ಹಬ್ಬದ ಪ್ರಯಾಣ ಬಲು ದುಬಾರಿ

•ದುಪ್ಪಟ್ಟು ದರದಿಂದ ಜನ ಹೈರಾಣ •ಗಣಪತಿ ಹಬ್ಬಕ್ಕೆ ಗಗನಕ್ಕೇರಿದ ಖಾಸಗಿ ಬಸ್‌ ದರ

Team Udayavani, Aug 30, 2019, 11:06 AM IST

Udayavani Kannada Newspaper

ಬೆಳಗಾವಿ: ಊರು ಬಿಟ್ಟು ರಾಜಧಾನಿಯಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಜನರಿಗೆ ಹಬ್ಬಗಳು ಬಂದರೆ ಖಾಸಗಿ ಸಾರಿಗೆ ಸಂಸ್ಥೆಗಳು ನೀಡುವ ಶಾಕ್‌ ತಡೆದುಕೊಳ್ಳಲು ಆಗುವುದಿಲ್ಲ. ಹಬ್ಬಗಳು ಸಮೀಪಿಸುತ್ತಿದ್ದಂತೆ ಬಸ್‌ ದರ ವಿಪರೀತ ಹೆಚ್ಚಿಸುವ ಮೂಲಕ ಜನರ ಜೇಬಿಗೆ ಕತ್ತರಿ ಬೀಳುವುದಂತೂ ಗ್ಯಾರಂಟಿ.

ಉತ್ತರ ಕರ್ನಾಟಕದ ಬಹುತೇಕ ಯುವಕ, ಯುವತಿಯರು ರಾಜಧಾನಿ ಬೆಂಗಳೂರಿನಲ್ಲಿ ದುಡಿಯಲು ಹೋಗಿದ್ದಾರೆ. ವರ್ಷಕ್ಕೆ ಮೂರ್‍ನಾಲ್ಕು ಹಬ್ಬಗಳಿದ್ದಾಗ ಊರಿಗೆ ಬರಲು ಹಾತೊರೆಯುತ್ತಿರುತ್ತಾರೆ. ಆದರೆ ಸಾರಿಗೆ ಸಂಸ್ಥೆಗಳು ಬಸ್‌ ದರ ದಿಢೀರ್‌ ಹೆಚ್ಚಳ ಮಾಡುವ ಮೂಲಕ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕುತ್ತಿವೆ. ಸಾಮಾನ್ಯ ದಿನಗಳಿಗಿಂತಲೂ ನಾಲ್ಕೈದು ಪಟ್ಟು ಹೆಚ್ಚು ಹಣ ನೀಡಿ ಊರಿಗೆ ಬರಬೇಕಾದ ಅನಿವಾರ್ಯತೆ ಈಗ ಉದ್ಭವವಾಗಿದೆ.ಹಬ್ಬ ಕಹಿ: ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಗದಗ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳ ಜನರು ಬೆಂಗಳೂರು, ಮೈಸೂರು, ಮಂಗಳೂರು, ತುಮಕೂರು ಮಹಾನಗರಗಳಲ್ಲಿ ದುಡಿಯುತ್ತಿದ್ದಾರೆ. ಗಣೇಶೋತ್ಸವ, ದೀಪಾವಳಿ, ದಸರಾ ಹಬ್ಬಗಳಿಗೆ ರಜೆ ಪಡೆದು ಊರಿಗೆ ಬರುತ್ತಿರುತ್ತಾರೆ. ರೈಲ್ವೆ ಹಾಗೂ ಸರ್ಕಾರಿ ಸಾರಿಗೆ ಬಸ್‌ಗಳು ಸೀಟ್ ಫುಲ್ ಆದಾಗ ಅನಿವಾರ್ಯವಾಗಿ ಖಾಸಗಿ ಸಾರಿಗೆಗಳನ್ನು ಅವಲಂಬಿಸಿದಾಗ ಬಸ್‌ ದರ 2-3 ಸಾವಿರ ರೂ. ಮುಟ್ಟಿರುತ್ತದೆ. ಸದ್ಯ ಗಣಪತಿ ಹಬ್ಬಕ್ಕಾಗಿ ಲಕ್ಷಾಂತರ ಜನರು ಬೆಂಗಳೂರಿನಿಂದ ತಮ್ಮ ಊರಿಗೆ ಬರುತ್ತಿರುತ್ತಾರೆ. ಇದನ್ನೇ ದುರುಪಯೋಗ ಪಡಿಸಿಕೊಳ್ಳುವ ಖಾಸಗಿ ಬಸ್‌ನವರು ಹಬ್ಬದ 2-3 ತಿಂಗಳ ಮುಂಚೆಯೇ ಹೆಚ್ಚು ದರ ನಿಗದಿ ಪಡಿಸುತ್ತಾರೆ. ಆನ್‌ಲೈನ್‌ನಲ್ಲಿ ಬಸ್‌ ಸೀಟ್ ಕಾಯ್ದಿರಿಸಲು ಎರಡು ತಿಂಗಳ ಮುಂಚೆ ಮಾಡಿದರೂ 2 ಸಾವಿರ ದರ ನಿಗದಿ ಪಡಿಸಿರುತ್ತಾರೆ. ಇದರಿಂದ ಜನರು ಈ ದರ ಮಾಫಿಯಾದಿಂದ ರೋಸಿ ಹೋಗಿದ್ದಾರೆ.

ರೈಲು ಸಂಚಾರ ಅನುಕೂಲ: ಈ ಬಸ್‌ ದರ ಹಾವಳಿಯಿಂದ ತಪ್ಪಿಸಲು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಕಳೆದ ಎರಡು ತಿಂಗಳಿಂದ ಬೆಳಗಾವಿ-ಬೆಂಗಳೂರು ನೂತನ ಎಕ್ಸಪ್ರಸ್‌ ರೈಲು ಆರಂಭಿಸಿದ್ದು, ಇದು ನಿತ್ಯ ಸಂಚರಿಸುತ್ತಿದೆ. ಇದರಿಂದಾಗಿ ಎಷ್ಟೋ ಜನರಿಗೆ ಅನುಕೂಲಕರವಾಗಿದೆ. ರಾಣಿ ಚನ್ನಮ್ಮ ಎಕ್ಸಪ್ರಸ್‌ ಹಾಗೂ ಹೊಸ ರೈಲು ಸಂಚಾರದಿಂದ ಹೆಚ್ಚಿನ ಸಂಖ್ಯೆಯ ಜನರು ಈ 2 ರೈಲುಗಳ ಮೇಲೆ ಅವಲಂಬನೆಯಾಗಿದ್ದಾರೆ. ಸರ್ಕಾರಿ ಬಸ್‌ ಹಾಗೂ ರೈಲುಗಳು ಭರ್ತಿ ಆಗಿದ್ದರಿಂದ ಜನರು ಖಾಸಗಿ ಬಸ್‌ಗಳಲ್ಲಿ ಬರುತ್ತಾರೆ. ಆದರೆ ಎಸಿ, ನಾನ್‌ ಎಸಿಗಳ ದರ ನೋಡಿದರೆ ತಲೆ ತಿರುಗಿ ಬೀಳುವುದು ಖಚಿತ. ಆದ್ದರಿಂದ ಖಾಸಗಿ ಬಸ್‌ ದರಗಳಿಗೆ ಕಡಿವಾಣ ಹಾಕಿದರೆ ಜನರಿಗೆ ಅನುಕೂಲ ಆಗುತ್ತದೆ ಎನ್ನುತ್ತಾರೆ ಪ್ರಯಾಣಿಕರು.

 

•ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.