ಬದಲಾಗಿದೆ. ವೈದ್ಯಕೀಯ ವೃತ್ತಿಗೆ ಅಧ್ಯಾತ್ಮದ ಸ್ಪರ್ಶ ನೀಡುವ ಅಗತ್ಯವಿದೆ ಎಂದರು.

ನಾಗನೂರು ರುದ್ರಾಕ್ಷಿಮಠದ ಪ್ರಸಾದ ನಿಲಯಗಳ ಹಳೆಯ ವಿದ್ಯಾರ್ಥಿಗಳ ಸಮಾವೇಶ ಸಂದರ್ಭ ಅತ್ಯಂತ ಸಂತಸದ ವಿಷಯ. ನಾಗನೂರು ರುದ್ರಾಕ್ಷಿಮಠವೆಂಬ ಮಹಾವೃಕ್ಷದ ಬುಡದಲ್ಲಿ ಬೆಳೆದವರು ಈ ವೃಕ್ಷವನ್ನು ಮರೆಯಬಾರದು. ಅದನ್ನು ನೋಡುವುದಕ್ಕಾದರೂ ವರ್ಷಕ್ಕೊಮ್ಮೆ ಬರಬೇಕು. ವೃಕ್ಷದ ಅಂಗಳ ಕಾಣಲು ಬರಬೇಕು. ಹಳೆಯ ಮಿತ್ರರನ್ನು ಕಣ್ತುಂಬಿಸಿಕೊಳ್ಳಲು ಬರಬೇಕು ಎಂದರು.

ನೇತೃತ್ವ ವಹಿಸಿದ್ದ ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಆಶೀರ್ವಚನ ನೀಡಿ, ವೈದ್ಯರಾದವರು ಅಧ್ಯಾತ್ಮ ಚಿಂತನೆಯ ಜತೆಗೆ ರೋಗಿಗಳನ್ನು ಉಪಚರಿಸುವ ಮನಸ್ಥಿತಿ ಹೊಂದಿದಾಗ ಮಾತ್ರ ಅವರಿಂದ ಅತ್ಯುತ್ತಮ ಸೇವೆ ಸಮಾಜಕ್ಕೆ ಸಾಧ್ಯ ಎಂದರು. ಬೆಳಗಾವಿ ರುದ್ರಾಕ್ಷಿಮಠದ ಪ್ರಸಾದ ನಿಲಯದ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪೊ|ಎಂ.ಆರ್‌. ಉಳ್ಳೇಗಡ್ಡಿ ಅಧ್ಯಕ್ಷತೆ ವಹಿಸಿದ್ದರು. ರುದ್ರಾಕ್ಷಿಮಠದ ಪೀಠಾಧಿಪತಿ ಡಾ| ಅಲ್ಲಮಪ್ರಭು ಸ್ವಾಮಿಗಳು, ಅಥಣಿಯ ಪ್ರಭು ಚನ್ನಬಸವ ಶ್ರೀಗಳು ಇದ್ದರು. ಮಹಾಂತದೇವರು, ಪ್ರೊ| ಸಿ.ಜಿ. ಮಠಪತಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.