ಅನ್ನದಾತನ ನಿರೀಕ್ಷೆಗೆ ಕಳಪೆ ಬೀಜ ಕೊಳ್ಳಿ

ರೈತರನ್ನು ಕಾಡಿದ ಮೊಳಕೆಯೊಡೆಯದ ಸೋಯಾಬೀನ್‌

Team Udayavani, Jun 10, 2020, 5:09 PM IST

ಅನ್ನದಾತನ ನಿರೀಕ್ಷೆಗೆ ಕಳಪೆ ಬೀಜ ಕೊಳ್ಳಿ

ಬೆಳಗಾವಿ: ಕಳೆದ ವರ್ಷ ಉಂಟಾದ ಪ್ರಕೃತಿ ವಿಕೋಪ ಹಾಗೂ ಈ ವರ್ಷ ಕೋವಿಡ್ ವೈರಸ್‌ ಹಾವಳಿಯಿಂದ ಸಂಪೂರ್ಣ ನಲುಗಿ ಹೋಗಿರುವ ರೈತರಲ್ಲಿ ಮುಂಗಾರು ಆರಂಭದಲ್ಲೇ ಬಿದ್ದ ಒಂದೆರಡು ಉತ್ತಮ ಮಳೆ ಹೊಸ ಆಶಾಭಾವನೆ ಮೂಡಿಸಿದೆ. ಇದೇ ನಿರೀಕ್ಷೆಯಲ್ಲಿ ಬಿತ್ತನೆ ಕಾರ್ಯ ಭರದಿಂದ ನಡೆದಿವೆ.

ಆದರೆ ಬಿತ್ತನೆ ಕಾರ್ಯದ ಭರದಲ್ಲೇ ಕಳಪೆ ಬೀಜಗಳ ಪೂರೈಕೆ ರೈತರನ್ನು ಮತ್ತಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದ ರೈತರಿಗೆ ಕಳಪೆ ಬೀಜಗಳ ಹಾವಳಿ ಮತ್ತೆ ನಷ್ಟದ ಭೀತಿ ಮೂಡಿಸಿದೆ. ಸಹಜವಾಗಿಯೇ ಇದು ಸರಕಾರ ಹಾಗೂ ಬೀಜದ ಕಂಪನಿಗಳ ವಿರುದ್ಧ ಆಕ್ರೋಶ ಹುಟ್ಟುಹಾಕಿದೆ.

ಈ ಬಾರಿ ಮುಂಗಾರು ಬೇಗ ಆರಂಭವಾಗಲಿದೆ ಎಂಬ ನಿರೀಕ್ಷೆಯೊಂದಿಗೆ ಕೃಷಿ ಇಲಾಖೆ ಎಲ್ಲ ಸಿದ್ಧತೆ ಮಾಡಿಕೊಂಡಿತ್ತು. ರೈತರಿಗೆ ಬೀಜ ಮತ್ತು ಗೊಬ್ಬರ ಖರೀದಿಗೆ ಅನುಕೂಲವಾಗಲಿ ಎಂಬ ಕಾರಣದಿಂದ ಜಿಲ್ಲೆಯಲ್ಲಿ ಒಟ್ಟು 35 ರೈತಸಂಪರ್ಕ ಕೇಂದ್ರಗಳು, ಇದಲ್ಲದೆ 139 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಮತ್ತು ಹೆಚ್ಚುವರಿಯಾಗಿ 22 ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭಿಸುವಂತೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಪ್ರತಿಶತ 45 ಬಿತ್ತನೆಯಾಗಿರುವುದು ಹೊಸ ಆಶಾಭಾವನೆ ಮೂಡಿಸಿತ್ತು.

ಆದರೆ ಈಗ ಬೈಲಹೊಂಗಲ, ಕಿತ್ತೂರು, ಸವದತ್ತಿ ಮೊದಲಾದ ತಾಲೂಕುಗಳ ರೈತರಿಂದ ಕಳಪೆ ಸೋಯಾಬೀನ್‌ ಬೀಜಗಳ ವಿತರಣೆ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿರುವುದರಿಂದ ಕೃಷಿ ಇಲಾಖೆ ಅಧಿಕಾರಿಗಳು ಇಕ್ಕಿಟ್ಟಿನಲ್ಲಿ ಸಿಲುಕಿದ್ದಾರೆ. ದೂರುಗಳ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಹೊಲಗಳಿಗೆ ತಾಂತ್ರಿಕ ತಜ್ಞರೊಂದಿಗೆ ಭೆಟ್ಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದರ ಮಧ್ಯೆ ಸ್ವತಃ ಕೃಷಿ ಸಚಿವರೇ ಸೋಯಾಬೀನ್‌ ಬೀಜಗಳಲ್ಲಿ ದೋಷ ಕಂಡುಬಂದಿದೆ. ರಾಜ್ಯಕ್ಕೆ ವಿತರಣೆಯಾಗಿರುವ ಸೋಯಾಬೀನ್‌ ಬೀಜದಲ್ಲಿ ಮೊಳಕೆ ಬರಿಸುವ ಸಾಮರ್ಥ್ಯ ಕಡಿಮೆ ಇರುವುದರಿಂದ ರೈತರು ಈ ವರ್ಷ ಸೋಯಾಬೀನ್‌ ಬೆಳೆಯುವುದನ್ನು ಬಿಡುವುದು ಸೂಕ್ತ ಎಂದು ಹೇಳಿರುವುದು ಈಗಾಗಲೇ ಸೋಯಾಬೀನ್‌ ಬಿತ್ತನೆ ಮಾಡಿ ಸಾವಿರಾರು ರೂ. ವೆಚ್ಚ ಮಾಡಿರುವ ರೈತರು ಆತಂಕದಲ್ಲಿ ಸಿಲುಕಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 6.43 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಇದೆ. ಈ ಅವಧಿಯಲ್ಲಿ ಭತ್ತ, ಜೋಳ, ರಾಗಿ, ಹತ್ತಿ, ಸಜ್ಜೆ, ಮೆಕ್ಕೆಜೋಳ, ಶೇಂಗಾ, ಸೋಯಾಬೀನ್‌, ಸೂರ್ಯಕಾಂತಿ, ಕಬ್ಬು, ಬೆಳೆಗಳ ಜತೆಗೆ ಸಾವೆ, ನವಣೆ, ಬರಗುಗಳಂತಹ ಸಿರಿಧಾನ್ಯ ಬೆಳೆಯಲು ಒತ್ತು ನೀಡಲಾಗಿದೆ. ಜಿಲ್ಲೆಯಲ್ಲಿ ಸೋಯಾಬೀನ್‌ ಪ್ರಮುಖ ಬೆಳೆಯಾಗಿದ್ದು, ಈಗಾಗಲೇ ಸುಮಾರು 35 ಸಾವಿರ ಕ್ವಿಂಟಲ್‌ ಬೀಜದ ವಿತರಣೆ ಮಾಡಲಾಗಿದೆ ಎಂಬುದು ಕೃಷಿ ಇಲಾಖೆ ಅಧಿಕಾರಿಗಳ ಹೇಳಿಕೆ.

ಬೀಜ ಹಾಗೂ ರಸಗೊಬ್ಬರದ ಸಂಗ್ರಹದಲ್ಲಿ ಕೊರತೆ ಇಲ್ಲ. ಜಿಲ್ಲೆಗೆ ಒಟ್ಟು 1.70 ಲಕ್ಷ ಮೆಟ್ರಿಕ್‌ ಟನ್‌ ರಾಸಾಯನಿಕ ಗೊಬ್ಬರದ ಅವಶ್ಯಕತೆ ಇದ್ದು, ಈಗ 1.15 ಲಕ್ಷ ಮೆಟ್ರಿಕ್‌ ಟನ್‌ ಗೊಬ್ಬರದ ದಾಸ್ತಾನು ಇದೆ. ಈ ರಸಗೊಬ್ಬರವನ್ನು ಆಯಾ ತಿಂಗಳ ಹಂಚಿಕೆ ಆಧರಿಸಿ ಬಿಡುಗಡೆ ಮಾಡಲು ಇಲಾಖೆ ಕ್ರಮಕೈಗೊಂಡಿದೆ ಎಂಬುದು ಕೃಷಿ ಇಲಾಖೆ ಉಪನಿರ್ದೇಶಕ ಎಚ್‌.ಡಿ. ಕೋಳೇಕರ ಹೇಳಿಕೆ.

ಸೋಯಾಬೀನ್‌ ಬೀಜದಲ್ಲಿ ದೋಷ ಇರುವುದು ಕಂಡುಬಂದಿದೆ. ಬೈಲಹೊಂಗಲ ಸೇರಿದಂತೆ ವಿವಿಧ ಭಾಗಗಳಲ್ಲಿ ಬಿತ್ತನೆ ಮಾಡಿರುವುದು ಮೊಳಕೆ ಬಂದಿಲ್ಲ. ಸೋಯಾಬೀನ್‌ ಹಾಕಿದ ಅನೇಕ ರೈತರು ದೂರು ನೀಡಿದ್ದಾರೆ. ದಟ್ಟವಾಗಿ ಬಿತ್ತನೆ ಮಾಡಲು ರೈತರಿಗೆ ಸಲಹೆ ನೀಡಲಾಗಿದೆ. ಉಳಿದ ಬೀಜಗಳನ್ನು ಕಂಪನಿಗೆ ಮರಳಿ ಕಳಿಸಲಾಗುತ್ತಿದೆ.  -ಎಚ್‌.ಡಿ. ಕೋಳೇಕರ, ಕೃಷಿ ಇಲಾಖೆ ಉಪನಿರ್ದೇಶಕ

 

-ಕೇಶವ ಆದಿ

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.