ವಿಮೆ-ಅಧಿಕಾರಿಗಳ ವಿರುದ್ಧ ರೈತಾಕ್ರೋಶ


Team Udayavani, Nov 17, 2019, 11:38 AM IST

bg-tdy-3

ಸವದತ್ತಿ: ಬೆಳೆವಿಮೆ ಹಣಕ್ಕಾಗಿ ಒಂದು ತಿಂಗಳು ಕಾಲ ನಡೆಸಿದ ಪ್ರತಿಭಟನೆಯಿಂದ ಎಚ್ಚೆತ್ತುಕೊಂಡ ತಾಲೂಕಾಡಳಿತ, ಸ್ಥಳೀಯ ತಹಶೀಲ್ದಾರ್‌ ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ನೇತೃತ್ವದಲ್ಲಿ ಶನಿವಾರ ಸಭೆ ನಡೆಸಿತು.

ಆದರೆ, ಅಧಿಕಾರಿಗಳ ಉಡಾಫೆ ಉತ್ತರಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದರು. ಉತ್ತಮ ಫಸಲು ಬಂದ ಜಮೀನುಗಳಿಗೆ ವಿಮೆ ಮೊತ್ತ ಜಮಾ ಆಗುತ್ತದೆ. ಆದರೆ ಬೆಳೆಹಾನಿಯಾಗಿರುವ ಜಮೀನುಗಳಿಗೆ ವಿಮೆ ಹಣ ಜಮೆಯಾಗುವುದಿಲ್ಲವೇಕೆ? ಎಂದು ಅಧಿಕಾರಿಗಳನ್ನು ಪ್ರಶ್ನಿಸಲಾಯಿತು. ಅದಕ್ಕೆ ಅಧಿಕಾರಿಗಳಉಡಾಫೆ ಉತ್ತರಕ್ಕೆ ಆಕ್ರೋಶಗೊಂಡ ರೈತರು, ಅಧಿಕಾರಿಗಳು ಮತ್ತು ವಿಮೆ ಕಂಪನಿ ಪ್ರತಿನಿಧಿ ಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಹತ್ತು ವರ್ಷ ಕಳೆದರೂ ವಿಮೆಯ ಹಣ ಬಂದಿಲ್ಲ. ವಿಮಾ ಕಂಪನಿಯ ಪ್ರತಿನಿಧಿಯವರಿಗೆ ಈ ಕುರಿತು ಕೇಳಿದರೆ ನೀವು ವಿಮಾ ಹಣವನ್ನು ಸರಕಾರಕ್ಕೆ ತುಂಬಿದ್ದೀರಿ ಹೊರತು ನಮಗಿಲ್ಲ ಎಂದು ಬೇಜವಾಬ್ದಾರಿತನದ ಉತ್ತರ ನೀಡುತ್ತಾರೆ. ತಾಲೂಕಾಡಳಿತದಿಂದ ರೈತರಿಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ಇದಕ್ಕೆಲ್ಲ ಪರಿಹಾರ ನೀಡುವವರ್ಯಾರೆಂದು? ತಮ್ಮ ಆಕ್ರೋಶ ಹೊರಹಾಕಿದರು.

ಶಾಸಕ ಆನಂದ ಮಾಮನಿ ಮಾತನಾಡಿ, ರೈತರ ಕುರಿತಾಗಿ ನಡೆಯುತ್ತಿರುವ ಅನ್ಯಾಯವನ್ನು ನಾವು ಸಹಿಸುವುದಿಲ್ಲ. ತಲಾಟಿಯಿಂದ ತಾಲೂಕಾಧಿಕಾರಿವರೆಗೆ ಯಾರೇ ಇರಲಿ, ರೈತರಿಗೆ ಅನ್ಯಾಯ ಮಾಡುವುದು ಕಂಡು ಬಂದಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದರು. ರೈತರಿಗೆ ಸಿಗಬೇಕಾದ ಬೆಳೆವಿಮೆ ಮತ್ತುಇತರೆ ಸೌಲಭ್ಯಗಳು ಸಿಕ್ಕಿದ್ದರೆ ಇಂತಹ ಪರಿಸ್ಥಿತಿಗೆ ರೈತರು ತಲುಪುತ್ತಿರಲಿಲ್ಲ. ವಿಮೆ ಕಂಪನಿಯವರು ಸರ್ವೇಗೆ ಬಾರದೇ ರೈತರೊಂದಿಗೆ ಅನುಚಿತವಾಗಿನಡೆದುಕೊಳ್ಳುತ್ತಾರೆ. ಅವರೇನು ತಮ್ಮ ಮನೆಗಳಿಂದಕೊಡುವುದಿಲ್ಲ.

ಎಲ್ಲದಕ್ಕೂ ಒಂದು ಮಿತಿಯಿದೆ.ಅದರ ಸಮಯ ಕಳೆದುಕೊಂಡರೇ ಈಗಿರುವ ಪರಿಸ್ಥಿತಿಯೇ ಬದಲಾಗುತ್ತದೆ. ರೈತರೆಲ್ಲ ಬೆಳೆವಿಮೆ ಸಲುವಾಗಿ ಗುಂಪು-ಗುಂಪಾಗಿ ಪ್ರತಿಭಟನೆ ಮೇಲೆ ಪ್ರತಿಭಟನೆ ನಡೆಸಿದರು. ನಾವು ಕೂಡ ಅವರ ಬೇಡಿಕೆಗೆ ಬೆಂಬಲಿಸಿದೇವು. ಈ ಕುರಿತು ಜಿಲ್ಲಾಧಿ ಕಾರಿಗೆ ಮರುಪರಿಶೀಲಿಸಲು ತಿಳಿಸಲಾಗಿದೆ ಎಂದರು.

ಆನಂದ ಚೋಪ್ರಾ ಮಾತನಾಡಿ, ಧಾರವಾಡದಲ್ಲಿನ ವಿಮೆ ವ್ಯವಸ್ಥೆ ರೀತಿಯಲ್ಲಿಯೇ ಇಲ್ಲಿಯೂ ಪರಿಹಾರಕಲ್ಪಿಸುವ ವ್ಯವಸ್ಥೆಯಾಗಬೇಕು. ಅದನ್ನು ಬಿಟ್ಟು ಮತ್ತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಮಯ ಹಾಳು ಮಾಡುವುದು ಬೇಡ. ನೇರವಾಗಿ ರೈತರ ಖಾತೆಗೆ ಹಣ ನೀಡಿ ಎಂದರು.

ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಮಾತನಾಡಿದರು. ತಹಶೀಲ್ದಾರ್‌ ಶಂಕರ ಗೌಡಿ, ಕೃಷಿ ಸಹಾಯಕ ನಿರ್ದೇಶಕ ಮಾರಡ್ಡಿ, ಎಪಿಎಂಸಿ ಅಧ್ಯಕ್ಷ ಜಗದೀಶ ಹನಶಿ, ವಿಮಾ ಕಂಪನಿ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.