ಕರ್ನಾಟಕದ ಕೊನೆಯ ಊರಿನಲ್ಲಿ ಅಕ್ಷರ ಜಾತ್ರೆ
Team Udayavani, Jan 30, 2021, 3:40 PM IST
ಬೆಳಗಾವಿ: ಕರ್ನಾಟಕದ ಕೊನೆಯ ಊರು, ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ, ಕೃಷ್ಣಾನದಿಯ ತಟದಲ್ಲಿರುವ ಕಾಗವಾಡ ಅಕ್ಷರ ಜಾತ್ರೆಗೆ ಸಿಂಗಾರಗೊಂಡಿದೆ. ಜ. 30, 31ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ನಡೆದಿರುವ ಸಂಘರ್ಷದ ಮಧ್ಯೆಯೇ ಗಡಿ ಭಾಗದಲ್ಲಿ ಕನ್ನಡ
ಅಕ್ಷರ ಜಾತ್ರೆ ನಡೆಯುತ್ತಿರುವುದು ವಿಶೇಷತೆ ಪಡೆದುಕೊಂಡಿದ್ದು, ಗಡಿ ಭಾಗದಲ್ಲಿ ಕನ್ನಡದ ಅಸ್ಮಿತೆಗೆ ಈ ಸಮ್ಮೇಳನ ಹೊಸ ರೂಪ ಕೊಡುವುದರಲ್ಲಿ ಮುಖ್ಯ ಪಾತ್ರ ವಹಿಸಿದೆ. ಪದೇ ಪದೇ ಕನ್ನಡಿಗರನ್ನು ಕೆರಳಿಸುತ್ತಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಸಮ್ಮೇಳನ ಮೂಲಕ ಎಚ್ಚರಿಕೆ ನೀಡುವ ವಿಶ್ವಾಸ ಕನ್ನಡಿಗರಲ್ಲಿದೆ. ಶೆ„ಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿತಮ್ಮದೇ ಆದ ಛಾಪು ಮೂಡಿಸಿರುವ ಕೆಎಲ್ಇಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ.
ಗಡಿ ಭಾಗದ ಕನ್ನಡ ಶಾಲೆ,ಕನ್ನಡ ಅಳಿವು-ಉಳಿವು ಬಗ್ಗೆ ಸರ್ವಾಧ್ಯಕ್ಷರು ನೀಡುವ ಸಂದೇಶದ ಮಹತ್ವ ಪಡೆದುಕೊಂಡಿದೆ. ತಳಿರು-ತೋರಣಗಳು, ಕನ್ನಡ ಧ್ವಜಗಳಿಂದ ಕಾಗವಾಡ ಸಿಂಗಾರಗೊಂಡಿದೆ. ಅಕ್ಷರ ಜಾತ್ರೆಗೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಕನ್ನಡ ಧ್ವಜಗಳು ರಾರಾಜಿಸುತ್ತಿವೆ. ಸಮ್ಮೇಳನಕ್ಕೆ ಸ್ವಾಗತ ಕೋರುವ ಕಮಾನು, ಬ್ಯಾನರ್, ಪೋಸ್ಟರ್ಗಳಿಂದ ಇಡೀ ಕಾಗವಾಡ ಸಿಂಗಾರಗೊಂಡಿದೆ.
ಇದೇ ಊರಿನಿಂದ ಮಹಾರಾಷ್ಟ್ರಕ್ಕೆ ಹೋಗುವ ಮಾರ್ಗ ಇದ್ದು, ಇಲ್ಲಿ ದೊಡ್ಡ ಕಮಾನು ಹಚ್ಚಲಾಗಿದೆ. ಜ. 30ರಂದು ಬೆಳಗ್ಗೆ 8 ಗಂಟೆಗೆ ಸಮ್ಮೇಳನ ಧ್ವಜಾರೋಹಣ ನಡೆಯಲಿದ್ದು, ರಾಷ್ಟ್ರಧ್ವಜವನ್ನು ಕಾಗವಾಡದ ಮಾಜಿ ಯೋಧ ಬಾಳಗೌಡ ಬಸಗೌಡ ಪಾಟೀಲ ನೆರವೇರಿಸಲಿದ್ದಾರೆ. ನಾಡಧ್ವಜವನ್ನು ಕಾಗವಾಡ ತಹಶೀಲ್ದಾರ ಪರಿಮಳಾ ದೇಶಪಾಂಡೆ ನೆರವೇರಿಸಲಿದ್ದಾರೆ. ಕಸಾಪ ಧ್ವಜವನ್ನು ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲಾ ಮೆಟಗುಡ್ ನೆರವೇರಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಕನ್ನಡ ಮಾತೆ ಭುವನೇಶ್ವರಿ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ.
ಸಮ್ಮೇಳನವನ್ನು ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮನು ಬಳಿಗಾರ್ ಉದ್ಘಾಟಿಸಲಿದ್ದಾರೆ. ಉಗಾರ ಖುರ್ದನ ಶ್ರೀ ಮಲ್ಲಿಕಾರ್ಜುನ ಗುರುದೇವಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿ, ಮುರಗೋಡ ಶ್ರೀ ಮಹಾಂತ ದುರದುಂಡೀಶ್ವರ ಮಠದ ಶ್ರೀ ನೀಲಕಂಠೇಶ್ವರ ಸ್ವಾಮೀಜಿ, ಕಾಗವಾಡ ಮಲ್ಲಿಕಾರ್ಜುನ ಗುರುದೇವಾಶ್ರಮದ ಶ್ರೀ ಯತೀಶ್ವರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಚಿವ ಸಚಿವ ಶ್ರೀಮಂತ ಪಾಟೀಲ ಅಧ್ಯಕ್ಷತೆ ವಹಿಸುವರು.
ಪುಸ್ತಕ ಮಳಿಗೆ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ. ಸಮ್ಮೇಳನ ಸಂಚಿಕೆ ಹಾಗೂ ಗ್ರಂಥಗಳನ್ನು ಸಂಸದ ಅಣ್ಣಾಸಾಹೇಬ ಜೊಲ್ಲೆ, ಉತ್ತರ ಕನ್ನಡ ಸಂಸದ ಅನಂತ ಕುಮಾರ್ಹೆಗಡೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಬಿಡುಗಡೆಗೊಳಿಸುವರು.
ಅಖೀಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಉತ್ತಮ ಕಾಂಬಳೆ, ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸೇರಿದಂತೆ ಮುಖಂಡರು, ಸಾಹಿತಿಗಳು ಆಗಮಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮೊದಲನೇ ಗೋಷ್ಠಿ ಗಡಿನಾಡ ಚಿಂತನೆ ನಡೆಯಲಿದ್ದು, ಅಥಣಿ ಮೋಟಗಿಮಠದ ಶ್ರೀ ಪ್ರಭುಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಡಾ. ಎಚ್.ಐ. ತಿಮ್ಮಾಪುರ ಅಧ್ಯಕ್ಷತೆ ವಹಿಸುವರು. ಕನ್ನಡ ಮರಾಠಿ ಭಾಷಾ ಬಾಂಧವ್ಯ ಕುರಿತು ಡಾ. ಎ.ಜಿ. ಘಾಟಗೆ ಉಪನ್ಯಾಸ ನೀಡಲಿದ್ದಾರೆ. ಗಡಿಭಾಗದಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆ ಕುರಿತು ಸಾಹಿತಿ ಡಾ. ಸಂತೋಷ ಹಾನಗಲ್ ಉಪನ್ಯಾಸ ನೀಡಲಿದ್ದಾರೆ.
ಇದನ್ನೂ ಓದಿ:ಅಗ್ನಿಶಾಮಕ ಠಾಣೆಯಿಂದ ಅಣಕು ಪ್ರದರ್ಶನ
ಹುಕ್ಕೇರಿ ಕಸಾಪ ತಾಲೂಕಾಧ್ಯಕ್ಷ ಪ್ರಕಾಶ ದೇಶಪಾಂಡೆ ಆಶಯ ನುಡಿಗಳನ್ನಾಡಲಿದ್ದಾರೆ. ಸಂಜೆ 4 ಗಂಟೆಗೆ ಸಮಕಾಲೀನ ಚಿಂತನೆ ಎರಡನೇ ಗೋಷ್ಠಿಯಲ್ಲಿ ಕವಲಗುಡ್ಡ ಹಣಮಾಪುರದ ಸಿದ್ಧಸಿರಿ ಸಿದ್ಧಾಶ್ರಮದ ಸಿದ್ದಯೋಗಿ ಅಮರೇಶ್ವರ ಮಹಾರಾಜರ ಸಾನ್ನಿಧ್ಯ ವಹಿಸಲಿದ್ದಾರೆ. ಪ್ರಾಧ್ಯಾಪಕ ಡಾ. ಎಸ್.ಎಸ್. ಅಂಗಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಾಹಿತ್ಯ ಕುರಿತು ಡಾ. ಎಚ್.ಬಿ. ಕೋಲಕಾರ ಉಪನ್ಯಾಸ ನೀಡಲಿದ್ದಾರೆ.
ಸಮಗ್ರ ಕೃಷಿ ಅಭಿವೃದ್ಧಿ ಚಿಂತನೆ ಕುರಿತು ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಎಂ.ಡಿ. ಡಾ. ಅಶೋಕ ಪಾಟೀಲಉಪನ್ಯಾಸ ನೀಡಲಿದ್ದಾರೆ. ಡಾ. ದೇವಿಕಾ ನಗರಕರ ಆಶಯ ನುಡಿಗಳನ್ನಾಡಲಿದ್ದಾರೆ. ಸಂಜೆ 6 ಗಂಟೆಗೆ ಮನೋಹರ ಕೊಕಟನೂರ ಮತ್ತು ದತ್ತಾತ್ರೇಯ ಜೋಶಿ ಹಾಗೂ ಸಂಗಡಿಗರು ಹಾಗೂ ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಭೈರೋಬಾ ಕಾಂಬಳೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್