ರಾಜ್ಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

•ರಸ್ತೆಯಲ್ಲಿಯೇ ಅಡುಗೆ ಮಾಡಿ ಊಟ ಮಾಡಿದ ರೈತರು•ಪ್ರಯಾಣಿಕರಿಗೆ ತಟ್ಟಿದ ಪ್ರತಿಭಟನೆ ಬಿಸಿ

Team Udayavani, May 23, 2019, 4:48 PM IST

bg-tdy-03..

ಹುಕ್ಕೇರಿ: ರಸ್ತೆಯಲ್ಲೇ ಊಟ ಮಾಡಿದ ಪ್ರತಿಭಟನಾ ನಿರತ ರೈತರು.

ಹುಕ್ಕೇರಿ: ತಾಲೂಕಿನಲ್ಲಿ ಹರಿದ ಹಿರಣ್ಯಕೇಶಿ ನದಿಗೆ ಹಿಡಕಲ್ ಜಲಾಶಯದಿಂದ ನೀರು ಹರಿಸುವಂತೆ ಒತ್ತಾಯಿಸಿ ರೈತರು ಬಡಕುಂದ್ರಿ ಕ್ರಾಸ್‌ ಬಳಿ ರಾಜ್ಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು.

ಬೆಳಗ್ಗೆ 9ಕ್ಕೆ ಬಡಕುಂದ್ರಿ ಕ್ರಾಸ್‌ ಬಳಿ ಸುಮಾರು 15ಕ್ಕೂ ಹೆಚ್ಚು ಹಳ್ಳಿಗಳ ಸಾವಿರಾರು ರೈತರು ಜಮಾಯಿಸಿ ಕೂಡಲೇ ತಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಹುಕ್ಕೇರಿ ತಾಲೂಕಿನಲ್ಲಿಯೇ ಇರುವ ಹಿಡಕಲ್ ಜಲಾಶಯದಿಂದ ದೂರದವರೆಗೂ ನೀರು ಹರಿಬಿಡಲಾಗುತ್ತಿದೆ. ಅಲ್ಲದೇ ಕಳೆದೆರಡು ದಿನಗಳ ಹಿಂದೆಯೇ ಕೃಷ್ಣಾ ನದಿಗೂ ಈ ಜಲಾಶಯದಿಂದ 1 ಟಿಎಂಸಿ ನೀರು ಬಿಡಲಾಗಿದೆ. ಆದರೆ, ಪಕ್ಕದಲ್ಲಿಯೇ ಸುಮಾರು 5 ಕಿ.ಮೀ ಅಂತರದ ಹಿರಣ್ಯಕೇಶಿ ನದಿ ಬತ್ತಿ ಐದಾರು ತಿಂಗಳು ಕಳೆದರೂ ನೀರು ಬಿಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಗೆ ಎರಡು ದಿನಗಳಲ್ಲಿ ನೀರು ಹರಿಸುವಂತಾಗಬೇಕು. ನದಿ ಪಾತ್ರದ ಬಡಕುಂದ್ರಿ, ಯರನಾಳ, ಕೋಚರಿ, ಹೆಬ್ಟಾಳ ಸೇರಿದಂತೆ 6 ಬ್ಯಾರೇಜ್‌ಗಳಲ್ಲಿ ನೀರು ತುಂಬಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ವಿಳಂಬವಾದಲ್ಲಿ ಶನಿವಾರ ಹೆಬ್ಟಾಳ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡುವುದಾಗಿ ಎಚ್ಚರಿಸಿದರು.

ನೀರು-ಮೇವಿನ ಕೊರತೆ:

ಹಿರಣ್ಯಕೇಶಿ ನದಿ ಬತ್ತಿ ಸುಮಾರು ಐದಾರು ತಿಂಗಳು ಕಳೆದಿದ್ದು, ನದಿ ಪಾತ್ರದ ಜನ-ಜಾನುವಾರುಗಳು ಕುಡಿಯುವ ನೀರಿಗಾಗಿ ತೊಂದರೆ ಅನುಭವಿಸುತ್ತಿವೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಕುಡಿಯುವ ನೀರು ಶೇಖರಿಸಲು ಜನ ಇಡೀ ದಿನ ಕಳೆಯಬೇಕಾಗಿದೆ. ಬೆಳೆದ ಬೆಳೆ ಒಣಗುತ್ತಿವೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಹಿರಣ್ಯಕೇಶಿ ನದಿ ಬತ್ತಿದರೂ ಈ ಭಾಗದ ಜನಪ್ರತಿನಿಧಿಗಳು ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ನೀರಾವರಿ ಇಲಾಖೆ ಅಧಿಕಾರಿಗಳೂ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿದ್ದಾರೆ. ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಸಮಸ್ಯೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ಪ್ರತಿಭಟನಾನಿರತ ರೈತರು ಆಪಾದಿಸಿದರು.

ಹಿರಣ್ಯಕೇಶಿ ನದಿಗೆ ಪ್ರತಿ ವರ್ಷ ಬೇಸಿಗೆಯ 4 ತಿಂಗಳು ಕಾಲ ನೀರು ಹರಿಸಲು ವಿಶೇಷ ಅಧಿಸೂಚನೆ ಹೊರಡಿಸಬೇಕು. ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಚಿತ್ರಿ ಡ್ಯಾಮ್‌ನಿಂದ ನೀರು ಬಿಡುವಂತಾಗಬೇಕು. ಈ ಭಾಗದ ಕಾಲುವೆ ನವೀಕರಿಸಿ ಕಾಲುವೆಗಳ ಕೊನೆ ಪ್ರದೇಶಗಳಿಗೂ ನೀರು ಮುಟ್ಟುವಂತಾಗಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರೂ ರೈತರು ಜಗ್ಗಲಿಲ್ಲ. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೀರಾವರಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಇತ್ಯರ್ಥ ಪಡಿಸುವಂತೆ ಫೋನ್‌ ಮೂಲಕ ಸಂಪರ್ಕಿಸಿದ್ದಾರೆನ್ನುವ ಸುದ್ದಿ ತಿಳಿದ ರೈತರು ಪ್ರತಿಭಟನೆ ಹಿಂಪಡೆದರು.

ಪಪ್ಪುಗೌಡ ಪಾಟೀಲ, ಈರಣ್ಣಾ ಕಡಲಗಿ, ಸುರೇಶ ಕೊಟಬಾಗಿ, ಕಾಡಪ್ಪಾ ಮಗದುಮ್‌, ಶಿವಲಿಂಗ ವಂಟಮೂರಿ, ರವಿ ಪಾಟೀಲ, ಶಾಂತಿನಾಥ ಮಗದುಮ್‌, ಆನಂದ ಲಕ್ಕುಂಡಿ, ಬಸಗೌಡ ಪಾಟೀಲ, ಬಸವರಾಜ ಗುಂಡಕಲ್ಲಿ, ಚಂದು ಗಂಡ್ರೋಳಿ, ಭೀಮಗೌಡ ಪಾಟೀಲ, ಅಡಿವೆಪ್ಪಾ ಚೌಗಲಾ, ಅಶೋಕ ಪಾಟೀಲ, ಗಂಗಾಧರ ದೇಸಾಯಿ, ಚಂದು ಗಂಗಣ್ಣವರ, ರಾಮಚಂದ್ರ ಜೋಶಿ, ಸುಭಾಶ ನಾಯಿಕ, ಪ್ರವೀಣ ದೇಸಾಯಿ ಇತರರಿದ್ದರು.

ಹೆಬ್ಟಾಳ, ಚಿಕ್ಕಾಲಗುಡ್ಡ, ಕೋಚರಿ, ಅರ್ಜುನವಾಡ, ಕುರಣಿ, ಕುರಣಿವಾಡಿ, ಹಂಚಿನಾಳ, ಬದಕುಂದ್ರಿ, ಯರಗಟ್ಟಿ, ಯರನಾಳ, ಹೊಸೂರ, ಗೌಡವಾಡ, ಬಸ್ತವಾಡ, ಮದಮಕ್ಕನಾಳ, ಬೆಣಿವಾಡ ಸೇರಿದಂತೆ ಇತರೆ ಗ್ರಾಮಗಳ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

1-wqeqeewq

Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.