ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸ್ ವಶಕ್ಕೆ
Team Udayavani, Apr 10, 2021, 12:24 PM IST
ಬೆಳಗಾವಿ: ರೈತರು, ಸಾರಿಗೆ ನೌಕರರ ಜೊತೆಗೆ ಸಭೆ ನಡೆಸಲು ಬೆಳಗಾವಿಗೆ ಆಗಮಿಸಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಬೆಳಗಾವಿ ಕ್ಯಾಂಪ್ ಪೊಲೀಸರು ಶನಿವಾರ (10-4-2021) ಬೆಳಗ್ಗೆ ವಶಕ್ಕೆ ಪಡೆದುಕೊಂಡರು.
ಬೆಳಗಾವಿಯ ಸುವರ್ಣ ಸೌಧದ ಬಳಿಯ ಸಭಾಂಗಣದಲ್ಲಿ ರೈತರು, ಸಾರಿಗೆ ನೌಕರರ ಜೊತೆಗೆ ಸಭೆ ನಡೆಸಲು ಕೋಡಿಹಳ್ಳಿ ಆಗಮಿಸಿದ್ದರು. ನಗರದ ಹೊಟೇಲ್ ಒಂದರಲ್ಲಿ ತಂಗಿದ್ದಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಇದನ್ನೂ ಓದಿ: ಪಶ್ಚಿಮಬಂಗಾಳ: ಮತಗಟ್ಟೆ ಬಳಿ ಮತದಾರನಿಗೆ ಗುಂಡಿಕ್ಕಿ ಹತ್ಯೆ, ಬಿಜೆಪಿ-ಟಿಎಂಸಿ ಘರ್ಷಣೆ
ಸಭೆ ನಡೆಸಲು ಆಗಮಿಸಿದ್ದ ಅವರು ಅನುಮತಿ ಪಡೆದಿರಲಿಲ್ಲ. ಹೀಗಾಗಿ ಸಭೆಗೆ ತೆರಳುತ್ತಿದ್ದ ವೇಳೆ ಚನ್ನಮ್ಮ ವೃತ್ತದ ಬಳಿಯ ಮಿಲನ್ ಹೋಟೆಲ್ನಿಂದ ಹೊರ ಬರುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಆರ್ ಎಸ್ ಎಸ್ ವರಿಷ್ಠ ಮೋಹನ್ ಭಾಗವತ್ ಗೆ ಕೋವಿಡ್ ದೃಢ, ಆಸ್ಪತ್ರೆಗೆ ದಾಖಲು