ಗೋವಾ ಆತ್ಮನಿರ್ಭರ್‌; ಬೆಳಗಾವಿ ವ್ಯಾಪಾರಿಗಳು ದುರ್ಬರ


Team Udayavani, Sep 23, 2022, 3:28 PM IST

21

ಬೆಳಗಾವಿ: ತರಕಾರಿ ಖರೀದಿ ವಿಷಯದಲ್ಲಿ ಬಹುತೇಕ ನೆರೆಯ ಬೆಳಗಾವಿಯನ್ನೇ ಅವಲಂಬಿಸಿರುವ ಗೋವಾ ಇಲ್ಲಿಂದ ತರಕಾರಿ ಖರೀದಿ ಮಾಡುವದನ್ನು ನಿಲ್ಲಿಸಲಿದೆ ಎಂಬ ವಿಚಾರ ರೈತ ಸಮುದಾಯ ಮತ್ತು ವ್ಯಾಪಾರಸ್ಥರಲ್ಲಿ ಸ್ವಲ್ಪಮಟ್ಟಿಗೆ ಚಿಂತೆ ಹುಟ್ಟಿಸಿದೆ.

ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಈ ಸುಳಿವು ನೀಡಿದ ಬೆನ್ನಲ್ಲೇ ಖಾಸಗಿ ಸಗಟು ತರಕಾರಿ ವ್ಯಾಪಾರಸ್ಥರು ಮುಂದಿನ ಪರಿಣಾಮದ ಬಗ್ಗೆ ಆಲೋಚನೆ ಆರಂಭಿಸಿದ್ದಾರೆ. ತಕ್ಷಣಕ್ಕೆ ಗೋವಾದ ಮುಖ್ಯಮಂತ್ರಿಗಳ ಈ ವಿಚಾರ ಕಾರ್ಯರೂಪಕ್ಕೆ ಬರುವುದು ಕಷ್ಟ. ಆದರೆ ಇದು ಸಹಜವಾಗಿಯೇ ಕರ್ನಾಟಕದ ವ್ಯಾಪಾರಸ್ಥರು ಮತ್ತು ರೈತರಲ್ಲಿ ಆತಂಕ ಉಂಟು ಮಾಡಿದೆ.

ಗೋವಾ ರಾಜ್ಯ ತರಕಾರಿ ಖರೀದಿಯಲ್ಲಿ ಸಂಪೂರ್ಣವಾಗಿ ಹೊರ ರಾಜ್ಯಗಳನ್ನೇ ಅವಲಂಬಿಸಿದೆ. ಗೋವಾಕ್ಕೆ ಈಗ ಕರ್ನಾಟಕ, ಮಹಾರಾಷ್ಟ್ರ, ಕೇರಳ ಹಾಗೂ ತಮಿಳುನಾಡು ರಾಜ್ಯಗಳಿಂದ ಪ್ರತಿನಿತ್ಯ ಸಾವಿರಾರು ಟನ್‌ಗಳಷ್ಟು ತರಕಾರಿ ಬರುತ್ತದೆ. ಹೀಗಾಗಿ ತರಕಾರಿ ಬೆಳೆಯುವುದರಲ್ಲಿ ಸ್ವಾವಲಂಬನೆ ಬೆಳೆಸಿಕೊಳ್ಳಬೇಕು ಎಂಬುದು ಗೋವಾ ಮುಖ್ಯಮಂತ್ರಿಗಳ ಉದ್ದೇಶ.

ಗೋವಾ ಸರ್ಕಾರವು ಸದ್ಯ ಅಲ್ಲಿಯ ತೋಟಗಾರಿಕೆ ಇಲಾಖೆಯ ಸಹಕಾರ ಸಂಘದಿಂದ ನೇರವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ತರಕಾರಿ ಖರೀದಿಸಿ ಅದನ್ನು ರಾಜ್ಯದ ಜನರಿಗೆ ಸಬ್ಸಿಡಿ ದರದಲ್ಲಿ ಮಾರಾಟ ಮಾಡುತ್ತಿದೆ. ಬೇರೆ ಕಡೆಗಳಿಂದ ಖರೀದಿ ಮಾಡುವುದರ ಬದಲು ಇಲ್ಲಿಯೇ ಬೇಕಾದಷ್ಟು ಬೆಳೆ ತೆಗೆಯಲು ಆರಂಭ ಮಾಡಿದರೆ ಅದರಿಂದ ಹಣವೂ ಉಳಿಯುತ್ತದೆ. ಬೇರೆಯವರ ಮೇಲೆ ಅವಲಂಬನೆ ತಪ್ಪುತ್ತದೆ ಎಂಬುದು ಮುಖ್ಯಮಂತ್ರಿಗಳ ಆಲೋಚನೆ.

ಇಂಥ ಚಿಂತನೆ ಹೊಸದೇನಲ್ಲ:

ಈ ಹಿಂದೆಯೂ ಇದೇ ರೀತಿಯ ಪ್ರಯತ್ನ ಗೋವಾ ಸರ್ಕಾರದಿಂದ ನಡೆದಿತ್ತು. ಆದರೆ ನಾನಾ ಸಮಸ್ಯೆಗಳ ಕಾರಣದಿಂದ ತನ್ನ ಆಲೋಚನೆಯನ್ನು ಕೈಬಿಟ್ಟಿತ್ತು. ಒಂದು ವೇಳೆ ಈಗ ಗೋವಾ ಸರ್ಕಾರ ಬೆಳಗಾವಿಯಿಂದ ತರಕಾರಿ ಖರೀದಿ ಮಾಡುವುದನ್ನು ನಿಲ್ಲಿಸಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಸ್ವಲ್ಪಮಟ್ಟಿಗೆ ಪರಿಣಾಮ ಬೀರಿದರೂ ಅದೂ ಸಹ ಗಂಭೀರವಾದ ಆತಂಕ ಉಂಟು ಮಾಡುವುದಿಲ್ಲ ಎಂಬುದು ಸಗಟು ತರಕಾರಿ ವ್ಯಾಪಾರಸ್ಥರ ಹೇಳಿಕೆ.

ಗೋವಾದಲ್ಲಿ ಎಲ್ಲ ತರಕಾರಿಗಳು ಸಿಗುವುದು ದುರ್ಲಭ. ಈ ತರಹದ ತರಕಾರಿಗಳು ಅಲ್ಲಿ ಬೆಳೆಯಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ಸ್ವಾವಲಂಬನೆ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ಈ ರೀತಿಯ ವಿಚಾರ ಮಾಡಿದ್ದರೂ ಅದು ಕಾರ್ಯರೂಪಕ್ಕೆ ಬರುವದು ಬಹಳ ಕಷ್ಟ. ಇದಕ್ಕೆ ಬಹಳ ಕಾಲಾವಕಾಶ ಬೇಕು. ಹೀಗಾಗಿ ತಕ್ಷಣಕ್ಕೆ ನಮಗೆ ಯಾವುದೇ ಸಮಸ್ಯೆ ಇಲ್ಲ ಎಂಬುದು ಸಗಟು ವ್ಯಾಪಾರಸ್ಥರ ವಿಶ್ವಾಸ.

ಗೋವಾ ಹವಾಮಾನ ಹೇಗಿದೆ? ಆದರೆ ಗೋವಾದ ಹವಾಮಾನ ತರಕಾರಿ ಬೆಳೆಯುವುದಕ್ಕೆ ಹೊಂದಿಕೊಳ್ಳುವದಿಲ್ಲ. ವರ್ಷದಲ್ಲಿ ನಾಲ್ಕೈದು ತಿಂಗಳು ಮಳೆ ಇರುತ್ತದೆ. ಇಲ್ಲಿಯ ಮಳೆಯನ್ನು ತರಕಾರಿ ಬೆಳೆ ತಡೆದುಕೊಳ್ಳುವದಿಲ್ಲ. ಇನ್ನು ಬೇಸಿಗೆಯಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಿರುವುದರಿಂದ ತರಕಾರಿ ಬೆಳೆ ಈ ವಾತಾವರಣಕ್ಕೆ ಹೊಂದಿಕೊಳ್ಳುವದು ಕಷ್ಟ. ಕೇವಲ ಎರಡ್ಮೂರು ತಿಂಗಳ ಅವಧಿಯಲ್ಲಿ ಮಾತ್ರ ಅವರು ತರಕಾರಿ ಬೆಳೆಯಬಹುದು. ಇದಕ್ಕಿಂತ ಮುಖ್ಯವಾಗಿ ಗೋವಾದಲ್ಲಿ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆ ಬಹಳ ಇದೆ. ಈ ಎಲ್ಲ ವಾಸ್ತವಿಕ ಸಮಸ್ಯೆಗಳು ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲ ಎಂಬುದು ಬೆಳಗಾವಿ ತರಕಾರಿ ಸಗಟು ವ್ಯಾಪಾರಸ್ಥರು ಮತ್ತು ರೈತರ ಅಭಿಪ್ರಾಯ.

ಗೋವಾಕ್ಕೆ ನೂರಾರು ಟನ್‌ ತರಕಾರಿ

ನೆರೆಯ ಬೆಳಗಾವಿಯಿಂದ ಪ್ರತಿನಿತ್ಯ 300ಕ್ಕೂ ಅಧಿಕ ಟನ್‌ಗಳಷ್ಟು ತರಕಾರಿ ಗೋವಾಕ್ಕೆ ಪೂರೈಕೆಯಾಗುತ್ತದೆ. ತೋಟಗಾರಿಕೆ ಇಲಾಖೆಯಿಂದ ಈರುಳ್ಳಿ ಮತ್ತು ಆಲೂಗಡ್ಡೆಯ 50 ಗಾಡಿಗಳು ಗೋವಾಕ್ಕೆ ಹೋಗುತ್ತಿದ್ದರೆ, ಖಾಸಗಿ ಸಗಟು ಮಾರುಕಟ್ಟೆಯಿಂದ ಸುಮಾರು 10 ಲಾರಿಗಳಲ್ಲಿ ತರಕಾರಿ ಸರಬರಾಜು ಆಗುತ್ತಿದೆ. ಗೋವಾದ ಶೇ.90ರಷ್ಟು ಜನರು ಬೆಳಗಾವಿ ತರಕಾರಿ ಮೇಲೆಯೇ ಅವಲಂಬಿತರಾಗಿದ್ದಾರೆ. ಗೋವಾದ ಹೊರತಾಗಿ ಬೆಳಗಾವಿಯಿಂದ ಪ್ರತಿನಿತ್ಯ ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಗುಜರಾತ ಮೊದಲಾದ ರಾಜ್ಯಗಳಿಗೆ ತರಕಾರಿ ಹೋಗುತ್ತಿದೆ. ಜಿಲ್ಲೆಯ ರೈತರು 200ಕ್ಕೂ ಹೆಚ್ಚು ಸಗಟು ಮಾರಾಟಗಾರರ ಮೂಲಕ ದೇಶದ ವಿವಿಧ ರಾಜ್ಯಗಳಿಗೆ ತಮ್ಮ ತರಕಾರಿ ಕಳಿಸುತ್ತಿದ್ದಾರೆ.

ಗೋವಾ ಸಿಎಂಗೆ ವಾಸ್ತವ ಸ್ಥಿತಿ ಗೊತ್ತಿಲ್ಲ. ಈ ಹಿಂದೆಯೂ ಇದೇ ರೀತಿಯ ಪ್ರಯತ್ನಗಳು ನಡೆದಿದ್ದವು. ಆದರೆ ಅವು ಕೈಗೂಡಲಿಲ್ಲ. ಮುಖ್ಯವಾಗಿ ಗೋವಾದ ವಾತಾವರಣ ತರಕಾರಿ ಬೆಳೆಗಳನ್ನು ಬೆಳೆಯುವುದಕ್ಕೆ ಯೋಗ್ಯವಾಗಿಲ್ಲ. ನಾಲ್ಕೈದು ತಿಂಗಳು ಅಲ್ಲಿ ಭಾರೀ ಮಳೆಯಿರುತ್ತದೆ. ಅಂತಹ ಮಳೆಗೆ ಯಾವ ತರಕಾರಿ ಬೆಳೆಗಳು ತಡೆಯುವದಿಲ್ಲ. ಮುಖ್ಯಮಂತ್ರಿಗಳ ಈ ಹೇಳಿಕೆಯಿಂದ ಬೆಳಗಾವಿ ವ್ಯಾಪಾರಸ್ಥರ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ.  –ದಿವಾಕರ ಪಾಟೀಲ, ಅಧ್ಯಕ್ಷ, ಜೈ ಕಿಸಾನ್‌ ಸಗಟು ವ್ಯಾಪಾರಸ್ಥರ ಸಂಘ

ಬೆಳಗಾವಿಯಿಂದ ತರಕಾರಿ ಖರೀದಿ ನಿಲ್ಲಿಸುವ ಬಗ್ಗೆ ಗೋವಾ ಸರ್ಕಾರ ಆಲೋಚನೆ ಮಾಡಿದರೆ ಅದರಿಂದ ನಮಗೆ ಯಾವುದೇ ನಷ್ಟವಿಲ್ಲ. ಈಗಾಗಲೇ ಬೆಳಗಾವಿಯಿಂದ ದೇಶದ ಅನೇಕ ರಾಜ್ಯಗಳಿಗೆ ತರಕಾರಿ ಪೂರೈಕೆಯಾಗುತ್ತಿದೆ. ಒಂದು ವೇಳೆ ಗೋವಾ ನಮ್ಮ ತರಕಾರಿ ನಿಲ್ಲಿಸಿದರೆ ಬೇರೆ ರಾಜ್ಯಗಳಿಗೆ ಅನುಕೂಲವಾಗುತ್ತದೆ. ಈಗಿನ ಹಂತದಲ್ಲಿ ಗೋವಾ ಮುಖ್ಯಮಂತ್ರಿಗಳ ವಿಚಾರ ಕಾರ್ಯ ರೂಪಕ್ಕೆ ಬರುವುದು ಕಷ್ಟ. –ಕೆ.ಎನ್‌.ಬಾಗವಾನ ಕಾರ್ಯದರ್ಶಿ, ಜೈ ಕಿಸಾನ್‌ ಸಗಟು ವ್ಯಾಪಾರಸ್ಥರ ಸಂಘ

-ಕೇಶವ ಆದಿ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.