ಹೆದ್ದಾರಿಯಲ್ಲಿ ರೈತರ ಹೋರಾಟದ ಕಿಚ್ಚು

ಕೇಂದ್ರದ ರೈತ ವಿರೋಧಿ ನೀತಿ ಖಂಡಿಸಿ ರಸ್ತೆ ತಡೆ ಚಳವಳಿ! ­ಪ್ರಧಾನಿ ಮೋದಿ ಮೇಲೆ ಆಕ್ರೋಶ

Team Udayavani, Feb 7, 2021, 5:45 PM IST

farmer protest

ಬೆಳಗಾವಿ: ರೈತರಿಗೆ ಮಾರಕವಾಗಿರುವ 3 ಕಾಯ್ದೆಗಳನ್ನು ಕೂಡಲೇ ವಾಪಸ್‌ ಪಡೆಯ ಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತರ ಸಂಘ,ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ತಡೆ ನಡೆಸಿದರು.

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಧರಣಿ ಕುಳಿತು ರಸ್ತೆ ತಡೆ ಚಳವಳಿ ನಡೆಸಿದ ಸುಮಾರು 50 ಜನ ಭಾರತೀಯ ಕೃಷಿಕ ಸಮಾಜ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಇನ್ನೊಂದು ಕಡೆ ಕೇಂದ್ರದ ಮಾಜಿ ಸಚಿವ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ಸಂಸ್ಥಾಪಕರಾದ ಬಾಬಾಗೌಡ ಪಾಟೀಲ ನೇತೃತ್ವದಲ್ಲಿ ನೂರಾರು ರೈತರು ಚಿಕ್ಕಬಾಗೇವಾಡಿ ಗ್ರಾಮದ ಬಳಿ ರಸ್ತೆ ತಡೆ ನಡೆಸಿ  ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದರು.

ನಿಪ್ಪಾಣಿಯಲ್ಲಿ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ತಡೆ ನಡೆಸಿ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ದೆಹಲಿಯಲ್ಲಿ ಕೊರೆಯುವ ಚಳಿಯಲ್ಲೂ ಸಾವಿರಾರು ರೈತರು ನಿರಂತರ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ರೈತರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮಧ್ಯಾಹ್ನ ಸುಮಾರು 12 ಗಂಟೆಗೆ ಧರಣಿ ಆರಂಭಿಸಿದ ಭಾರತೀಯ ಕೃಷಿಕ ಸಮಾಜ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು  ಪೊಲೀಸರು ವಶಕ್ಕೆ ಪಡೆದಿದ್ದರಿಂದ ಪ್ರತಿಭಟನೆ ಒಂದು ಗಂಟೆಯೊಳಗೆ ಮುಕ್ತಾಯ ಕಂಡಿತು. ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರನ್ನು ಬಂಧಿಸಿದ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ಇದಕ್ಕೂ ಮುನ್ನ ಮಾತನಾಡಿದ ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಅವರು ರೈತರಿಗೆ ಮಾರಕವಾಗಿರುವ ಭೂ ಸುಧಾರಣಾ ಕಾಯ್ದೆ. ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ತಕ್ಷಣ ಹಿಂದೆ ಪಡೆಯುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಭಾರತೀಯ ಕೃಷಿಕ ಸಮಾಜದ ಅಖೀಲಾ ಪಠಾಣ, ಕರ್ನಾಟಕ ರಾಜ್ಯ ರೈತ ಸಂಘದ ಜಯಶ್ರೀ ಗುರಣ್ಣವರ ಮೊದಲಾದವರು ಪಾಲ್ಗೊಂಡಿದ್ದರು.

ಮೋದಿ ಮೇಲೆ ವಿಶ್ವಾಸ ಇಲ್ಲ: ಚಿಕ್ಕಬಾಗೇವಾಡಿ ಬಳಿ ನಡೆದ ರೈತರ ಪ್ರತಿಭಟನೆಯಲ್ಲಿ ಮಾತನಾಡಿದ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ 18 ತಿಂಗಳ ಕಾಲ ಕಾನೂನುಗಳನ್ನು ಜಾರಿ ಮಾಡುವುದಿಲ್ಲ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಮೇಲೆ ನಮಗೆ ವಿಶ್ವಾಸ ಇಲ್ಲ. ಕಾರಣ ಅವರು ಕೊಟ್ಟ  ಯಾವ ಭರವಸೆಗಳೂ ಇದುವರೆಗೆ ಈಡೇರಿಲ್ಲ. ಹೀಗಾಗಿ ರೈತರಿಗೆ ಶಾಪವಾಗಿರುವ ಮೂರು  ಕಾನೂನುಗಳನ್ನು ವಾಪಸ್‌ ಪಡೆಯಬೇಕು. ಅದನ್ನು ಬಿಟ್ಟು ಬೇರೆ ಮಾತೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕಾನೂನುಗಳು ನಮ್ಮನ್ನು ದಾಸರನ್ನಾಗಿ ಮಾಡುತ್ತವೆ. ಇದರಿಂದ ನಾವು ರೈತರು ಮುಂದೆ ಅಂಬಾನಿ, ಅದಾನಿ ಅಂಥವರ ಮನೆಗಳಲ್ಲಿ ಆಳುಗಳಾಗಿ ದುಡಿಯಬೇಕಾಗುತ್ತದೆ. ಅವರ ವಾಹನಗಳ ಚಾಲಕರಾಗಿ ಕೆಲಸ ಮಾಡಬೇಕಾಗುತ್ತದೆ. ರೈತರ ಪರ ಕಾನೂನು ಮಾಡುವುದೇ ಇದ್ದರೆ  ಮೊದಲು ಅವು ಹಳ್ಳಿಗಳಲ್ಲಿ ಪಾಸ್‌ ಆಗಬೇಕು. ನಂತರ ಸಂಸತ್‌ನಲ್ಲಿ ಅನುಮೋದನೆ ನೀಡಬೇಕು ಎಂದು ಬಾಬಾಗೌಡ ಪಾಟೀಲ ಕೇಂದ್ರ ಸರಕಾರಕ್ಕೆ ಚಾಟಿ ಬೀಸಿದರು.

ಇದನ್ನೂ ಓದಿ :ಗಣತಿಯಲ್ಲಿ “ಬ್ರಾಹ್ಮಣ’ ನಮೂದಿಸಲು ಹಿಂಜರಿಕೆ ಬೇಡ

ಪ್ರಧಾನಿ ಮೋದಿ, ಕೇಂದ್ರದ ಕೃಷಿ ನರೇಂದ್ರಸಿಂಗ್‌ ತೋಮರ್‌ ಸೇರಿದಂತೆ ಬಿಜೆಪಿ ಯವರು ರೈತರ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ ನಮ್ಮದು ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂಬುದು ಒಂದೇ ಮಾತು. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಕೃಷಿ ಕಾನೂನು ಬಗ್ಗೆ ಖ್ಯಾತ ಕ್ರಿಕೆಟ್‌ ಪಟು ಸಚಿನ್‌ ತೆಂಡೂಲ್ಕರ ಹೇಳಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಾಬಾಗೌಡ ಸಚಿನ್‌ ತೆಂಡೂಲಕರ ಸೇರಿದಂತೆ ಪದ್ಮಭೂಷಣ ಪಡೆದವರು ರೈತರ ಬಗ್ಗೆ ಹೇಳಿಕೆ ಕೊಡುತ್ತಿದ್ದಾರೆ. ಅವರಿಗೆ ಒಕ್ಕಲುತನ ಮಾಡಿಯೇ ಗೊತ್ತಿಲ್ಲ. ಬೇಕಾದರೆ ಅವರಿಗೆ ನಾವು ಸ್ವಂತ ಜಮೀನು ಕೊಡುತ್ತೇವೆ. ಎತ್ತುಗಳನ್ನು ಕೊಡಿಸುತ್ತೇವೆ. ಐದು ವರ್ಷ ಒಕ್ಕಲುತನ ಮಾಡಲಿ ನಂತರ ಕೃಷಿ ಕಾಯ್ದೆ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.