ಮತ್ತೂಮ್ಮೆ ಸಮೀಕ್ಷೆ ನಡೆಸಲು ರೈತರ ಆಗ್ರಹ
Team Udayavani, Jan 25, 2020, 12:15 PM IST
ಚಿಕ್ಕೋಡಿ: ಕೃಷ್ಣಾ ಮತ್ತು ಉಪನದಿಗಳ ಭೀಕರ ಪ್ರವಾಹದಲ್ಲಿ ಬಿದ್ದ ಮನೆಗಳಿಗೆ ಮತ್ತೂಮ್ಮೆ ಸರ್ವೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ತಾಲೂಕಿನ ಯಡೂರ ಗ್ರಾಪಂ ಪಿಡಿಒಗೆ ಮನವಿ ಸಲ್ಲಿಸಿದರು. ಭೀಕರ ಪ್ರವಾಹದಿಂದ ತತ್ತರಿಸಿಹೋದ ಪ್ರವಾಹ ಪೀಡಿತ ಯಡೂರ, ಕಲ್ಲೋಳ, ಇಂಗಳಿ, ಚಂದೂರ, ಮಾಂಜರಿ ಗ್ರಾಮದಲ್ಲಿ ಪ್ರವಾಹದಿಂದ ತತ್ತರಿಸಿ ಮನೆಗಳನ್ನು ಕಳೆದುಕೊಂಡು ಸಂತ್ರಸ್ತರು ಇನ್ನೂ ಬೀದಿಯಲ್ಲಿ ವಾಸ ಮಾಡುತ್ತಿದ್ದಾರೆ.
ಈಗ ಮಾಡಿರುವ ಸಮೀಕ್ಷೆ ಅಷ್ಟೊಂದು ಸಮರ್ಪಕವಾಗಿಲ್ಲ, ರಾಜ್ಯ ಸರ್ಕಾರ ಮತ್ತೂಮ್ಮೆ ಸರ್ವೇ ಮಾಡಿ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಮನೆಗಳು ಸಿಗುವಂತೆ ಮಾಡಬೇಕೆಂದು ಒತ್ತಾಯಿಸಿದರು. ಕಳೆದ ಜುಲೈ, ಆಗಸ್ಟ್ ತಿಂಗಳಲ್ಲಿ ಪ್ರವಾಹ ಬಂದು ಹೋಗಿದೆ. ಇನ್ನೂವರೆಗೆ ಸಂತ್ರಸ್ತರಿಗೆ ಮನೆಗಳು ಲಭಿಸುತ್ತಿಲ್ಲ, ಸರ್ಕಾರ ಬಿಡುಗಡೆ ಮಾಡಿರುವ ಮೊದಲನೆ ಕಂತು ಬಂದು ಮೂರು ತಿಂಗಳು ಕಳೆದಿವೆ. ಆದರೆ ಎರಡನೆ ಕಂತು ಬಿಡುಗಡೆಯಾಗುತ್ತಿಲ್ಲ, ಮತ್ತು ಯಡೂರ ಗ್ರಾಮದಲ್ಲಿ ನಿಜವಾದ ಫಲಾನುಭವಿಗಳಿಗೆ ಮನೆಗಳು ಸಿಕ್ಕಿಲ್ಲ, ಹೀಗಾಗಿ ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅಧಿ ಕಾರಿಗಳು ಎಚ್ಚೆತ್ತುಕೊಂಡು ಮತ್ತೂಮ್ಮೆ ಸರ್ವೇಮಾಡಬೇಕೆಂದು ರೈತ ಸಂಘದ ಸದಸ್ಯರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪಾಂಡು ಕೋಳಿ, ಮಂಜುನಾಥ ಪರಗೌಡ, ಲಕ್ಷ್ಮಣ ಉಮರಾಣಿ, ಬಾಬು ವಾಳಕೆ, ದಾದು ನರವಾಡೆ, ಮಹೇಶ ಬೇಳವಿ, ದುಂಡಯ್ನಾ ಮಠಪತಿ, ಕೃಷ್ಣಾಬಾಯಿ ಸೂರ್ಯವಂಶಿ, ಚಂದು ಕಮತೆ, ಶ್ರೀಕಾಂತ್ ಬೋರಗಾಂವೆ, ಗುಂಡು ಶಿಂಗಾಡೆ,ಅಶೊಕ ಜಾಧವ, ರವಿ ಜಡೆ, ಚೇತನ ಕಾಂಬಳೆ, ವೀರಗೌಡ ಪಾಟೀಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ