11ರಂದು ಹಿರಣ್ಯಕೇಶಿ ನದಿಗೆ ಗಂಗಾರತಿ
ನದಿಯಲ್ಲಿ ವಾದ್ಯಮೇಳದೊಂದಿಗೆ ಮಂಗಳಾರತಿ
Team Udayavani, May 8, 2022, 12:37 PM IST
ಹುಕ್ಕೇರಿ: ಕಾಶಿ ಗಂಗಾರತಿ ಮಾದರಿಯಲ್ಲಿ ತಾಲೂಕಿನ ಬಡಕುಂದ್ರಿ ಹೊಳೆಮ್ಮ ದೇವಸ್ಥಾನದ ಪಕ್ಕದಲ್ಲಿರುವ ಹಿರಣ್ಯಕೇಶಿ ನದಿಗೆ ಗಂಗಾರತಿ ಕಾರ್ಯಕ್ರಮವನ್ನು ಮೇ 11ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ದಾಸ ಸಾಹಿತ್ಯ ಪರಿಷತ್ ಸಂಚಾಲಕರಾದ ವಿಜಯಿಂದ್ರಾಚಾರ್ಯ ಜೋಶಿ ಹೇಳಿದರು.
ತಾಲೂಕಿನ ಸುಕ್ಷೇತ್ರ ಬಡಕುಂದ್ರಿ ಶ್ರೀ ಹೊಳೆಮ್ಮದೇವಿ ದೇವಸ್ಥಾನದ ರಾಜಗೋಪುರಕ್ಕೆ ಕಳಸಾರೋಹಣ ಹಾಗೂ ಹೊಳೆಮ್ಮದೇವಿಯ ನೂತನ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭ ಮತ್ತು ಗಂಗಾರತಿ ಕಾರ್ಯಕ್ರಮದ ಪೂರ್ವಸಿದ್ಧತೆಯ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ ಭಾಗದಲ್ಲಿ ಬುಧವಾರ 11ರಂದು ಸಂಜೆ 6 ಗಂಟೆಗೆ ಹಿರಣ್ಯಕೇಶಿ ನದಿಯ ದಡದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡು ಶ್ರದ್ಧಾ ಭಕ್ತಿಯಿಂದ ನದಿಯಲ್ಲಿ ಗಂಗಾರತಿ ಸೇವೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು ಮಾರ್ಗದರ್ಶನಲ್ಲಿ ಶಾಸ್ತ್ರ ಬದ್ಧವಾಗಿ ನದಿಯಲ್ಲಿ ವಾದ್ಯಮೇಳದೊಂದಿಗೆ ಮಂಗಳರಾತಿ ನಡೆಯಲಿದೆ. ದಾಸ ಸಾಹಿತ್ಯ ಭಜನಾ ಮಂಡಳದವರಿಂದ ಏಕ ಕಾಲಕ್ಕೆ ಸಹಸ್ರಕಂಠದಿಂದ ಸಮೂಹಗಾಯನ ಜರುಗಲಿದೆ ಎಂದರು.
ಜಿಪಂ ಸದಸ್ಯ ಹಾಗೂ ಯಾತ್ರಾ ಸಮಿತಿಯ ಸದಸ್ಯ ಪವನ ಕತ್ತಿ ಅವರು ಕಾರ್ಯಕ್ರಮದ ಭಿತ್ತಿಪತ್ರ ಬಿಡಗಡೆಗೊಳಿಸಿ ಮಾತನಾಡಿ, ಜಾಗೃತ ಹೊಳೆಮ್ಮ ದೇವಸ್ಥಾನದ ದೇವಸ್ಥಾನದಲ್ಲಿ ಮೇ 11ರಂದು 12ರಂದು ನಡೆಯುವ ರಾಜಗೋಪುರ ಕಳಾಸಾರೋಹನ ಹಾಗೂ ನೂತನ ಕಟ್ಟದ ಅಡಿಗಲ್ಲು ಹಾಗೂ ರಾಜಗೋಪುರಕ್ಕೆ ಹೆಲಿಕ್ಯಾಪ್ಟರ್ ಮೂಲಕ ತಾಲೂಕಿನ 12 ಮಠದ ಶ್ರೀಗಳು ಪುಷ್ಪಾರ್ಪಾಣೆ ಮಾಡಲಿದ್ದಾರೆ. ಸುಮಾರು ಸಾವಿರಾರು ಜನರು ಪಾಲ್ಗೊಳ್ಳುರುವುದರಿಂದ ಯಾವುದೇ ರೀತಿ ತೊಂದರೆ ಆಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಂದರು.
ದೇವಸ್ಥಾನದ ಟ್ರಸ್ಟ್ ಕಮಿಟಿಯ ಎಚ್.ಎಲ್. ಪೂಜಾರಿ ಮಾತನಾಡಿ, ಭಕ್ತರ ದೇಣಿಗೆಯಿಂದ 11 ಲಕ್ಷ ರೂ. ವೆಚ್ಚದಲ್ಲಿ ರಾಜಗೋಪುರ ಹಾಗೂ ಮುಜರಾಯಿ ಇಲಾಖೆಯಿಂದ 25 ಲಕ್ಷ ಹಣ ಮಂಜೂರಾಗಿದೆ. ಕತ್ತಿ ಕುಟುಂಬದವರಿಂದ ಮಹಾದಾಸೋಹ ವ್ಯವಸ್ಥೆ ಮಾಡಲಾಗಿದೆ ಎಂದರು.
ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಜಿ ಮಾತನಾಡಿ, ಈ ಭಾಗದಲ್ಲಿ ಪ್ರಥಮವಾಗಿ ನಡೆವ ಗಂಗಾರತಿ ಹಿನ್ನೆಲೆಯಲ್ಲಿ ಹಿರಣ್ಯಕೇಶಿ ನದಿಯನ್ನು 500 ಜನರಿಂದ ಸ್ವತ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಜೊತೆಗೆ ನದಿಯ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ತಾಲೂಕಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಹೇಳಿದರು.
ಬಡಕುಂದ್ರಿ ಗ್ರಾಪಂ ಅಧ್ಯಕ್ಷ ಶಿವಶಂಕರ ಮಾನಗಾಂವಿ, ಪಿಕೆಪಿಎಸ್ ಅಧ್ಯಕ್ಷ ಸಿದ್ದು ಮಾನಗಾಂವಿ, ಟ್ರಸ್ಟ್ ಕಮಿಟಿ ಪರಪ್ಪ ಮಗದುಮ್ಮ, ಪರಪ್ಪ ವಾಸೇದಾರ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು