ಬೆಳಗಾವಿಯಲ್ಲಿ ಕುಟುಂಬ ರಾಜಕಾರಣ ಬಲು ಗಟ್ಟಿ


Team Udayavani, Mar 17, 2023, 6:43 AM IST

ಬೆಳಗಾವಿಯಲ್ಲಿ ಕುಟುಂಬ ರಾಜಕಾರಣ ಬಲು ಗಟ್ಟಿ

ಬೆಳಗಾವಿ: ಒಬ್ಬರು ಎಂಟು ಬಾರಿ ಶಾಸಕರು. ಮತ್ತೂಬ್ಬರು ಆರು ಬಾರಿ. ಇನ್ನೊಬ್ಬರು ಐದು ಸಲ, ಅನಂತರ ನಾಲ್ಕು, ಮೂರು. ಹೀಗೆ ದಾಖಲೆಯ ಗೆಲುವಿನ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಬದಲಾವಣೆಗೆ ಅವಕಾಶ ಇಲ್ಲದಷ್ಟು ಬೆಳೆದಿದ್ದಾರೆ ಈ ನಾಯಕರು.

ಇಂಥ ಅಚ್ಚರಿಯ ರಾಜಕಾರಣ ಬೆಳಗಾವಿಯಲ್ಲಿ ಮಾತ್ರ ಕಾಣಲು ಸಾಧ್ಯ. ಇಲ್ಲಿ ಕುಟುಂಬ ರಾಜ ಕಾರಣ, ವಂಶ ಪಾರಂಪರ್ಯ ಆಡಳಿತ ಮತ್ತು ಪಾಳೆ ಗಾರಿಕೆ ಸಂಸ್ಕೃತಿ ಇದೆ. ಹೀಗಾಗಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಬಿಜೆಪಿ ಹೊಸ ಮುಖಗಳನ್ನು ಕಣಕ್ಕಿಳಿಸಿ ಪ್ರಯತ್ನ ಮಾಡುವ ಸಾಹಸಕ್ಕೆ ಹೋಗೇ ಇಲ್ಲ. ಜೆಡಿಎಸ್‌ ಮಾಡಿದರೂ ಅದಕ್ಕೆ ಫಲ ಸಿಕ್ಕಿಲ್ಲ.

ಬಲಾಡ್ಯ ಕುಟುಂಬಗಳ ಹಿಡಿತದಲ್ಲಿ ಜಿಲ್ಲೆಯ ರಾಜಕಾರಣ ಇದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ರಾಜಕೀಯವಾಗಿ ಮೊದಲಿಂದಲೂ ಬಹಳ ಪ್ರಭಾವಿ ಮತ್ತು ಪ್ರಾಬಲ್ಯದ ಜಿಲ್ಲೆ ಎಂಬ ಹೆಗ್ಗಳಿಕೆ ಹೊಂದಿರುವ ಬೆಳ ಗಾವಿಯಲ್ಲಿ ಹಿರಿಯ ರಾಜಕಾರಣಿಗಳದ್ದೇ ಕಾರು ಬಾರು. 1957ರಿಂದಲೇ ಈ ಪರಂಪರೆ ಬೆಳೆದು ಬಂದಿದೆ. ಒಂದೊಂದು ವಿಧಾನಸಭಾ ಕ್ಷೇತ್ರವನ್ನು ಸತತ ನಾಲ್ಕೈದು ಬಾರಿ ಪ್ರತಿನಿಧಿಸಿದ ಈ ರಾಜ ಕಾರಣಿಗಳು ಬೇರೆಯವರಿಗೆ ಅವಕಾಶ ಮಾಡಿಕೊಟ್ಟಿದ್ದು ಬಹಳ ಕಡಿಮೆ. ಆಧಿಕಾರ ಮತ್ತು ಅವಕಾಶ ಯಾವಾಗಲೂ ತಮ್ಮ ಸುತ್ತಲೇ ಗಿರಕಿ ಹೊಡೆಯಬೇಕು ಎಂಬುದು ಇವರ ಉದ್ದೇಶ. ಜಿಲ್ಲೆಯ ಒಂದೆರಡು ಕ್ಷೇತ್ರಗಳನ್ನು ಹೊರತುಪಡಿಸಿ­ದರೆ ಉಳಿದ ಕ್ಷೇತ್ರಗಳಲ್ಲಿ ಈ ಪರಂಪರೆ ಕಾಣುತ್ತದೆ.

1957 ಹಾಗೂ 60ರ ದಶಕದ ಚುನಾವಣೆಗಳಲ್ಲಿ ರಾಯಬಾಗದ ಹುಲಿ ಎಂದೇ ಖ್ಯಾತರಾಗಿದ್ದ ವಿ.ಎಲ್‌.ಪಾಟೀಲ, ರಾಮದುರ್ಗದ ಸ್ವಾತಂತ್ರÂ ಹೋರಾಟಗಾರರಾದ ಮಹದೇವಪ್ಪ ಪಟ್ಟಣ, ಹುಕ್ಕೇರಿಯ ಕತ್ತಿ ಕುಟುಂಬ, ಬಿ.ಶಂಕರಾ ನಂದ, ಸವದತ್ತಿಯ ಮಾಮನಿ ಮತ್ತು ಬೈಲಹೊಂಗಲದ ಕೌಜಲಗಿ ಕುಟುಂಬ, ಚಿಕ್ಕೋಡಿಯ ಪ್ರಕಾಶ ಹುಕ್ಕೇರಿ ರಾಜಕೀಯವಾಗಿ ಬಹಳ ಮೆರೆದರು. ಅನಂತರ ಜಾರಕಿಹೊಳಿ ಸಹೋದರರು ಈ ರಾಜಕೀಯ ಪಾರುಪತ್ಯ ಗುಂಪಿಗೆ ಸೇರಿಕೊಂಡರು. ಇವತ್ತಿಗೂ ಬಹುತೇಕ ಕ್ಷೇತ್ರಗಳಲ್ಲಿ ಈ ಕುಟುಂಬಗಳ ಸದಸ್ಯರು ತಮ್ಮ ಪ್ರಾಬಲ್ಯ ಹೊಂದಿದ್ದಾರೆ. ಒಂದೇ ಕುಟುಂಬದಲ್ಲಿ ಸಂಸದರು, ಶಾಸಕರಿದ್ದಾರೆ.

8 ಕ್ಷೇತ್ರಗಳಲ್ಲಿ ಪ್ರಾಬಲ್ಯ: ಜಿಲ್ಲೆಯ ಒಟ್ಟು 18 ವಿಧಾನಸಭಾ ಕ್ಷೇತ್ರಗಳ ಪೈಕಿ ಎಂಟು ಕ್ಷೇತ್ರಗಳಲ್ಲಿ ಮತದಾರರು ಮೇಲಿಂದ ಮೇಲೆ ಹಳೆಯ ಮುಖ ಗಳನ್ನೇ ನೋಡುತ್ತಿದ್ದಾರೆ. ಅದರಲ್ಲಿ ಕೆಲವರು ದಾಖಲೆಯ ಸಂಖ್ಯೆಯಲ್ಲಿ ವಿಧಾನಸಭೆ ಪ್ರತಿನಿ ಧಿಸಿದ್ದು ವಿಶೇಷ. ಇದರಿಂದ ಹೊಸ ಮುಖಗಳು ಈ ಕ್ಷೇತ್ರದಿಂದ ಸ್ಪರ್ಧಿಸುವ ಆಸೆಯನ್ನೇ ಕೈಬಿಟ್ಟಿದ್ದಾರೆ.

ಬಿಜೆಪಿಯ ಬಾಲಚಂದ್ರ ಜಾರಕಿಹೊಳಿ, ಲಕ್ಷ್ಮಣ ಸವದಿ, ದುರ್ಯೋಧನ ಐಹೊಳೆ, ಕಾಂಗ್ರೆಸ್‌ನ ಪ್ರಕಾಶ ಹುಕ್ಕೇರಿ, ಈಗ ಗಣೇಶ ಹುಕ್ಕೇರಿ, ರಮೇಶ್‌ಜಾರಕಿಹೊಳಿ, ಸತೀಶ್‌ ಜಾರಕಿಹೊಳಿ ಸತತ ಜಯ ದಾಖಲಿಸುತ್ತಲೇ ಬಂದಿದ್ದು ತಮ್ಮ ಕ್ಷೇತ್ರಗಳಲ್ಲಿ ಬೇರೆಯವರು ಟಿಕೆಟ್‌ಗೆ ಪ್ರಯತ್ನ ನಡೆಸದಂತೆ ಮಾಡಿದ್ದಾರೆ. ದಾಖಲೆಯ ಎಂಟು ಬಾರಿ­ ಶಾಸಕ ರಾಗಿ ಗಮನಸೆಳೆದಿದ್ದ ಉಮೇಶ ಕತ್ತಿ ಅನುಪಸ್ಥಿತಿ ಈ ಚುನಾವಣೆಯಲ್ಲಿ ಎದ್ದು ಕಾಣಲಿದೆ. ಆದರೆ ಅವರಿಂದ ತೆರವಾದ ಜಾಗಕ್ಕೆ ಬಿಜೆಪಿ ಕತ್ತಿ ಕುಟುಂಬಕ್ಕೇ ಮಣೆ ಹಾಕಲು ಉದ್ದೇಶಿಸಿದೆ. ಹೀಗಾಗಿ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಬೇರೆಯವರು ಪ್ರಯತ್ನ ಮಾಡದಂತಾಗಿದೆ.

ಚಿಕ್ಕೋಡಿಯ ಹಿರಿಯ ಅನುಭವಿ ಪ್ರಕಾಶ ಹುಕ್ಕೇರಿ ರಾಜಕಾರಣದಲ್ಲಿ ಬಹಳ ಪಳಗಿದವರು. ಐದು ಬಾರಿ ಶಾಸಕರಾಗಿದ್ದಲ್ಲದೆ ಅನಂತರ ಆದನ್ನು ಮಗನಿಗೆ ಬಿಟ್ಟುಕೊಟ್ಟು ಕಾಂಗ್ರೆಸ್‌ನಿಂದ ಸಂಸದ ರಾದ ಹೆಮ್ಮೆ. ಈಗ ವಿಧಾನ ಪರಿಷತ್‌ ಸದಸ್ಯರು. ಹೀಗಾಗಿ ಚಿಕ್ಕೋಡಿ ತಾಲೂಕಿನಲ್ಲಿ ಅಪ್ಪ ಮತ್ತು ಮಗನದ್ದೇ ದರ್ಬಾರ್‌. ಇವರಿಂದಾಗಿ ಕಾಂಗ್ರೆಸ್‌ನಲ್ಲಿ ಬೇರಾರೂ ಟಿಕೆಟ್‌ ಕೇಳದ ಸ್ಥಿತಿ ಇದೆ.

ಸವದಿ ಸಾಹುಕಾರ ರಾಜಕೀಯ: ಅಥಣಿ ಕ್ಷೇತ್ರದಿಂದ ಸತತ ಮೂರು ಬಾರಿ ಜಯ ಸಾಧಿಸಿ ಹ್ಯಾಟ್ರಿಕ್‌ ದಾಖಲೆ ಮಾಡಿರುವ ಬಿಜೆಪಿಯ ಲಕ್ಷ್ಮಣ ಸವದಿ ಕಳೆದ ಚುನಾವಣೆಯಲ್ಲಿ ಸೋತರೂ ವಿಧಾನ ಪರಿಷತ್‌ ಸದಸ್ಯರಾಗಿದ್ದಲ್ಲದೆ ಉಪಮುಖ್ಯ­ಮಂತ್ರಿಯೂ ಆದರು. ಈಗ ಮತ್ತೆ ವಿಧಾನಸಭೆ ಚುನಾವಣೆಗೆ ನಿಲ್ಲುವ ತಯಾರಿಯಲ್ಲಿದ್ದಾರೆ. ನಿಪ್ಪಾಣಿ­ಯಲ್ಲಿ ಅಣ್ಣಾಸಾಹೇಬ ಜೊಲ್ಲೆ ಸಂಸದ­ರಾಗಿದ್ದರೆ, ಅವರ ಪತ್ನಿ ಶಶಿಕಲಾ ಶಾಸಕರಾಗಿ, ಸಚಿವರಾಗಿದ್ದಾರೆ. ಈಗ ಮಗನನ್ನು ಚಿಕ್ಕೋಡಿಯಿಂದ ಕಣಕ್ಕಿಳಿಸುವ ತಯಾರಿಯಲ್ಲಿದ್ದಾರೆ. ಬೆಳಗಾವಿ ಗ್ರಾಮೀಣದಲ್ಲಿ ಕಾಂಗ್ರೆಸ್‌ನ ಲಕ್ಷ್ಮೀ ಹೆಬ್ಟಾಳ್ಕರ್‌ ಶಾಸಕರಾಗಿದ್ದರೆ ಅವರ ಸಹೋದರ ಚನ್ನರಾಜ ಎಂಎಲ್‌ಸಿ.

ಜಿಲ್ಲೆಯಲ್ಲಿ ಈ ಪ್ರಭಾವಿ ನಾಯುಕರ ವೈಯಕ್ತಿಕ ವರ್ಚಸ್ಸಿನ ಪರಿಣಾಮ ಪ್ರಮುಖ ಪಕ್ಷಗಳೇ ಇವರಿಗೆ ದುಂಬಾಲು ಬೀಳುವ ಸ್ಥಿತಿ ಇದೆ. ಈ ಹಿರಿಯ ಅನುಭವಿಗಳಿಗೆ ಪಕ್ಷಗಳು ಬೇಕಾಗಿಲ್ಲ ಬದಲಾಗಿ ಪಕ್ಷಗಳಿಗೆ ಇವರು ಅನಿವಾರ್ಯ. ರಾಷ್ಟ್ರೀಯ ಪಕ್ಷಗಳು ಸಹ ಹೊಸ ಮುಖ ಪರೀಕ್ಷಿಸುವ ಪ್ರಯತ್ನ ಮಾಡುತ್ತಿಲ್ಲ.

ಜಾರಕಿಹೊಳಿ ಸೋದರರ ದರ್ಬಾರ್‌
ಇನ್ನು ಗೋಕಾಕ ಮತ್ತು ಅರಭಾವಿ ತಾಲೂಕಿನಲ್ಲಿ ನಾಲ್ಕೈದು ಚುನಾವಣೆ­ಗಳಿಂದ ದವಲತ್ತು ಮುಂದುವರಿಸಿರುವ ರಮೇಶ್‌ ಹಾಗೂ ಬಾಲಚಂದ್ರ ಜಾರಕಿಹೊಳಿ ಬೇರೆಯವರಿಗೆ ಅವಕಾಶ ಸಿಗದಂತೆ ಮಾಡಿದ್ದಾರೆ. ಕುಟುಂಬ ರಾಜಕಾರಣ ಇವರಲ್ಲಿ ಬಲವಾಗಿ ಬೇರು ಬಿಟ್ಟಿದೆ. ರಮೇಶ ಸತತ ಆರು ಬಾರಿ ಗೆದ್ದು ದಾಖಲೆ ಮಾಡಿದರೆ, ಬಾಲಚಂದ್ರ ಜಾರಕಿಹೊಳಿ ಐದು ಬಾರಿ ವಿಧಾನಸಭೆ ಪ್ರವೇಶ ಮಾಡಿದ್ದಾರೆ. ಇವರ ಸಹೋದರ ಸತೀಶ ಜಾರಕಿಹೊಳಿ ಎರಡು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿದ್ದಲ್ಲದೆ ಅನಂತರ ಸತತ ಮೂರು ಬಾರಿ ಶಾಸಕರಾಗಿ, ಸಚಿವರಾದವರು. ಇನ್ನೊಬ್ಬ ಸಹೋದರ ಲಖನ್‌ ವಿಧಾನಪರಿಷತ್‌ ಸದಸ್ಯರು.

– ಕೇಶವ ಆದಿ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.