ಮೂಡಲಗಿಯ ಐದು ಸೇತುವೆಗಳು ಸಂಪೂರ್ಣ ಮುಳಗಡೆ: ಸಂಚಾರ ಸ್ಥಗಿತ
Team Udayavani, May 21, 2022, 11:15 AM IST
ಮೂಡಲಗಿ: ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಿರಣ್ಯಕೇಶಿ ನದಿಯಿಂದ ಘಟಪ್ರಭಾ ನದಿಗೆ ನೀರು ಹರಿದು ಬರುತ್ತಿದ್ದು, ಮೂಡಲಗಿ ತಾಲೂಕಿನ ಘಟಪ್ರಭಾ ನದಿಯ ಐದು ಸೇತುವೆಗಳು (ಬ್ರೀಡ್ಜ್ ಕಂ ಬ್ಯಾರೇಜ್) ಹಾಗೂ ನದಿ ದಡದಲ್ಲಿರುವ ಕೃಷಿ ಭೂಮಿಗಳು ಜಲಾವೃತಗೊಂಡಿದೆ.
ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಘಟಪ್ರಭಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ಸುಣಧೋಳಿ, ಕಮಲದಿನ್ನಿ, ಹುಣಶ್ಯಾಳ ಪಿ.ವೈ, ಅವರಾದಿ, ಢವೇಳಶ್ವರ ಸೇತುವೆಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.
ಕೊರೋನಾ ಸಂಕಷ್ಟ ಹಾಗೂ ಕಳೆದ ವರ್ಷ ಜೂನ್ ನಲ್ಲಿ ಭಾರಿ ಪ್ರಮಾಣದ ನೀರು ನುಗ್ಗಿ, ಸಾವಿರಾರೂ ಎಕರೆ ಕೃಷಿಗೆ ಹಾನಿಯುಂಟಾಗಿತ್ತು. ಈ ಭಾರಿ ಅದೇ ರೀತಿಯಲ್ಲಿ ಗೋವಿನ ಜೋಳ, ಕಬ್ಬಿನ ಗದ್ದೆಗಳಲ್ಲಿ ನೀರು ನುಗ್ಗಿದ್ದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಅಧಿಕಾರಿಗಳ ನಿರ್ಲಕ್ಷ: ಮಳೆಗಾಲ ಸಂದರ್ಭದಲ್ಲಿ ಸೇತುವೆಗಳಿಗೆ ಹಾಕಲಾಗಿದ್ದ ಗೇಟ್ಗಳನ್ನು ತೆಗೆಯದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಇದರಿಂದಾಗಿ ಸೇತುವೆಗಳು ಹಾಗೂ ರೈತರ ಗದ್ದೆಗಳಿಗೆ ನೀರು ನುಗ್ಗಿದೆ. ಗದ್ದೆಗಳಿಗೆ ನೀರು ನುಗ್ಗಿ ಬೆಳೆ ನಾಶವಾಗುತ್ತಿದ್ದು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೇ ಇದಕ್ಕೆ ಕಾರಣ ಎಂದು ರೈತಾಪಿ ವರ್ಗದವರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಕೈ ಸೇರದ ಬೆಳೆ ಪರಿಹಾರ: ಕಳದ ವರ್ಷ ಜೂನ್ ತಿಂಗಳಲ್ಲಿ ಮಳೆಯಿಂದಾಗಿ ಘಟಪ್ರಭಾ ನದಿಯ ನೀರಿನ ಮಟ್ಟ ಹೆಚ್ಚಾಗಿದರಿಂದ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದ ಸಾವಿರಾರೂ ಎಕರೆ ಗದ್ದೆಗಳಿಗೆ ನೀರು ನುಗ್ಗಿದ ಪರಿಣಾಮ ರೈತರು ಬೆಳದ ಬೆಳೆ ನಾಶವಾಗಿತ್ತು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆಗಳು ಜಂಟಿಯಾಗಿ ಬೆಳೆ ಸಮಿಕ್ಷೆ ಮಾಡಿತ್ತು. ಹಾನಿಯಾದ ಬೆಳೆಗೆ ಕಂದಾಯ ಇಲಾಖೆಯಿಂದ ಪರಿಹಾರವನ್ನು ಕೊಡಿಸಲಾಗುವುದು ಎಂದು ಭರವಸೆಯನ್ನು ಅಧಿಕಾರಿಗಳು ನೀಡಿದ್ದರು. ಆದರೆ ಕೆಲವು ರೈತರಿಗೆ ಪರಿಹಾರ ನೀಡಿಲ್ಲ ಎಂದು ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಇದನ್ನೂ ಓದಿ:ಮೂರು ತಿಂಗಳಲ್ಲಿ ಎರಡನೇ ಬಾರಿ ವಿಶ್ವ ಚಾಂಪಿಯನ್ ಕಾರ್ಲ್ಸನ್ ವಿರುದ್ಧ ಗೆದ್ದ ಪ್ರಗ್ನಾನಂದ
ಗದ್ದೆಗಳಿಗೆ ನೀರು ನುಗ್ಗಲು ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ. ಮಳೆಯಾಗುವ ಸಂದರ್ಭದಲ್ಲಿ ಸೇತುವೆಗಳಿಗೆ ಅಡ್ಡಲಾಗಿ ಹಾಕಿರುವ ಗೇಟ್ಗಳನ್ನು ತೆಗೆಯಬೇಕು ಆದರೆ ಅಧಿಕಾರಿಗಳು ಗೇಟ್ಗಳನ್ನು ತೆಗೆಯದಿರುವುದರಿಂದ ರೈತರ ಬೆಳೆಗಳು ನಾಶವಾಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೆ ರೈತರ ಪಂಪ್ ಸೆಟ್ಗಳು ನೀರಿನಲ್ಲಿ ಮುಳುಗಡೆಯಾಗಿವೆ. –ಪದ್ಮಾಕರ ಉಂದ್ರಿ ರೈತ ಸಂಘದ ಮುಖಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಭಜನೆ ಆಗುವುದಿಲ್ಲ, ಜನಸಂಖ್ಯೆಗೆ ಅನುಗುಣವಾಗಿ ರಾಜ್ಯಗಳ ನಿರ್ಮಾಣ: ಕತ್ತಿ
ಬೆಳಗಾವಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನಾಲೆಗೆ ಬಿದ್ದ ಕೂಲಿ ಕೆಲಸಗಾರರಿದ್ದ ಕ್ರೂಸರ್: ಸ್ಥಳದಲ್ಲೇ ಏಳು ಜನರ ಸಾವು, ಮೂವರು ಗಂಭೀರ
ಮಕ್ಕಳ ಪ್ರತಿಭೆ ಉತ್ತೇಜನಕ್ಕೆ “ಕಿಡ್ಸ್ ಝೋನ್’ ಉದ್ಘಾಟನೆ
ಮೂಡಲಗಿಯ ಹಳ್ಳದಲ್ಲಿ ಪತ್ತೆಯಾಗಿದ್ದ ಭ್ರೂಣಗಳಲ್ಲಿ ಜನ್ಮಜಾತ ಬೆಳವಣಿಗೆಯ ವೈಪರೀತ್ಯ
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ರೈಲ್ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್ ಕಸಿದು ಪರಾರಿ; ದೂರು
ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ
ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್ ಪದಾರ್ಪಣೆ
ವಿಂಬಲ್ಡನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ: ವೀನಸ್ ದಾಖಲೆ ಮುರಿಯುವತ್ತ ಸ್ವಿಯಾಟೆಕ್
ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್ ಇನ್ನಿಲ್ಲ