“ಜಲಶಕ್ತಿ’ಯೋಜನೆ ರಾಜ್ಯಕ್ಕೆ ವಿಸ್ತರಣೆ: ಸಿಎಂ ಬಸವರಾಜ ಬೊಮ್ಮಾಯಿ
Team Udayavani, Mar 1, 2022, 6:25 AM IST
ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ’ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಬದ್ಧವಿದೆ. ಮೊದಲು ಬೆಳಗಾವಿಯಲ್ಲಿ ಆರಂಭಿಸಿ ಅನಂತರ ರಾಜ್ಯಕ್ಕೆ ಇದನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ನಗರದಲ್ಲಿ ಸೋಮವಾರ 3,972 ಕೋಟಿ ರೂ. ವೆಚ್ಚದ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಿತ್ತೂರಿನಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸಂಪೂರ್ಣ ಜಲಶಕ್ತಿ ಯೋಜನೆ ಅನುಷ್ಠಾನಗೊಳಿಸಲಾಗುವುದು. ಆ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ಒದಗಿಸಲಾಗುವುದು. ರಾಜ್ಯದ ಎಲ್ಲ ಹೆದ್ದಾರಿಗಳ ಪಕ್ಕದಲ್ಲೂ ಇದನ್ನು ಸಂಪೂರ್ಣ ಅನುಷ್ಠಾನ ಮಾಡಲಾಗುವುದು ಎಂದು ಪ್ರಕಟಿಸಿದರು.
ಇದನ್ನೂ ಓದಿ:ರೈತರ ಸಹಮತಿ ದೊರೆತ 2 ತಿಂಗಳಲ್ಲಿ ಪಿಆರ್ ಆರ್ ಗೆ ಚಾಲನೆ: ಎಸ್.ಆರ್.ವಿಶ್ವನಾಥ್
ಧಾರ್ಮಿಕ ಕ್ಷೇತ್ರಗಳ ಜೋಡಣೆ: ಬೊಮ್ಮಾಯಿ
ಮಹಾರಾಷ್ಟ್ರದ ಪಂಢರಪುರ, ಶಿರಡಿ ಮತ್ತಿತರ ಧಾರ್ಮಿಕ ಕ್ಷೇತ್ರಗಳನ್ನು ಕರ್ನಾಟಕದ ವಿವಿಧ ಧಾರ್ಮಿಕ ಸ್ಥಳಗಳ ಜತೆಗೆ ಜೋಡಿಸಲು ಸಚಿವ ಗಡ್ಕರಿ ವಿನೂತನ ಯೋಜನೆ ರೂಪಿಸಿದ್ದಾರೆ. ಎಲ್ಲ ಸಂಸದರು ತಮ್ಮ ವ್ಯಾಪ್ತಿಯ ಹೆದ್ದಾರಿಗಳು ಮತ್ತಿತರ ರಸ್ತೆ ಅಭಿವೃದ್ಧಿಗೆ ದುಂಬಾಲು ಬೀಳುವ ಮೂಲಕ ಇಡೀ ರಾಜ್ಯಕ್ಕೆ ಅತ್ಯುತ್ತಮ ಯೋಜನೆ ತಂದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ನೆರವಿನಿಂದ ರಾಜ್ಯಕ್ಕೆ ಹಲವಾರು ಯೋಜನೆಗಳು ಲಭಿಸಿವೆ ಎಂದು ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ