ಪ್ಲಾಸ್ಟಿಕ್ ಬಳಸಿದರೆ ದಂಡ ಖಚಿತ
Team Udayavani, Jan 8, 2020, 3:10 PM IST
ಚಿಕ್ಕೋಡಿ: ಪ್ಲಾಸ್ಟಿಕ್ ಮಾರಾಟ ಮಾಡುವ ವ್ಯಕ್ತಿಗಳು ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ಓರ್ವ ವ್ಯಾಪಾರಸ್ಥನಿಗೆ 25 ಸಾವಿರ ದಂಡ ಹಾಕಿದ್ದಾರೆ.
ನಿಪ್ಪಾಣಿ ನಗರಸಭೆ ಪೌರಾಯುಕ್ತ ಮಹಾವೀರ ಬೋರನ್ನವರ ನೇತೃತ್ವದಲ್ಲಿ ಅ ಧಿಕಾರಗಳ ತಂಡ ಪ್ರತಿದಿನ ನಿಪ್ಪಾಣಿ ನಗರದಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಪ್ಲಾಸ್ಟಿಕ್ ಬಳಕೆ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ಹಾಕುತ್ತಿದ್ದಾರೆ. ಸರ್ಕಾರ ಪ್ಲಾಸ್ಟಿಕ್ ನಿಷೇಧ ಮಾಡಿದರೂ ನಿಪ್ಪಾಣಿಯಲ್ಲಿ ಪ್ಲಾಸ್ಟಿಕ್ ಬಳಕೆ ಇರುವುದನ್ನು ಗಮನಿಸಿದ ನಗರಸಭೆ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ 10 ಸಾವಿರ ರೂ ಮೌಲ್ಯದ ಕೆಮಿಕಲ್ ಮಿಶ್ರಿತ ಪ್ಲಾಸ್ಟಿಕ್ ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡು 25 ಸಾವಿರ ರೂ ದಂಡ ಹಾಕಿದ್ದಾರೆ.
ಈ ಕುರಿತು ಪೌರಾಯುಕ್ತ ಮಹಾವೀರ ಬೋರನ್ನವರ ಮಾತನಾಡಿ, ಇಡೀ ದೇಶದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಆದರೆ ನಗರದಲ್ಲಿ ಕೆಲವೊಬ್ಬರು ಅಕ್ರಮವಾಗಿ ಅಂಗಡಿ, ಹೊಟೇಲ, ಬೇಕರಿ ಮತ್ತು ಸಣ್ಣ ಸಣ್ಣ ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ದಾಳಿ ನಡೆಸಲಾಗುತ್ತಿದೆ. ಅದರಂತೆ ಬೇಕರಿಯಲ್ಲಿ ಸಾಮಾನು ಖರೀದಿ ಮಾಡಿ ಪ್ಲಾಸ್ಟಿಕ್ನಲ್ಲಿ ತೆಗೆದುಕೊಂಡು ಹೋಗುವ ವ್ಯಕ್ತಿಯೊಬ್ಬನಿಗೂ 2 ಸಾವಿರ ರೂ. ದಂಡ ಹಾಕಲಾಗಿದೆ ಎಂದರು.
ನಗರದ ಎಲ್ಲ ಸಾರ್ವಜನಿಕರು ಸರ್ಕಾರದ ನಿಯಮ ಪಾಲನೆ ಮಾಡಬೇಕು. ಪ್ಲಾಸ್ಟಿಕ್ ಬಳಕೆ ನಿಷೇಧವಿದೆ. ವ್ಯಾಪಾರಸ್ಥರು ಬಳಕೆ ಮಾಡುವುದನ್ನು ನಿಲ್ಲಿಸಬೇಕು. ನಗರದ ಸ್ವಚ್ಛತೆಗೆ ಸಹಕರಿಸಬೇಕು ಎಂದು ಪೌರಾಯುಕ್ತ ಮಹಾವೀರ ಬೋರನ್ನವರ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…