ಮೂಡಲಗಿಯ ಐದು ಸೇತುವೆಗಳು ಸಂಪೂರ್ಣ ಮುಳಗಡೆ: ಸಂಚಾರ ಸ್ಥಗಿತ


Team Udayavani, May 21, 2022, 11:15 AM IST

1rain

ಮೂಡಲಗಿ: ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಿರಣ್ಯಕೇಶಿ ನದಿಯಿಂದ ಘಟಪ್ರಭಾ ನದಿಗೆ ನೀರು ಹರಿದು ಬರುತ್ತಿದ್ದು, ಮೂಡಲಗಿ ತಾಲೂಕಿನ ಘಟಪ್ರಭಾ ನದಿಯ ಐದು ಸೇತುವೆಗಳು (ಬ್ರೀಡ್ಜ್ ಕಂ ಬ್ಯಾರೇಜ್) ಹಾಗೂ ನದಿ ದಡದಲ್ಲಿರುವ ಕೃಷಿ ಭೂಮಿಗಳು ಜಲಾವೃತಗೊಂಡಿದೆ.

ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಘಟಪ್ರಭಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ಸುಣಧೋಳಿ, ಕಮಲದಿನ್ನಿ, ಹುಣಶ್ಯಾಳ ಪಿ.ವೈ, ಅವರಾದಿ, ಢವೇಳಶ್ವರ ಸೇತುವೆಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

ಕೊರೋನಾ ಸಂಕಷ್ಟ ಹಾಗೂ ಕಳೆದ ವರ್ಷ ಜೂನ್ ನಲ್ಲಿ ಭಾರಿ ಪ್ರಮಾಣದ ನೀರು ನುಗ್ಗಿ, ಸಾವಿರಾರೂ ಎಕರೆ ಕೃಷಿಗೆ ಹಾನಿಯುಂಟಾಗಿತ್ತು. ಈ ಭಾರಿ ಅದೇ ರೀತಿಯಲ್ಲಿ ಗೋವಿನ ಜೋಳ, ಕಬ್ಬಿನ ಗದ್ದೆಗಳಲ್ಲಿ ನೀರು ನುಗ್ಗಿದ್ದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಅಧಿಕಾರಿಗಳ ನಿರ್ಲಕ್ಷ: ಮಳೆಗಾಲ ಸಂದರ್ಭದಲ್ಲಿ ಸೇತುವೆಗಳಿಗೆ ಹಾಕಲಾಗಿದ್ದ ಗೇಟ್‌ಗಳನ್ನು ತೆಗೆಯದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಇದರಿಂದಾಗಿ ಸೇತುವೆಗಳು ಹಾಗೂ ರೈತರ ಗದ್ದೆಗಳಿಗೆ ನೀರು ನುಗ್ಗಿದೆ. ಗದ್ದೆಗಳಿಗೆ ನೀರು ನುಗ್ಗಿ ಬೆಳೆ ನಾಶವಾಗುತ್ತಿದ್ದು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೇ ಇದಕ್ಕೆ ಕಾರಣ ಎಂದು ರೈತಾಪಿ ವರ್ಗದವರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಕೈ ಸೇರದ ಬೆಳೆ ಪರಿಹಾರ: ಕಳದ ವರ್ಷ ಜೂನ್ ತಿಂಗಳಲ್ಲಿ ಮಳೆಯಿಂದಾಗಿ ಘಟಪ್ರಭಾ ನದಿಯ ನೀರಿನ ಮಟ್ಟ ಹೆಚ್ಚಾಗಿದರಿಂದ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದ ಸಾವಿರಾರೂ ಎಕರೆ ಗದ್ದೆಗಳಿಗೆ ನೀರು ನುಗ್ಗಿದ ಪರಿಣಾಮ ರೈತರು ಬೆಳದ ಬೆಳೆ ನಾಶವಾಗಿತ್ತು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆಗಳು ಜಂಟಿಯಾಗಿ ಬೆಳೆ ಸಮಿಕ್ಷೆ ಮಾಡಿತ್ತು. ಹಾನಿಯಾದ ಬೆಳೆಗೆ ಕಂದಾಯ ಇಲಾಖೆಯಿಂದ ಪರಿಹಾರವನ್ನು ಕೊಡಿಸಲಾಗುವುದು ಎಂದು ಭರವಸೆಯನ್ನು ಅಧಿಕಾರಿಗಳು ನೀಡಿದ್ದರು. ಆದರೆ ಕೆಲವು ರೈತರಿಗೆ ಪರಿಹಾರ ನೀಡಿಲ್ಲ ಎಂದು ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಮೂರು ತಿಂಗಳಲ್ಲಿ ಎರಡನೇ ಬಾರಿ ವಿಶ್ವ ಚಾಂಪಿಯನ್ ಕಾರ್ಲ್‌ಸನ್ ವಿರುದ್ಧ ಗೆದ್ದ ಪ್ರಗ್ನಾನಂದ

ಗದ್ದೆಗಳಿಗೆ ನೀರು ನುಗ್ಗಲು ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ. ಮಳೆಯಾಗುವ ಸಂದರ್ಭದಲ್ಲಿ ಸೇತುವೆಗಳಿಗೆ ಅಡ್ಡಲಾಗಿ ಹಾಕಿರುವ ಗೇಟ್‌ಗಳನ್ನು ತೆಗೆಯಬೇಕು ಆದರೆ ಅಧಿಕಾರಿಗಳು ಗೇಟ್‌ಗಳನ್ನು ತೆಗೆಯದಿರುವುದರಿಂದ ರೈತರ ಬೆಳೆಗಳು ನಾಶವಾಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೆ ರೈತರ ಪಂಪ್ ಸೆಟ್‌ಗಳು ನೀರಿನಲ್ಲಿ ಮುಳುಗಡೆಯಾಗಿವೆ.  –ಪದ್ಮಾಕರ ಉಂದ್ರಿ ರೈತ ಸಂಘದ ಮುಖಂಡ

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

Chikkodi ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಘೋಷಣೆ: ಸತೀಶ ಜಾರಕಿಹೊಳಿ 

Chikkodi ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿ ಫೈನಲ್‌: ಸಚಿವ ಸತೀಶ ಜಾರಕಿಹೊಳಿ 

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.