FIR ದಾಖಲಾಗುತ್ತಿದ್ದಂತೆ ಹಲ್ಲೆಕೋರ ಬಿಜೆಪಿ ಶಾಸಕನ ಕುಟುಂಬವೇ ಪರಾರಿ
Team Udayavani, Jan 15, 2017, 10:21 AM IST
ಕಾಗವಾಡ: ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಅವರ ಮೇಲೆ ನಂಡೆ ಗುಂಪು ದಾಳಿಗೆ ಸಂಬಂಧಿಸಿ ಎಫ್ಐಆರ್ ದಾಖಲಾಗುತ್ತಿದ್ದಂತೆ ಬಿಜೆಪಿ ಶಾಸಕ ರಾಜು ಕಾಗೆ, ಕುಟುಂಬ ಸೇರಿ 13 ಮಂದಿ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.
ಜನವರಿ 9 ರಂದು ವಿವೇಕ್ ಶೆಟ್ಟಿ ಮೇಲೆ ಮಹಿಳೆಯರು ಸೇರಿದಂತೆ ಗುಂಪು ದಾಳಿ ನಡೆಸಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದರು. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಕಾರಿಯಾದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರು ಶಂಕರ್ ವಾಘಮೋರೆ, ಮಲಗೊಂಡ ಪಾಟೀಲ್, ಸುದರ್ಶನ್ ನಾಂದೇಣಿ ಮತ್ತು ರವೀಂದ್ರ ನಾಗ್ಮನಿ ಎಂದು ತಿಳಿದು ಬಂದಿದೆ.
ಪೊಲೀಸರು ಆರೋಪಿಗಳಾದ ರಾಜು ಕಾಗೆ ಕುಟುಂಬದ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ವಿವೇಕ್ ಶೆಟ್ಟಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಚೇತರಿಸಿಕೊಂಡಿದ್ದಾರೆ.
ಕಾಗೆ ಬೆಂಬಲಿಗ ಗುಂಪು ವಿವೇಕ್ಶೆಟ್ಟಿಗೆ ಬಡಿಗೆಗಳಿಂದ ಹಿಗ್ಗಾಮುಗ್ಗಾ ಥಳಿಸಿ, ಮೆಟ್ಟಿಲುಗಳಲ್ಲಿ ದರದರನೆ ಎಳೆದೊಯ್ದ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಾಗೆ ಪುತ್ರಿಯ ವಿರುದ್ಧ ಫೇಸ್ ಬುಕ್ನಲ್ಲಿ ಅವಹೇಳನಕಾರಿಯಾಗಿ ಬರೆದ ಎಂಬ ಆರೋಪದಲ್ಲಿ ರೊಚ್ಚಿಗೆದ್ದ ಕಾಗೆ ಸಹೋದರ ಸೇರಿದಂತೆ 11 ಮಂದಿ ಸಂಬಂಧಿಕರು ಹಲ್ಲೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ
ಮುಸ್ಲಿಂ ಬೃಹತ್ ಸಮಾವೇಶ ಮಾಡಿದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಈ ದೇಶ ಯಾರೋ ಒಬ್ಬರ, ಅದಾನಿ ಸ್ವತ್ತಲ್ಲ : ಬೆಳಗಾವಿಯಲ್ಲಿ ರಾಹುಲ್ ಗಾಂಧಿ
ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ?: ಖರ್ಗೆ ತಿರುಗೇಟು
ಉರಿಗೌಡ,ನಂಜೇಗೌಡ ಚಿತ್ರದ ವಿರುದ್ಧ ಹೋರಾಟಕ್ಕೆ ನಿರ್ಮಲಾನಂದ ಸ್ವಾಮೀಜಿ ಮುಂದಾಳತ್ವ ವಹಿಸಲಿ
MUST WATCH
ಹೊಸ ಸೇರ್ಪಡೆ
ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!
Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್
ಸ್ಟಾರ್ಟ್ಅಪ್ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು
ಆನ್ಲೈನ್ ನಲ್ಲಿ ವಿದ್ಯುತ್ ಬಿಲ್ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ
ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ