ನಾಲ್ಕು ಕೆಳಹಂತದ ಸೇತುವೆ ಸಂಚಾರಕ್ಕೆ ಮುಕ್ತ
Team Udayavani, Jun 23, 2021, 5:31 PM IST
ಚಿಕ್ಕೋಡಿ: ಮಹಾರಾಷ್ಟ್ರದ ಜಲಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದ್ದು ಕೃಷ್ಣಾ ನದಿ 4 ಅಡಿ ಮತ್ತು ದೂಧಗಂಗಾ ಮತ್ತು ವೇದಗಂಗಾ ನದಿಗಳಲ್ಲಿ ನೀರಿನ ಮಟ್ಟ 2 ಅಡಿ ಇಳಿಕೆಯಾಗಿದ್ದು, ವೇದಗಂಗಾ ನದಿಗೆ ಅಡ್ಡಲಾಗಿರುವ 4 ಕೆಳಹಂತದ ಸೇತುವೆಗಳು ಸಂಚಾರಕ್ಕೆ ಮುಕ್ತಗೊಂಡಿವೆ.
ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಕುಸಿದಿದ್ದು ರಾಜಾಪೂರ ಬ್ಯಾರೇಜ್ದಿಂದ ಕೃಷ್ಣಾ ನದಿಗೆ 77,625 ಕ್ಯೂಸೆಕ್ ಮತ್ತು ದೂಧಗಂಗಾ ನದಿಗೆ 22,592 ಕ್ಯೂಸೆಕ್ ಹೀಗೆ ಒಟ್ಟು 98,217 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಸೋಮವಾರಕ್ಕಿಂತ 4,361 ಕ್ಯೂಸೆಕ್ ನೀರು ಕಡಿಮೆಯಾಗಿದ್ದರಿಂದ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಸಂಭವನೀಯ ಪ್ರವಾಹ ಆತಂಕ ಕಡಿಮೆಯಾಗಿದೆ.
ವೇದಗಂಗಾ ನದಿಯ ಒಳಹರಿವು ಕಡಿಮೆಯಾಗಿದ್ದರಿಂದ ಭೋಜ-ಹುನ್ನರಗಿ, ಕಾರದಗಾ-ಭೋಜ, ಸಿದ್ನಾಳ-ಅಕ್ಕೋಳ, ಜತ್ರಾಟ-ಭಿವಸಿ, ಭೋಜವಾಡಿ-ಕುನ್ನೂರ ಈ 4 ಬಾಂದಾರಗಳು ಸಂಚಾರಕ್ಕೆ ಮುಕ್ತಗೊಂಡಿದ್ದು, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ಕೃಷ್ಣಾ ನದಿಯ ಕಲ್ಲೋಳ-ಯಡೂರ ಬಾಂದಾರ ಇನ್ನೂ ಮುಳುಗಡೆಯಾಗಿ ಸಂಚಾರ ಸ್ಥಗಿತ ಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಬಹುತೇಕ ಎಲ್ಲ ಬ್ಯಾರೇಜ್ಗಳು ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು