![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಪರಿಹಾರ ಸಿಗದಿದ್ದರೆ ರೈತರ ಹೋರಾಟ ಅನಿವಾರ್ಯ
Team Udayavani, Jan 11, 2020, 1:05 PM IST
![bg-tdy-3](https://www.udayavani.com/wp-content/uploads/2020/01/bg-tdy-3-3-620x395.jpg)
ಹಿರೇಬಾಗೇವಾಡಿ: ಎಲ್ಲ ದಾಖಲೆಗಳನ್ನು ಲಗತಿಸಿ ಅರ್ಜಿ ಸಲ್ಲಿಸಿದ್ದರೂ ಸಹ ಇನ್ನೂ ಕೆಲ ರೈತರಿಗೆ ಬೆಳೆ ಪರಿಹಾರ ಯೋಜನೆ ಸಿಕ್ಕಿಲ್ಲ. ಕೃಷಿ ಇಲಾಖೆಯಲ್ಲಿ ರೈತರಿಂದ ಸ್ವೀಕರಿಸಿದ ಅರ್ಜಿಗಳ ದಾಖಲೆಯೆನ್ನೇ ಇಟ್ಟಿಲ್ಲ. ಶೀಘ್ರವೇ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಹೋರಾಟ ಆನಿವಾರ್ಯ ಎಂದು ರೈತರು ಕೃಷಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ನಡೆದ ರೈತರ ಸಮಸ್ಯೆಗಳ ಸಭೆಯಲ್ಲಿ ಅವರು ಮಾತನಾಡಿ, ಯೋಜನಾ ಅನುಷ್ಠಾನದ ಕಾರ್ಯದಲ್ಲಿ ಕಂದಾಯ ಹಾಗೂ ಕೃಷಿ ಇಲಾಖೆಗಳಲ್ಲಿ ಸಮನ್ವಯತೆಯೆ ಇಲ್ಲದಂತಾಗಿದೆ. ಇದರಿಂದಾಗಿ ಕೃಷಿ ಕಂದಾಯ ಇಲಾಖೆ ಹಾಗೂ ಬ್ಯಾಂಕುಗಳಿಗೆ ದಿನನಿತ್ಯ ರೈತರು ಆಲೆದಾಡುವಂತಾಗಿದೆ ಎಂದು ಆರೋಪಿಸಿದರು.
ನೆರೆ ಪರಿಹಾರ ಹಾಗೂ ಬೆಳೆ ಹಾನಿಯಂತಹ ಪ್ರಕೃತಿ ವಿಕೋಪಗಳಿಂದ ಆದ ನಷ್ಟಕ್ಕೆ ಸ್ಪಂದಿಸುವ ದಿಶೆಯಲ್ಲಿ ಸರ್ಕಾರ ರೈತರಿಗೆ ಧನ ಸಹಾಯ ಯೋಜನೆ ಪ್ರಕಟಿಸಿದೆ. ಆದರೆ ಈ ಯೋಜನೆ ಲಾಭವು ಅರ್ಹ ಫಲಾನುಭವಿಗಳಿಗೆ ಸಿಗದೆರೈತರು ಸಂಕಷ್ಟದಲ್ಲಿ ಸಿಲುಕುವಂತಾಗಿದೆ.ಶೀಘ್ರವೇ ಕೃಷಿ ಅಧಿಕಾರಿಗಳು ಗಮನ ಹರಿಸಿ ಬೆಳೆ ಪರಿಹಾರ ಹಣ ರೈತರಿಗೆ ತಲುಪುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಕೃಷಿ ಅಧಿಕಾರಿ ಎಂ.ಡಿ. ಗಣಾಚಾರಿ ಮಾತನಾಡಿ, ರೈತರು ನೀಡಿದ ದಾಖಲಾತಿಗಳು ಸರಿ ಇಲ್ಲದ ಕಾರಣ ಬೆಳಗಾವಿ ತಾಲೂಕಿನಾದ್ಯಂತ 2,300 ಅರ್ಜಿಗಳು ತಿರಸ್ಕೃತಗೊಂಡಿವೆ. ಮತ್ತೂಮ್ಮೆ ತಮ್ಮ ಆಧಾರ್ ಕಾರ್ಡ್, ಜಮೀನಿನ ಪಹಣಿ , ಬ್ಯಾಂಕ್ ಪಾಸ್ ಬುಕ್ ದಾಖಲೆಗಳನ್ನು ನೀಡಿದರೆ ಬೆಳೆ ಪರಿಹಾರ ವಂಚಿತ ರೈತರಿಗೆ ಈ ಯೋಜನೆಯೆ ಲಾಭ ಸಿಗುವಲ್ಲಿ ಮತ್ತೂಮ್ಮೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೈತ ಮುಂಖಡ ಬಸವಣ್ಣಿಪ್ಪ ಗಾಣಗಿ, ಉ.ಕ.ಜನ ಸಂಗ್ರಾಮ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮಂಜುನಾಥ ವಸ್ತ್ರದ, ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಶಾಂತ ದೇಸಾಯಿ, ರಾಜು ರೊಟ್ಟಿ ಇತರರು ಇದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.