ಲಾಕ್ ಡೌನ್ ಸಮಯದಲ್ಲಿ ಹೂವಿನ ಬೆಳೆ ಹಾನಿ: ಮನನೊಂದ ರೈತ ಆತ್ಮಹತ್ಯೆ
Team Udayavani, Jun 30, 2020, 10:31 AM IST
ಬೆಳಗಾವಿ: ಲಾಕ್ ಡೌನ್ ಹೂವಿನ ಬೆಳೆ ಹಾನಿಯಾಗಿದ್ದರಿಂದ ಮನನೊಂದು ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ.
ಹಲಗಾ ಗ್ರಾಮದ ಮಾರುತಿ ಭೀಮಾ ಬಿಳಗುಜಿ (63) ಆತ್ಮಹತ್ಯೆ ಮಾಡಿಕೊಂಡ ರೈತ. ಲಾಕ್ ಡೌನ್ ಕ್ಕಿಂತ ಮುಂಚೆ ಹೊಲದಲ್ಲಿ ಹೂ ಬೆಳೆದಿದ್ದನು. ಲಾಕ್ ಡೌನ್ ನಲ್ಲಿ ಹೂ ಮಾರಾಟವಾಗದೇ ಸಂಪೂರ್ಣ ಹಾನಿಯಾಗಿತ್ತು. ಹೂ ಬೆಳೆ ತೆಗೆದು ಬೇರೆ ಬೆಳೆ ಬೆಳೆಯಬೇಕು ಎಂದುಕೊಂಡಿದ್ದನು. ಅಪಾರ ಪ್ರಮಾಣದಲ್ಲಿ ಹಾನಿ ಆಗಿದ್ದರಿಂದ ನೊಂದುಕೊಂಡಿದ್ದನು.
ಹೊಲದಲ್ಲಿಯ ಮನೆಯ ಎದುರು ಇರುವ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ರೈತ ಮಾರುತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಹಿರೇಬಾಗೇವಾಡಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು.
ಈ 15 ದಿನಗಳ ಅವಧಿಯಲ್ಲಿ ಒಟ್ಟು ಮೂವರು ರೈತರು ಬೆಳೆ ಹಾನಿಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಂತಾಗಿದೆ. ತಾಲೂಕಿನಲ್ಲಿ ರೈತರ ಆತ್ಮಹತ್ಯೆ ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ