ಜನಸೇವೆಗೆ ಇದೊಂದು ಬಾರಿ ಅವಕಾಶ ಕೊಡಿ

ಪ್ರಚಾರಕ್ಕಿಳಿದ ಕಾಂಗ್ರೆಸ್‌ ಎಂಎಲ್‌ಸಿ ಅಭ್ಯರ್ಥಿಗಳಾದ ಪ್ರಕಾಶ ಹುಕ್ಕೇರಿ-ಸುನೀಲ ಸಂಕ

Team Udayavani, May 10, 2022, 12:16 PM IST

10

ಕಾಗವಾಡ: ಶಾಸಕ, ಸಂಸದ, ಸಚಿವ, ವಿಧಾನ ಪರಿಷತ್‌ ಸದಸ್ಯನಾಗಿ ಕಳೆದ 35 ವರ್ಷಗಳಿಂದ ಜನಸೇವೆ ಮಾಡುತ್ತಾ ಬಂದಿದ್ದೇನೆ. ರಾಜ್ಯದ ಶಿಕ್ಷಕರ ಸಮಸ್ಯೆಗಳು ಏನೆಂಬುದನ್ನು ನಾನು ಚೆನ್ನಾಗಿ ಅರಿತಿದ್ದು, ತಮ್ಮ ಸೇವೆ ಮಾಡಲು ಇದೊಂದು ಬಾರಿಗೆ ಆಶೀರ್ವಾದ ಮಾಡುವಂತೆ ಮಾಜಿ ಸಚಿವ ಹಾಗೂ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮನವಿ ಮಾಡಿಕೊಂಡರು.

ಸೋಮವಾರ ಉಗಾರ ಖುರ್ದ ಪಟ್ಟಣದ ಅಲಗೌಡ ಕಾಗೆ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ-ಪದವೀಧರರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಪಕ್ಷ ನನ್ನನ್ನು ಶಿಕ್ಷಕರ ಸಂಘದ ಅಭ್ಯರ್ಥಿಯನ್ನಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ತಮ್ಮೆಲ್ಲರ ಅಭಿಪ್ರಾಯ ಕೇಳಲು ಬಂದಿದ್ದೇನೆ. ತಾವೆಲ್ಲ ಶಿಕ್ಷಕ ಬಂಧುಗಳು ಇಷ್ಟೊಂದು ಹುರುಪಿನಿಂದ ನೂರಾರು ಜನ ಸೇರಿರುವುದನ್ನು ಕಂಡರೆ ಚನ್ನರಾಜ ಹಟ್ಟಿಹೊಳಿ ಅವರ ಹಾಗೆ ಬಹುಮತದಿಂದ ಗೆಲ್ಲುತ್ತೇನೆ ಎಂದು ಪ್ರಕಾಶ ಹುಕ್ಕೇರಿ ವಿಶ್ವಾಸ ವ್ಯಕ್ತಪಡಿಸಿದರು.

ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಮಾತನಾಡಿ, ಪ್ರಕಾಶ ಹುಕ್ಕೇರಿಯವರು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಯ ಜನಪ್ರತಿನಿಧಿಗಳು, ಶಿಕ್ಷಕರು ನನಗೆ ಕರೆ ಮಾಡಿ, ಪ್ರಕಾಶ ಹುಕ್ಕೇರಿ ಒಬ್ಬ ಕೆಲಸಗಾರ. ಅವರನ್ನು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆಂದು ಹೇಳುತ್ತಿರುವುದನ್ನು ಕಂಡರೆ ರಾಜ್ಯದಲ್ಲಿಯೇ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆಂಬ ವಿಶ್ವಾಸ ನನಗಿದೆ ಎಂದು ರಾಜು ಕಾಗೆ ಹೇಳಿದರು.

ಪ್ರೊ. ಮುರಗೇಶ ಪಾಟೀಲ ಮಾತನಾಡಿ, ಅತಿಥಿ ಉಪನ್ಯಾಸಕರನ್ನು ಖಾಯಂ ಗೊಳಿಸುವಲ್ಲಿ ಅರುಣ ಶಹಾಪುರ ಮತ್ತು ಹಣಮಂತ ನಿರಾಣಿಯವರು ಭಾರಿ ಅನ್ಯಾಯ ಮಾಡಿದ್ದಾರೆ. 14 ಸಾವಿರ ಅತಿಥಿ ಉಪನ್ಯಾಸಕರ ಹೊಟ್ಟೆಯ ಮೇಲೆ ಹೊಡೆದಿದ್ದಾರೆ. ಹಣಮಂತ ನಿರಾಣಿ ಹಾಗೂ ಅರುಣ ಶಹಾಪೂರ ಅವರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದಾಗಿ ಹೇಳಿದರು.

ಬಿಜೆಪಿ ಪಕ್ಷದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ಇಂಥ 40 ಪರ್ಸೆಂಟ್‌ ಸರಕಾರಕ್ಕೆ ಪದವೀಧರರು ಮತ್ತು ಶಿಕ್ಷಕರು ತಕ್ಕ ಪಾಠ ಕಲಿಸುತ್ತೇವೆ ಎಂದು ಖಾರವಾಗಿ ನುಡಿದರು. ಈ ವೇಳೆ ಪ್ರಕಾಶ ಹುಕ್ಕೇರಿ ಹಾಗೂ ಅಥಣಿ ನ್ಯಾಯವಾದಿ ಸುನೀಲ ಸಂಕ ಅವರು ಶಿಕ್ಷಕ ಹಾಗೂ ಪದವೀಧರರ ಕುಂದು ಕೊರತೆ ಆಲಿಸಿದರು.

ವೇದಿಕೆಯ ಮೇಲೆ ಮಾಜಿ ಶಾಸಕ ಮೋಹನ ಶಹಾ, ಐನಾಪುರ ಪಟ್ಟಣ ಪಂಚಾಯತ್‌ ಸದಸ್ಯರಾದ ಪ್ರವೀಣ(ಪುಟ್ಟು) ಗಾಣಿಗೇರ, ನ್ಯಾಯವಾದಿ ಸಂಜಯ ಕುಚನೂರೆ, ಕೃಷ್ಣಾ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾದ ಗುಳಪ್ಪ ಜತ್ತಿ, ಸೌರಭ ಪಾಟೀಲ, ಮುಖಂಡರಾದ ಶಿದ್ದಗೌಡ ಕಾಗೆ, ಗಜಾನನ ಯರಂಡೋಲಿ, ಅನಂತಪುರ ಘಟಕದ ಬ್ಲಾಕ್‌ ಅಧ್ಯಕ್ಷ ಓಂಪ್ರಕಾಶ ಪಾಟೀಲ, ಕಾಗವಾಡ ಪಿಕೆಪಿಎಸ್‌ ಅಧ್ಯಕ್ಷ ಜ್ಯೋತಿಕುಮಾರ ಪಾಟೀಲ, ಅಪ್ಪಾಸಾಬ ಮಳಮಳಸಿ, ಅರುಣ ಗಾಣಿಗೇರ, ರಾಜು ಮದನೆ, ಉಮೇಶಗೌಡ ಪಾಟೀಲ, ಸಂಜಯ ಕುಸನಾಳೆ, ನೂರಾರು ಶಿಕ್ಷಕರು, ಹಾಗೂ ಪಧವೀಧರರು ಇದ್ದರು. ಕಾಂಗ್ರೆಸ್‌ ಪಕ್ಷದ ಕಾಗವಾಡ ಬ್ಲಾಕ್‌ ಅಧ್ಯಕ್ಷ ವಿಜಯಕುಮಾರ ಅಕಿವಾಟೆ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.