ಜಾನಪದ ಕಲಾಮೇಳಕ್ಕೆ ಅದ್ಧೂರಿ ಚಾಲನೆ


Team Udayavani, Jan 13, 2020, 12:12 PM IST

bg-tdy-3

ಬೈಲಹೊಂಗಲ: ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತಾಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುಟ್ಟುರಿನ ಗ್ರಾಮದಲ್ಲಿ ರವಿವಾರ ಪ್ರಾರಂಭಗೊಂಡ ಸಂಗೊಳ್ಳಿ ರಾಯಣ್ಣ ಉತ್ಸವ 2020ರ ಜಾನಪದ ಕಲಾಮೇಳಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

ಶಾಸಕ ಮಹಾಂತೇಶ ಕೌಜಲಗಿ, ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ , ತಹಶೀಲ್ದಾರ್‌ ಡಾ.ದೊಡ್ಡಪ್ಪ ಹೂಗಾರ, ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಹಳೇಮನಿ, ಉಪಾಧ್ಯಕ್ಷ ಬಸವರಾಜ ಕೊಡ್ಲಿ ಅವರು ನಂದಗಡ ಗ್ರಾಮದಿಂದ ಸಂಗೊಳ್ಳಿ ಗ್ರಾಮಕ್ಕೆ ಆಗಮಿಸಿದ ರಾಯಣ್ಣನ ವೀರ ಜ್ಯೋತಿ, ಸಂಗೊಳ್ಳಿ ರಾಯಣ್ಣ ಯುವ ಜಾಗೃತಿ ರಥ ಯಾತ್ರೆಯನ್ನು ಸ್ವಾಗತಿಸಿದರು. ಕಿತ್ತೂರು ಸಂಸ್ಥಾನದ ಧ್ವಜಾರೋಹಣವನ್ನು ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ನೆರವೇರಿಸಿದರು.  ಜಾನಪದ ಕಲಾ ವಾಹಿನಿಯನ್ನು ಶಾಸಕ ಮಹಾಂತೇಶ ಕೌಜಲಗಿ ಹಾಗೂ ಅಧಿಕಾರಿ ವರ್ಗ ಉದ್ಘಾಟಿಸಿ ಕಲಾಮೇಳಕ್ಕೆ ಚಾಲನೆ ನೀಡಿದರು.

ಜಾನಪದ ಕಲಾಮೇಳ: ಸಂಗೊಳ್ಳಿ ಉತ್ಸವದಲ್ಲಿ ವಿವಿಧ ಕಲಾವಿದರಿಂದ ನಡೆದ ಕಲಾಮೇಳ ನೋಡುಗರನ್ನು ಜನಾಕರ್ಷಿಸಿತು. ಗ್ರಾಮದಲ್ಲಿ ರಂಗೋಲಿಯ ಚಿತ್ತಾರ, ನಾನಾ ಕಲಾ ತಂಡಗಳ ದೃಶ್ಯ ನಯನ ಮನೋಹರವಾಗಿತ್ತು. ವಿಧವಿಧವಾದ ಉಡುಪು ತೊಟ್ಟಿದ್ದ ಕಲಾವಿದರು ಉತ್ತಮ ಕಲಾಪ್ರದರ್ಶನ ನೀಡಿದರು.

ಗಮನ ಸೆಳೆದ ರೂಪಕಗಳು: ಕಲ್ಲೋಳಿಯ ಗಂಗಪ್ಪ ಮೂಡಲಗಿ ವೀರಗಾಸೆ, ಶೀವನಪ್ಪ ಚಂದರಗಿ ತಂಡದ ಡೊಳ್ಳು ಕುಣಿತ, ಬಾಳಪ್ಪ ಭಜಂತ್ರಿ ತಾಸೆ ವಾದನ, ಯಮನವ್ವ ಮಾದರ ಮಹಿಳಾ ಡೊಳ್ಳು ಕುಣಿತ ಮಹಾದೇವ ಗುಂಡೇನಟ್ಟಿ ತಂಡದ ಜಗ್ಗಲಗಿ, ಹುಬ್ಬಳ್ಳಿಯ ಗೊಂಬೆ ಕುಣಿತ, ಸಾಗರದ ಮಹಿಳಾ ಡೊಳ್ಳು ಮೇಳ, ಗೋಕಾಕ ಮಹಾಂತೇಶ ಹೂಗಾರ ತಂಡದ ಸಂಬಳ ವಾದನ, ಸಾರವಾಡದ ಗೊಂಬೆ ಕುಣಿತ, ತುಮಕೂರಿನ ಹುಲಿ ವೇಷ, ಸಂಗೊಳ್ಳಿ ಮರಿಯಮ್‌ ಕಲಾ ತಂಡದ ಕರಡಿ ಮಜಲು, ಜೋಕಾನಟ್ಟಿಯ ಮಹಿಳಾ ಡೊಳ್ಳು ಕುಣಿತ, ನಾಗನೂರಿನ ಯಮದೂತ ತಂಡ, ಹಂದಿಗುಂದ ಜಾಂಝಮೇಳ, ಶಾಲಾ ವಿದ್ಯಾರ್ಥಿಗಳ ರೂಪಕಗಳು ನೋಡುಗರ ಗಮನ ಸೆಳೆದವು.

ಕಲಾಮೇಳದಲ್ಲಿ ಸಾವಿರಾರು ಸುಮಂಗಲೆಯರ ಭವ್ಯ ಕುಂಭಮೇಳದಲ್ಲಿ ಪಾಲ್ಗೊಂಡಿದ್ದು ಕಲಾತಂಡಕ್ಕೆ ಮೆರಗು ನೀಡಿತು. ಬೆಳಗ್ಗೆ ಪ್ರಾತಃಕಾಲದಲ್ಲಿ ಸಂಗೊಳ್ಳಿ ಗುರುಸಿದ್ಧಲಿಂಗೇಶ್ವರ ಸಂಸ್ಥಾನದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಅರ್ಚಕ ಬಸವರಾಜ ಡೊಳ್ಳಿನ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ವಿವಿಧ ಪುಷ್ಪಗಳಿಂದ ರಾಯಣ್ಣ ಮೂರ್ತಿಯನ್ನು ಅಲಂಕರಿಸಲಾಗಿತ್ತು. ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಗ್ರಾಮಸ್ಥರು ರಾಗಿ ಅಂಬಲಿ, ಶರಬತ್ತು ವಿತರಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಶ್ವೇತಾ ಹೊಸಮನಿ, ತಹಶೀಲ್ದಾರ ಡಾ| ಡಿ.ಎಚ್‌.ಹೂಗಾರ, ತಾಪಂ.ಇಓ ಸಮೀರ ಮುಲ್ಲಾ, ಸಿಡಿಪಿಒ ಮಹಾಂತೇಶ ಭಜಂತ್ರಿ, ಸಮಾಜ ಕಲ್ಯಾಣಾಕಾರಿ ಮಹೇಶ ಉಣ್ಣಿ, ಸಿಪಿಐ ಮಂಜುನಾಥ ಕುಸಗಲ್‌, ಪಿಎಸ್‌ಐ ಎಂ.ಎಸ್‌.ಹೂಗಾರ, ಗ್ರೇಡ್‌-2 ತಹಶೀಲ್ದಾರ ಮಂಜುನಾಥ ಮುನವಳ್ಳಿ, ಡಾ| ಎಸ್‌.ಎಸ್‌.ಸಿದ್ದನ್ನವರ, ಗಾಯಿತ್ರಿ ಲೋಕನ್ನವರ, ಡಾ.ಭಾರತಿ ಹುಡೇದ,  ಡಾ| ಸುಷ್ಮಾ ಬಾಳಿಮಟ್ಟಿ, ನೀಲವ್ವ ಫಕೀರನ್ನವರ,

ಯಲ್ಲವ್ವಾ ಹಳೇಮನಿ, ಬಸವರಾಜ ಕೊಡ್ಲಿ, ಅನಿಲ ಮೇಕಲಮರಡಿ, ಎಂ.ಡಿ.ಹಿರೇಮಠ, ಎಸ್‌.ಬಿ.ಮಠದ, ಅರುಣ ಕೊಟಿಹಾಳ, ಎನ್‌.ವೈ.ಕುರಿ, ರಮೇಶ ಶೀಗಿಹಳ್ಳಿ, ಪಿ.ಎಂ.ಕಂಬಾರ, ಮಮತಾಜ ಛಬ್ಬಿ, ಬಸವರಾಜ ಕಮತ, ಮಲ್ಲಿಕಾರ್ಜುನ ಕೊಡೊಳ್ಳಿ ಇದ್ದರು.

 

-ಸಿ.ವೈ.ಮೆಣಶಿನಕಾಯಿ

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.