ಅಂಗನವಾಡಿ ಆವರಣದಲ್ಲಿ ಕಂಗೊಳಿಸುತ್ತಿದೆ ಕೈತೋಟ


Team Udayavani, Oct 27, 2021, 3:04 PM IST

18anganavadi

ತೆಲಸಂಗ: ಮಕ್ಕಳಿಗೆ ಚಿಕ್ಕವರಿರುವಾಗಲೇ ಪರಿಸರ ಕಾಳಜಿ ಮೂಡಿಸಲು ಹಾಗೂ ಪಾಲಕರಲ್ಲಿ ಪೌಷ್ಟಿಕ ಆಹಾರದ ಕುರಿತು ಜಾಗೃತಿ ಮೂಡಿಸಲು ಅಂಗನವಾಡಿ ಅಂಗಳದಲ್ಲಿ ಕೈತೋಟ ಮಾಡಿ ತರಕಾರಿ ಬೆಳೆಯಲಾಗುತ್ತಿದೆ.

ತೆಲಸಂಗ ವಲಯ ವ್ಯಾಪ್ತಿಯ ತೆಲಸಂಗ, ಕನ್ನಾಳ, ಬನ್ನೂರ, ಹಾಲಳ್ಳಿ ಒಟ್ಟು 4ಗ್ರಾಮಗಳ 19 ಅಂಗನವಾಡಿ ಕೇಂದ್ರಗಳ ಪೈಕಿ 7 ಅಂಗನವಾಡಿ ಕೇಂದ್ರಗಳ ಅಂಗಳದಲ್ಲಿ ಕೈತೋಟ ಹಸಿರಿನಿಂದ ಕಂಗೊಳಿಸಿ ಜನರನ್ನು ಆಕರ್ಷಿಸುತ್ತಿವೆ.

ಸುಮಾರು ಒಂದು ವರ್ಷದ ಹಿಂದೆ ಅಂಗನವಾಡಿ ಅಂಗಳದಲ್ಲಿ ಆಸಕ್ತ ಅಂಗನವಾಡಿ ಕಾರ್ಯಕರ್ತೆಯರು ಕೈತೋಟ ಮಾಡುವಂತೆ ಇಲಾಖೆ ಹೇಳಿತ್ತು. ಕೈತೋಟ ಹೇಗೆ ಮಾಡುವುದು ಎಂದು ತಿಳಿಸಲು ಅನೇಕ ಸಭೆಗಳನ್ನು ನಡೆಸಿ ತರಕಾರಿ ಮತ್ತು ಹಣ್ಣುಗಳ ಬೀಜ ವಿತರಿಸಿ ಉತ್ತೇಜನ ನೀಡಿತ್ತು. ಆದರೆ ಕೆಲ ಅಂಗನವಾಡಿ ಕೇಂದ್ರಗಳಿಗೆ ಅಂಗಳದ ಕೊರತೆ, ಇನ್ನು ಕೆಲ ಅಂಗನವಾಡಿ ಕೇಂದ್ರಗಳಿಗೆ ನೀರಿನ ಕೊರತೆ ಮತ್ತು ಕೆಲ ಕಾರ್ಯಕರ್ತೆಯರ ಇಚ್ಛಾಶಕ್ತಿ ಕೊರತೆಯಿಂದ ಅನೇಕ ಕಡೆ ಕೈತೋಟ ಮಾಡಲು ಸಾಧ್ಯವಾಗಿಲ್ಲ.

ತೆಲಸಂಗ ವ್ಯಾಪ್ತಿಯ 4 ಗ್ರಾಮಗಳ 19 ಕೇಂದ್ರಗಳ ಪೈಕಿ 7 ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಕೈತೋಟ ಮಾಡಿ ಹೌದೆನಿಸಿಕೊಂಡಿದ್ದಾರೆ. ಗ್ರಾಮದ ಬನದನಾಲಾ, ಶಾಸಕರ ಮಾದರಿ ಶಾಲೆ ಆವರಣದಲ್ಲಿನ ಅಂಗನವಾಡಿ ಹಾಗೂ ಎಸ್‌.ಸಿ ಓಣಿ, ಕೆವಿಜಿಬಿ ಬ್ಯಾಂಕ್ ಎದುರಗಡೆಯ ಕೇಂದ್ರ 4ರಲ್ಲಿ ಒಟ್ಟು ಗ್ರಾಮದ 4 ಅಂಗನವಾಡಿ ಕೇಂದ್ರಗಳ ಅಂಗಳದಲ್ಲಿ ಕೈತೋಟ ಮಾಡಿದ್ದಾರೆ. ಇಲ್ಲಿ ಮಕ್ಕಳು, ಮಹಿಳೆಯರಲ್ಲಿ ಕೈತೋಟ, ಪೌಷ್ಟಿಕಾಂಶ, ಸಾವಯುವ ತರಕಾರಿ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಜನರೂ ತಮ್ಮ ಮನೆಯಂಗಳದಲ್ಲಿ ಮನೆಗಾಗುವಷ್ಟು ತರಕಾರಿ ಬೆಳೆಯುವಂತೆ ಪ್ರೋತ್ಸಾಹಿಸಲಾಗುತ್ತಿದೆ.

ಇದನ್ನೂ ಓದಿ: ಜೀವನಾಡಿ ಕೆಆರ್‌ಎಸ್‌ ಡ್ಯಾಂ ಅಂತೂ ಭರ್ತಿ

ಪ್ರತಿ ಅಂಗನವಾಡಿ ಕೇಂದ್ರದ ಆವರಣದಲ್ಲಿ ಕೈತೋಟ ರೂಪಿಸಲು ಕಾರ್ಯಕರ್ತೆಯರ ಶ್ರಮ ಬಹಳಷ್ಟಿದೆ. ನೀರು, ಅಂಗಳದ ಕೊರತೆಯ ಮಧ್ಯೆಯೂ ಕೆಲ ಅಂಗನವಾಡಿ ಕಾರ್ಯಕರ್ತೆಯರು ಮಾದರಿ ಕಾರ್ಯ ಮಾಡಿದ್ದಾರೆ. -ಎಸ್‌.ಎಸ್‌.ಶಾಸ್ತ್ರೀಮಠ ಮೇಲ್ವಿಚಾರಕಿ, ತೆಲಸಂಗ.

ತೋಟ ಮಾಡಲು ನಾವು ಶ್ರಮವಹಿಸಬಹುದು. ಆದರೆ ತೋಟದ ರಕ್ಷಣೆಯ ಜವಾಬ್ದಾರಿ ಬಹಳಷ್ಟಿದೆ. ಶಾಲಾ ಅವ ಧಿಯ ನಂತರ ದನಗಳ ಹಾವಳಿ, ನೀರಿನ ಕೊರತೆ ಇವೆಲ್ಲದರ ಮಧ್ಯೆಯೂ ಅತ್ಯುತ್ತಮವಾಗಿ ತೋಟ ಮಾಡಿದ್ದು ತುಂಬಾ ತೃಪ್ತಿ ತಂದಿದೆ. -ಮಹಾದೇವಿ ಹತ್ತಿ, ಅಂಗನವಾಡಿ ಕೇಂದ್ರ-1 ಕಾರ್ಯಕರ್ತೆ, ತೆಲಸಂಗ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.