ಸಮಗ್ರ ಕೃಷಿ ಪದ್ಧತಿ ಅನುಸರಿಸಿ

ಕೃಷಿ ಸಮಾವೇಶಗಳು ಗ್ರಾಮೀಣ ಪ್ರದೇಶದಲ್ಲಿ ನಡೆಯಲಿ: ಸಚಿವ ಪಾಟೀಲ

Team Udayavani, Mar 15, 2022, 2:39 PM IST

13

ಚಿಕ್ಕೋಡಿ: ರೈತರು ಸಮಗ್ರ ಕೃಷಿ ನೀತಿ ಅಳವಡಿಸಿಕೊಂಡು ಕೃಷಿ ಮಾಡಿದರೆ ಪ್ರಧಾನಿ ನರೇಂದ್ರ ಮೋದಿ ಅವರ ಅಸೆಯಂತೆ ರೈತರ ಆದಾಯ ದ್ವಿಗುಣವಾಗಲಿದೆ. ರೈತರು ಕೃಷಿ ಮಾಡಲು ಹಿಂದೇಟು ಹಾಕದೇ ಕೃಷಿಯಲ್ಲಿಯೇ ಉದ್ಯೋಗ ಕೊಡುವ ಕೃಷಿ ಉದ್ಯಮಿಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ತಾಲೂಕಿನ ಅಂಕಲಿ ಗ್ರಾಮದಲ್ಲಿ ಬೆಂಗಳೂರಿನ ಐಸಿಎಆರ್‌ ಅಟಾರಿ, ಮತ್ತಿಕೊಪ್ಪದ ಕೆಎಲ್‌ಇ ಸಂಸ್ಥೆ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸೋಯಾಬೀನ್‌ ಹಾಗೂ ಕಬ್ಬು ಬೆಳೆಯುವ ರೈತರ, ವಿಜ್ಞಾನಿಗಳ ಮತ್ತು ಉದ್ಯಮಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ನಗರ, ಪಟ್ಟಣ ಪ್ರದೇಶಗಳಲ್ಲಿ ನಡೆಯುವ ಕೃಷಿ ಸಮ್ಮೇಳನ ಗ್ರಾಮೀಣ ಪ್ರದೇಶದಲ್ಲಿ ನಡೆಯುವುದು ಅತೀ ಮುಖ್ಯವಾಗಿದೆ. ಕೃಷಿ ವಿಜ್ಞಾನಿಗಳ ಮೂಲಕ ರೈತರಿಗೆ ಕೃಷಿ ಕುರಿತು ಮಾರ್ಗದರ್ಶನ ನೀಡುವ ಕಾರ್ಯಕ್ರಮ ಇಂದಿನ ದಿನಗಳಲ್ಲಿ ಅವಶ್ಯಕವಾಗಿದೆ. ಈ ದೇಶ ಸದೃಢವಾಗಿ ಬೆಳೆಯಲು ರೈತರು ಬೆಳೆಯುವ ಆಹಾರ ಮುಖ್ಯವಾಗಿದೆ ಎಂದರು.

ಕೃಷಿ ಸಚಿವನಾದ ಮೇಲೆ ಕೃಷಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ. ಇಲಾಖೆ ದೂರವಾಣಿಯಲ್ಲಿ ಹಲೋ ಬದಲು ಜೈಕಿಸಾನ್‌ ಎನ್ನುವ ಸಂದೇಶ ಅಳವಡಿಸಲಾಗಿದೆ. ರೈತರು ಸಂಕೋಚ ಪಡದೇ ಕೃಷಿಯತ್ತ ಮುನ್ನುಗ್ಗಬೇಕು. ಅನ್ನ ಕೊಡುವ ರೈತನ ತಾಕತ್ತು ಯಾವ ಉದ್ಯಮಿಗಳಿಗೂ ಸಾಧ್ಯವಿಲ್ಲ ಎಂದರು.

ಕಬ್ಬಿನ ಬೆಳೆಯ ಜೊತೆಗೆ ಸೋಯಾಬೀನ್‌ ಕೃಷಿ ಮಾಡುವುದು ಸೂಕ್ತವಾಗಿದೆ. ಎಣ್ಣೆ ಪದಾರ್ಥ ಬೆಳೆ ದೇಶಕ್ಕೆ ಹೆಚ್ಚಾಗಬೇಕಿದೆ. ದೇಶಕ್ಕೆ ಸುಮಾರು 75 ಸಾವಿರ ಕೋಟಿಯಷ್ಟು ಎಣ್ಣೆ ಪದಾರ್ಥಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಅದೇ ನಮ್ಮ ದೇಶದಲ್ಲಿ ಹೆಚ್ಚಿನ ಎಣ್ಣೆ ಪದಾರ್ಥ ಬೆಳೆ ಅವಶ್ಯಕ ಎಂದರು.

ರೈತರು ಒಂದೇ ಕೃಷಿಯತ್ತ ಮನಸ್ಸು ಮಾಡದೇ ಹತ್ತು ಬೆಳೆ ಬೆಳೆಯಲು ಮುಂದಾಗಬೇಕು. ಹವಾಮಾನ ಸೇರಿದಂತೆ ಇನ್ನಿತರ ಕಾರಣಗಳಿಂದ ಬೆಳೆ ಹಾನಿಯಾದರೆ ಒಂದು ಬೆಳೆಯಾದರೂ ರೈತನ ಕೈಹಿಡಿಯುತ್ತದೆ. ರೈತರು ತಂತ್ರಜ್ಞಾನ ಅಳವಡಿಸಿಕೊಂಡು ಸಮಗ್ರ ಕೃಷಿ ನೀತಿ ಅನುಸರಿಸಬೇಕು. ರಾಜ್ಯ ಸರ್ಕಾರ ರೈತರ ಮಕ್ಕಳಿಗೆ ವಿವಿಧ ಯೋಜನೆ ಜಾರಿ ಮಾಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ| ಪ್ರಭಾಕರ ಕೋರೆ ಮಾತನಾಡಿ, ಸರ್ಕಾರಿ ನೌಕರಿಗೆ ಇರುವ ಮಾನ್ಯತೆ ಕೃಷಿಕರಿಗೂ ಬರಬೇಕು. ಕೃಷಿ ಉಳಿದರೆ ಮಾತ್ರ ದೇಶದ ಭವಿಷ್ಯ ಸುಭದ್ರವಾಗಿರುತ್ತದೆ. ಯುವಕರು ಕೃಷಿ ಕಡೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.

ವೇದಿಕೆ ಮೇಲೆ ಐಸಿಎಆರ್‌ ಅಟಾರಿ ನಿರ್ದೇಶಕ ಡಾ| ವಿ.ವೆಂಕಟಸುಬ್ರಮಣಿಯನ್‌, ಡಾ| ನೀತಾ ಖಾಂಡೇಕರ, ಭರತೇಶ ಬಣವನೆ, ಮಲ್ಲಿಕಾರ್ಜುನ ಕೋರೆ, ಡಾ| ಆರ್‌ .ಬಿ.ಖಂಡಗಾವಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಹೇಶ ಭಾತೆ, ಸುರೇಶ ಪಾಟೀಲ, ಡಾ| ಪ್ರಸಾದ ರಾಂಪೂರೆ ಮುಂತಾದವರು ಇದ್ದರು. ಬಿ.ಆರ್‌.ಪಾಟೀಲ ಸ್ವಾಗತಿಸಿದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.