ಚನ್ನಮ್ಮನ ನಾಡಿನಲ್ಲಿ ಸಂಭ್ರಮ

ತಾಯಿ ರಾಣಿ ಚನ್ನಮ್ಮಾಜಿಗೆ ನಿಜವಾದ ಗೌರವ ಕೊಡುವ ಕೆಲಸ ಇದಾಗಿದೆ.

Team Udayavani, Nov 9, 2021, 6:41 PM IST

ಚನ್ನಮ್ಮನ ನಾಡಿನಲ್ಲಿ ಸಂಭ್ರಮ

ಚನ್ನಮ್ಮನ ಕಿತ್ತೂರ: ವೀರ ರಾಣಿ ಕಿತ್ತೂರು ಚನ್ನಮ್ಮ, ಕಿತ್ತೂರು ನಾಡಿನ ವೀರರ ಸ್ಮರಣೆಯಲ್ಲಿ ರಾಜ್ಯ ಸರಕಾರ ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕವನ್ನಾಗಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಿದ ಹಿನ್ನೆಲೆಯಲ್ಲಿ ಕಿತ್ತೂರಿನ ಜನತೆ ಸಂತಸದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವವನ್ನು ಆಚರಿಸಿದರು.

ಇಲ್ಲಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಸ್ವಯಂಸ್ಫೂರ್ತಿಯಿಂದ ಸೇರಿದ ಸಾವಿರಾರು ಜನರು ವಾದ್ಯಗಳನ್ನು ನುಡಿಸುತ್ತ ಪಟಾಕಿ ಸಿಡಿಸಿದ್ದಲ್ಲದೇ ತಾಯಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಕಿತ್ತೂರು ಕರ್ನಾಟಕಕ್ಕೆ ಜೈಘೋಷ ಹಾಕಿದರು. ಚನ್ನಮ್ಮ ವರ್ತುಳದಲ್ಲಿ ದೀಪಗಳ ಮೂಲಕ ಕಿತ್ತೂರು ಕರ್ನಾಟಕ ಎಂದು ಬರೆದು ಪಕ್ಷಾತೀತವಾಗಿ ಸಂತಸ ಹಂಚಿಕೊಂಡು ಕುಣಿದು ಕುಪ್ಪಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಮಹಾಂತೇಶ ದೊಡಗೌಡರ ಅವರಿಗೆ ಜೈಕಾರ ಹಾಕುವ ಮೂಲಕ ಅಭಿಮಾನಿಗಳು ಸಂಭ್ರಮಿಸಿದರು.

ರಾಣಿ ಚನ್ನಮ್ಮಾಜಿ ಪ್ರತಿಮೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಶಾಸಕ ಮಹಾಂತೇಶ ದೊಡಗೌಡರ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿ ಶ್ರೀ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ಕಿತ್ತೂರಲ್ಲಿ ಇಂದು ದಿಪಾವಳಿ ಹಬ್ಬ ಆಚರಿಸಿದಂತಿದೆ. ನಾಡಿನ ಗೌರವದ ದೀಪಾವಳಿ ಹಬ್ಬ ಇದಾಗಿದೆ. ಪ್ರಥಮ ಸ್ವಾತಂತ್ರ್ಯ ಹೋರಾಟದ ತಾಯಿ ರಾಣಿ ಚನ್ನಮ್ಮಾಜಿಗೆ ನಿಜವಾದ ಗೌರವ ಕೊಡುವ ಕೆಲಸ ಇದಾಗಿದೆ. ಶಾಸಕ ಮಹಾಂತೇಶ ದೊಡಗೌಡರ ಪ್ರಯತ್ನದ ಫಲವಾಗಿ ಈ ಘೋಷಣೆಯಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟದ ಎಲ್ಲ ಸಚಿವರಿಗೂ ಅಭಿನಂದನೆಗಳು. ಅಲ್ಲದೆ ಸರಕಾರದಿಂದ ಇಂದೇ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ರೂ.10 ಕೋಟಿ ಅನುದಾನವು ಸಹ ಬಿಡುಗಡೆಯಾಗಿದೆ. ಚನ್ನಮ್ಮಾಜಿಗೆ ನಿಜವಾದ ಗೌರವವನ್ನು ನಮ್ಮ ಸರಕಾರ ನೀಡಿದೆ. ಈ ಸಂತೋಷವನ್ನು ಪ್ರತಿ ವರ್ಷ ಆಚರಣೆ ಮಾಡಬೇಕು ಎಂದು ಹೇಳಿದರು.

ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ, ಇದು ಕಿತ್ತೂರು ಕರ್ನಾಟಕದ ಘೋಷಣೆಗೆ ಸೀಮಿತ ಮಾಡುವುದಿಲ್ಲ. ಕಿತ್ತೂರು ಕರ್ನಾಟಕದ ಹೆಸರಿನಲ್ಲಿ ವಿಶೇಷವಾಗಿ ನಿಗಮ ಮಾಡುತ್ತೇನೆ. ಯೋಜನೆಯನ್ನು ಹಾಕುತ್ತೇನೆ. ವಿಶೇಷವಾದ ಅನುದಾನ ಬಿಡುಗಡೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ. ಚನ್ನಮ್ಮಾಜಿಯ ಮೇಲೆ ಅವರು ಹೊಂದಿರುವ ಅಪಾರ ಗೌರವದಿಂದ ಕಿತ್ತೂರು ನಾಡಿನ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಪಣ ತೊಟ್ಟಿದ್ದಾರೆ. ಅವರ ನೇತೃತ್ವದಲ್ಲಿ ಕಿತ್ತೂರು ನಾಡಿನ ಗತವೈಭವ ಮರುಕಳಿಸಲಿದೆ ಎಂದು ಹೇಳಿದರು.

ತಹಶೀಲ್ದಾರ್‌ ಸೋಮಲಿಂಗ ಹಾಲಗಿ, ಬಿಜೆಪಿ ಮಂಡಳ ಅಧ್ಯಕ್ಷ ಬಸವರಾಜ ಪರವಣ್ಣವರ, ಸಂದೀಪ ದೇಶಪಾಂಡೆ, ಉಳವಪ್ಪ ಉಳ್ಳಾಗಡ್ಡಿ, ನಿಜಲಿಂಗಯ್ಯ ಹಿರೇಮಠ, ಜಗದೀಶ ವಸ್ತ್ರದ, ಬಸನಗೌಡ ಕೊಳದೂರ, ವಿಶ್ವನಾಥ ಬಿಕ್ಕಣ್ಣವರ, ಡಿ.ಆರ್‌.ಪಾಟೀಲ, ಮಂಜುಳಾ ದೊಡಗೌಡರ, ಸರಸ್ವತಿ ಬೆ„ಬತ್ತಿ, ಉಮಾದೇವಿ ಬಿಕ್ಕಣ್ಣವರ, ಎಸ್‌.ಆರ್‌.ಪಾಟೀಲ, ಮುಖ್ಯಾಧಿಕಾರಿ ಪ್ರಕಾಶ ಮಠದ, ಆರ್‌.ಐ ಬಿ.ವಿ.ಬಡಗಾಂವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.