ಪ್ರವಾಹ ಪ್ರಹಾರ


Team Udayavani, Aug 6, 2019, 12:41 PM IST

bg-tdy-3
ಬೆಳಗಾವಿ: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಮಳೆಯ ರಭಸದ ಆಟ ಮುಂದುವರಿದಿದೆ. ನದಿಗಳ ಅಬ್ಬರ ಹೆಚ್ಚುತ್ತಲೇ ಇದೆ. ಇದೆಲ್ಲದರ ಪರಿಣಾಮ ಚಿಕ್ಕೋಡಿ, ಅಥಣಿ, ರಾಯಬಾಗ, ಗೋಕಾಕ, ಖಾನಾಪುರ ತಾಲೂಕುಗಳಲ್ಲಿ ನದಿಗಳ ಪ್ರವಾಹದ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ರಾಮದುರ್ಗ ತಾಲೂಕು ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲ ತಾಲೂಕುಗಳ ಶಾಲೆಗಳಿಗೆ ಆ.6 ಹಾಗೂ 7 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಎಸ್‌.ಬಿ. ಬೊಮ್ಮನಹಳ್ಳಿ ಅದೇಶ ಹೊರಡಿಸಿದ್ದಾರೆ. ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಮಾರ್ಕಂಡೇಯ, ದೂದಗಂಗಾ ಹಾಗೂ ವೇದಗಂಗಾ ನದಿಗಳ ಪ್ರವಾಹದಿಂದ ಚಿಕ್ಕೋಡಿ, ಅಥಣಿ, ರಾಯಬಾಗ, ಖಾನಾಪುರ, ಮೂಡಲಗಿ, ಕಾಗವಾಡ ಹಾಗೂ ಗೋಕಾಕ ತಾಲೂಕುಗಳಲ್ಲಿ 30 ಸೇತುವೆಗಳು ನೀರಿನಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಯುವಕ ನೀರುಪಾಲು: ಈ ಮಧ್ಯೆ ಕುಂಭದ್ರೋಣ ಮಳೆಗೆ ಕೃಷ್ಣೆಯ ಪ್ರವಾಹ ಪ್ರಹಾರಕ್ಕೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಕೃಷ್ಣಾ ನದಿ ದಡದ ಅಥಣಿ ತಾಲೂಕಿನ ಗ್ರಾಮದಲ್ಲಿ ಜಾನುವಾರುಗಳಿಗೆ ಮೇವು ನೀಡಲು ಹೋಗಿದ್ದ ಯುವಕನೊಬ್ಬ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಮಾರುತಿ ಜಾಧವ್‌ (34) ಮೃತ ವ್ಯಕ್ತಿ. ಹುಲಗಬಾಳಿ ಗ್ರಾಮದ ಮಾಂಗ ತೋಟದ ಮನೆಯ ಬಳಿ ಈ ಘಟನೆ ನಡೆದಿದೆ. ರವಿವಾರ ಜಾನುವಾರುಗಳನ್ನು ತೋಟದ ಮನೆಯಲ್ಲೇ ಬಿಟ್ಟು ಕೇವಲ ಮಾರುತಿ ಕುಟುಂಬದ ಸದಸ್ಯರನ್ನು ಮಾತ್ರ ಸ್ಥಳಾಂತರಿಸಲಾಗಿತ್ತು. ಆದರೆ ತಮ್ಮ ಜಾನುವಾರುಗಳು ತೋಟದ ಮನೆಯಲ್ಲೇ ಇದ್ದದ್ದರಿಂದ ಬೆಳಿಗ್ಗೆ ಅವುಗಳಿಗೆ ಮೇವು ಹಾಕಲು ಬಂದಿದ್ದ ಮಾರುತಿ ನೀರಿನ ರಭಸಕ್ಕೆ ಸಿಲುಕಿ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಕೊಯ್ನಾ ಜಲಾಶಯ ವ್ಯಾಪ್ತಿಯ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಲೇ ಇದ್ದು ಕೃಷ್ಣಾ ನದಿಯ ಹರಿವಿನ ಪ್ರಮಾಣ ಹೆಚ್ಚುತ್ತಲೇ ಇದೆ. ಇದರಿಂದ ಚಿಕ್ಕೋಡಿ, ಅಥಣಿ ಹಾಗೂ ರಾಯಬಾಗ ತಾಲೂಕಿನ ನದಿ ತೀರದಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. 2005ರಲ್ಲಿ ಬೆಳಗಾವಿ ಜಿಲ್ಲೆಗೆ ಸಾಕಷ್ಟು ಆತಂಕ ಹಾಗೂ ಹಾನಿ ಉಂಟುಮಾಡಿದ್ದ ಮಹಾರಾಷ್ಟ್ರದ ಕೊಯ್ನಾ ಹಾಗೂ ವಾರಣಾ ಜಲಾಶಯ ಭರ್ತಿಯಾಗಿವೆ. ಸದ್ಯದ ಮಾಹಿತಿ ಪ್ರಕಾರ ಕೊಯ್ನಾ ಜಲಾಶಯದಿಂದ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್‌ ಹಾಗೂ ವಾರಣಾ ಜಲಾಶಯದಿಂದ 34 ಸಾವಿರ ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ. ವಾರಣಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೆ ಒಟ್ಟು 105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯದಲ್ಲಿ ಈಗ 100 ಟಿಎಂಸಿ ನೀರು ಸಂಗ್ರಹವಾಗಿದೆ. ಇದರಿಂದ ಕೃಷ್ಣಾ ನದಿಗೆ ರಾಜಾಪುರ ಬ್ಯಾರೇಜ್‌ ಮೂಲಕ 2,27,068 ಹಾಗೂ ದೂಧಗಂಗಾ ನದಿಯಿಂದ 37,312 ಸೇರಿ ಒಟ್ಟು 2,64,380 ಕ್ಯೂಸೆಕ್‌ ನೀರು ಬರುತ್ತಿದೆ.
ಮಳೆ ಆರ್ಭಟದಿಂದ ಮುಳುಗಿದ ಸೇತುವೆಗಳು:

ಚಿಕ್ಕೋಡಿ ತಾಲೂಕು ಕಲ್ಲೋಳ-ಯಡೂರ, ಸದಲಗಾ-ಬೋರಗಾಂವ, ಕಾರದಗಾ-ಭೋಜ, ಬೋಜವಾಡಿ-ಕುನ್ನೂರ. ಯಕ್ಸಂಬಾ-ದಾನವಾಡ, ಸಿದ್ನಾಳ-ಅಕ್ಕೋಳ, ಜತ್ರಾಟ-ಭೀವಶಿ ಹಾಗೂ ಮಲಿಕವಾಡ- ದತ್ತವಾಡ ಸೇತುವೆಗಳು. ಅಥಣಿ: ನದಿ ಇಂಗಳಗಾವ-ತೀರ್ಥ, ಸಪ್ತಸಾಗರ-ಬಾವನಸವದತ್ತಿ, ಕೊಕಟನೂರ-ಶಿರಹಟ್ಟಿ. ಜುಂಜರವಾಡ-ತುಬಚಿ, ಖವಟಕೊಪ್ಪ-ಶೇಗುಣಸಿ, ಕಾಗವಾಡ ತಾಲೂಕು: ಉಗಾರ ಕೆ ಎಚ್-ಉಗಾರ ಬಿ ಕೆ ರಸ್ತೆ. ರಾಯಬಾಗ ತಾಲೂಕು: ಕುಡಚಿ ಸೇತುವೆ, ರಾಯಬಾಗ-ಚಿಂಚಲಿ.ಗೋಕಾಕ: ಶಿಂಗಳಾಪುರ-ಗೋಕಾಕ, ಚಿಗಡೊಳ್ಳಿ-ನಲ್ಲಾನಟ್ಟಿ. ಉದಗಟ್ಟಿ-ವಡೇರಹಟ್ಟಿ. ಮೂಡಲಗಿ: ಸುಣಧೋಳಿ-ಮೂಡಲಗಿ. ಢವಳೇಶ್ವರ-ಮಹಾಲಿಂಗಪುರ. ಹುಣಶ್ಯಾಳ ಪಿ. ಖಾನಾಪುರ: ಮಂತುರ್ಗಾ, ತಿವೋಲಿ, ನಿಲವಡೆ, ಹಾಲತ್ರಿ, ಹಬ್ಟಾನಟ್ಟಿ, ಪಾರಿಶ್ವಾಡ ಹಾಗೂ ಡುಕ್ಕರವಾಡಿ.
ಪಾಲಿಕೆ ಸಹಾಯವಾಣಿ ಕೇಂದ್ರ:

ಕಳೆದ 10 ದಿನಗಳಿಂದ ಬೆಳಗಾವಿ ನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಅನೇಕ ಕಡೆ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಅತಿಯಾದ ಮಳೆಯಿಂದ ತೊಂದರೆಗೆ ಒಳಗಾಗುವ ನಗರ ವ್ಯಾಪ್ತಿಯ ತಗ್ಗು ಪ್ರದೇಶದ ವಾಸಿಗಳ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಮಹಾನಗರಪಾಲಿಕೆಯ ವತಿಯಿಂದ ರಕ್ಷಣಾ ಕಾರ್ಯಾಚರಣೆಯ ತಂಡಗಳನ್ನು ರಚಿಸಲಾಗಿದೆ. ಮಳೆಯಿಂದ ತೊಂದರೆಗೆ ಒಳಗಾಗುವ ನಗರ ವಾಸಿಗಳ ಅನುಕೂಲಕ್ಕಾಗಿ ದೂರು ಸ್ವೀಕರಿಸಲು 24ಗಂಟೆಗಳ ಕಾಲ ಕಾರ್ಯನಿರತವಿರುವ ಸಹಾಯವಾಣಿ ಕೇಂದ್ರವನ್ನು ಪಾಲಿಕೆಯ ಮುಖ್ಯ ಕಚೇರಿಯಲ್ಲಿ ನಿರ್ವಹಿಸಲಾಗುತ್ತಿದೆ. ಪಾಲಿಕೆಯ ವತಿಯಿಂದ ರಚಿಸಲಾದ ರಕ್ಷಣಾ ಕಾರ್ಯಾಚರಣೆಯ ತಂಡಗಳ ಸಹಾಯ ಪಡೆಯಲು ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 0831-2405316 ಅಥವಾ 2405337ನ್ನು ಸಂಪರ್ಕಿಸಬಹುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತ ಇನ್ನು ಬೆಳಗಾವಿ ನಗರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸೋಮವಾರ ಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ತೊಂದರೆ ಉಂಟುಮಾಡಿದೆ. ಇನ್ನೊಂದು ಕಡೆ ಬಳ್ಳಾರಿ ನಾಲಾ ಸಹ ಸಂಪೂರ್ಣ ತುಂಬಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಭತ್ತದ ಗದ್ದೆಗಳಿಗೆ ನುಗ್ಗಿ ರೈತ ಸಮುದಾಯದಲ್ಲಿ ಸಾಕಷ್ಟು ಆತಂಕ ಉಂಟುಮಾಡಿದೆ.
• ಕೇಶವ ಆದಿ 

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.