ಫೇಸ್‌ಬುಕ್‌ನಲ್ಲಿ ಯುವತಿ ಹೆಸರಿನಲ್ಲಿ ನಕಲಿ ಖಾತೆ: 19 ಲಕ್ಷ ಬಾಚಿದ್ದ ಖದೀಮ ಅರೆಸ್ಟ್!


Team Udayavani, Jul 30, 2022, 2:40 PM IST

11

ಬೆಳಗಾವಿ: ಫೇಸ್‌ಬುಕ್‌, ಇನ್‌ಸ್ಟಾಗ್ರಾಂನಲ್ಲಿ ಯುವತಿಯ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅನೇಕ ಯುವಕರನ್ನು ಯಾಮಾರಿಸಿ 19 ಲಕ್ಷ ರೂ. ನುಂಗಿದ ಖದೀಮನನ್ನು ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ.

ನಿಪ್ಪಾಣಿ ತಾಲೂಕಿನ ನಾಯಿಂಗ್ಲಜ್‌ ಗ್ರಾಮದ ಮಹಾಂತೇಶ ಮುಡಸೆ ಎಂಬಾತನನ್ನು ಪೊಲೀಸರು ಬಲೆಗೆ ಬೀಳಿಸಿದ್ದಾರೆ. ದುಬೈನಲ್ಲಿರುವ ಬೆಳಗಾವಿಯ ಯುವತಿಯ ಫೋಟೊ ಕದ್ದುಕೊಂಡು ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿ ಅನೇಕ ಯುವಕರನ್ನು ಯಾಮಾರಿಸಿ ಹಣ ದೋಚಿದ್ದನು. ಯುವತಿ ನೀಡಿದ ದೂರಿನ ಮೇರೆಗೆ ಮಹಾಂತೇಶನನ್ನು ಪೊಲೀಸರು ಬಂಧಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಎಂ. ಸ್ನೇಹಾ ಎಂಬ ಹೆಸರಿನಲ್ಲಿ ಮಹಾಂತೇಶ ಖಾತೆ ತೆರೆದು ಯುವತಿಯ ಫೋಟೊ ಅಪ್‌ ಲೋಡ್‌ ಮಾಡಿದ್ದಾನೆ. ನಂತರ ಅನೇಕರಿಗೆ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸಿ ಸ್ನೇಹ ಬೆಳೆಸಿದ್ದಾನೆ. ಫೇಸ್‌ಬುಕ್‌ನಲ್ಲಿ ತಹರೇವಾರಿ ಫೋಟೊಗಳನ್ನು ಅಪ್‌ಲೋಡ್‌ ಮಾಡಿ ಯುವಕರನ್ನು ಸೆಳೆಯುತ್ತಿದ್ದನು. ಹುಡುಗಿಯ ಫೋಟೊಗಳನ್ನು ನಂಬಿ ಅನೇಕರು ಯುವಕನ ಬಲೆಗೆ ಬಿದ್ದಿದ್ದಾರೆ.

ನಂತರ ತಂದೆ, ತಾಯಿಗೆ ಹುಷಾರಿಲ್ಲ. ಆಸ್ಪತ್ರೆಗೆ ಬಂದಿದ್ದೇನೆ. ಹಣ ಕಡಿಮೆ ಇದೆ ಎಂದು ಹೇಳಿದಾಗ ಯುವಕರು ಅಕೌಂಟ್‌ಗೆ ದುಡ್ಡು ಹಾಕಿದ್ದಾರೆ. ನಿತ್ಯವೂ ಅನೇಕ ಜನರೊಂದಿಗೆ ಚಾಟ್‌ ಮಾಡಿ ಬಲೆಗೆ ಬೀಳಿಸಿಕೊಳ್ಳುತ್ತಿದ್ದನು. ಹೀಗೆ 50ಕ್ಕೂ ಹೆಚ್ಚು ಯುವಕರಿಂದ 19 ಲಕ್ಷ ರೂ. ವರೆಗೆ ಬಾಚಿಕೊಂಡಿದ್ದಾನೆ. ಮಹಾಂತೇಶ ಮುಡಸೆ ಪಿಎಸ್‌ಐ ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದನು. ದೈಹಿಕ ಪರೀಕ್ಷೆ ಮುಗಿಸಿ ಲಿಖೀತ ಪರೀಕ್ಷೆ ಬರೆಯುವವನಿದ್ದನು.

ತನ್ನ ಫೋಟೊ ಅಪ್‌ಲೋಡ್‌ ಆಗಿರುವುದನ್ನು ಗಮನಿಸಿದ ದುಬೈನಲ್ಲಿದ್ದ ಯುವತಿ ಬೆಳಗಾವಿಗೆ ಬಂದು ಸಿಇಎನ್‌ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪ್ರಕರಣದ ಬೆನ್ನತ್ತಿದ ಪೊಲೀಸರು ಮೊಬೈಲ್‌ ಲೋಕೇಶನ್‌ ಮೂಲಕ ಮಹಾಂತೇಶ ಮುಡಸೆ ಪತ್ತೆ ಹಚ್ಚಿದ್ದಾರೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.