ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಸದಾಶಿವರಾವ್ ಭೋಸಲೆ ಇನ್ನಿಲ್ಲ
Team Udayavani, Apr 15, 2021, 10:57 AM IST
ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಹಾಗೂ ಮಾಜಿ ಶಾಸಕ ಸದಾಶಿವರಾವ್ ಬಾಪುಸಾಹೇಬ ಭೋಸಲೆ (101) ಗುರುವಾರ ಬೆಳಗ್ಗೆ ತಾಲೂಕಿನ ಕಡೋಲಿ ಗ್ರಾಮದ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು.
ಕೆಲವು ದಿನಗಳಿಂದ ಸದಾಶಿವರಾವ್ ಅವರು ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮಗಳನಲ್ಲಿಯೂ ಪಾಲ್ಗೊಳ್ಳುತ್ತಿರಲಿಲ್ಲ. ಸದಾಶಿವ ರಾವ್ ಭೋಸಲೆ ಅವರು ಪುತ್ರ, ಪುತ್ರಿ ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ. ಗುರುವಾರ ಮಧ್ಯಾಹ್ನ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಅಪ್ಪಟ ಗಾಂಧಿವಾದಿ ಆಗಿದ್ದ ಮಾಜಿ ಸದಾಶಿವರಾವ್ ಭೋಸಲೆ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಗಾಂಧೀಜಿ ಹಾಗೂ ವಿನೋಬಾ ಭಾವೆ ಅವರ ವಿಚಾರಧಾರೆ, ಆದರ್ಶಗಳನ್ನು ಅಳವಡಿಸಿಕೊಂಡಿದ್ದರು. ಜೀವನದ ಕೊನೆಯ ದಿನಗಳವರೆಗೂ ಆ ವಿಚಾರಧಾರೆಗಳಿಗೆ ಕಟಿಬದ್ಧರಾಗಿದ್ದರು.
ಇದನ್ನೂ ಓದಿ:10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ
ಬ್ರಿಟಿಷ್ ಸರ್ಕಾರ 1946ರಲ್ಲಿ ಚುನಾವಣೆ ನಡೆಸಿದಾಗ ಬೆಳಗಾವಿಯು ಮುಂಬೈ ಪ್ರಾಂತ್ಯಕ್ಕೆ ಒಳಪಟ್ಟಿತ್ತು. ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು. 1952ರಲ್ಲಿ ಹಿರೇಬಾಗೇವಾಡಿ ಕ್ಷೇತ್ರದಿಂದ ಶಾಸಕರಾಗಿದ್ದರು. ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿ 1954ರಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಭೂ ದಾನ ಚಳವಳಿಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
ತಮಗೆ ಹಾಗೂ ಪತ್ನಿಗೆ ಬೇಕಾದ ಖಾದಿ ಬಟ್ಟೆಗಳನ್ನು ಚರಕದಲ್ಲಿ ಸ್ವತಃ ಅವರೇ ಸಿದ್ಧಪಡಿಸಿಕೊಳ್ಳುತ್ತಿದ್ದರು. ಗ್ರಾಮದಲ್ಲಿ ಸಾವಯವ ಕೃಷಿ ನಡೆಸುತ್ತಿದ್ದರು. ಸರಳ ಜೀವನ ನಡೆಸುತ್ತಿದ್ದರು. ಕಡೋಲಿ ಸಮೀಪದ ದೇವಗಿರಿಯಲ್ಲಿ ಕಟ್ಟಡ ಕಟ್ಟಿಸಿ ಅದಕ್ಕೆ ‘ಗಾಂಧಿ ಘರ್’ಎಂದು ಹೆಸರಿಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು