ಕೋವಿಡ್ ನಿಯಂತ್ರಣಕ್ಕೆ ಗೋಕಾಕ ನಗರಸಭೆ ದಿಟ್ಟ ಹೆಜ್ಜೆ

ಶಾಸಕ ರಮೇಶ ಜಾರಕಿಹೊಳಿ ಮಾರ್ಗದರ್ಶನ! ­ಧ್ವನಿವರ್ಧಕ-ಕರಪತ್ರಗಳ ಮೂಲಕ ತಿಳಿವಳಿಕೆ­! ವಾರ್ಡ್‌-ಬೂತ್‌ಮಟ್ಟದ ಸಮಿತಿಗಳಿಂದ ಜನಜಾಗೃತಿ

Team Udayavani, May 28, 2021, 7:49 PM IST

27 gkk-add-1-3

ವರದಿ : ­ಬಸವರಾಜ ಭರಮಣ್ಣವರ

ಗೋಕಾಕ: ಕೊರೊನಾ ಎರಡನೇ ಅಲೆ ಆರಂಭವಾದಾಗಿನಿಂದ ಸರ್ಕಾರದ ಮಾರ್ಗಸೂಚಿ ಗಳನ್ವಯ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ನಗರಸಭೆ ಅಧಿಕಾರಿಗಳು ಕೊರೊನಾ ನಿಯಂತ್ರಣಕ್ಕೆ ಹಲವಾರು ದಿಟ್ಟ ಕ್ರಮ ಕೈಗೊಂಡಿದ್ದಾರೆ.

ಗೋಕಾಕ ನಗರಸಭೆಯಲ್ಲಿ 31 ವಾರ್ಡುಗಳಿದ್ದು, ಒಟ್ಟು 31 ಚುನಾಯಿತ ಸದಸ್ಯರಿದ್ದಾರೆ. ಆಯಾ ವಾರ್ಡು ಸದಸ್ಯರ ನೇತೃತ್ವದಲ್ಲಿ ಕೋವಿಡ್‌ -19 ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಕ್ರಮ ಕೈಗೊಳ್ಳಲಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಧ್ವನಿವರ್ಧಕ, ಕರಪತ್ರಗಳ ಮೂಲಕ ಕೊರೊನಾ ಜಾಗೃತಿ ಮಾಡಲಾಗಿದೆ. ವಾರ್ಡುಮಟ್ಟದ ಸಮಿತಿ ಹಾಗೂ ಬೂತ್‌ಮಟ್ಟದ ಸಮಿತಿಗಳಿಂದ ಕೋವಿಡ್‌-19 ನಿಯಂತ್ರಣ ಕುರಿತು ಜನಜಾಗೃತಿ ಹಮ್ಮಿಕೊಳ್ಳಲಾಗಿದೆ. ನಗರಸಭೆ ಅಧಿಕಾರಿ, ಸಿಬ್ಬಂದಿಗಳ ನಾಲ್ಕು ತಂಡ ರಚಿಸಿ ನಗರದಲ್ಲಿ ಮಾಸ್ಕ್ ಧರಿಸದೇ ಇರುವ, ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಪಾಡದೇ ಇರುವ ವ್ಯಾಪಾರಸ್ಥರಿಗೆ ದಂಡ ವಿಧಿಸಲಾಗುತ್ತಿದೆ. ಅನಗತ್ಯ ಸೇವೆಗಳನ್ನು ಬಂದ್‌ ಮಾಡಿ ಅಗತ್ಯ ಸೇವೆಗಳನ್ನು ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ನಗರಸಭೆ ಸಿಬ್ಬಂದಿಯಿಂದ 15 ಜನರ ಕೋವಿಡ್‌ ಮಾರ್ಷಲ್‌ ಪಡೆ ರಚಿಸಲಾಗಿದೆ.

ವಾಣಿಜ್ಯ ಪ್ರದೇಶಗಳು, ಜನನಿಬಿಡ ಪ್ರದೇಶಗಳಲ್ಲಿ ಅಗ್ನಿಶಾಮಕ ವಾಹನ, ಜೆಟ್ಟಿಂಗ್‌ ಮಷಿನ್‌ ವಾಹನಗಳಿಂದ ಸ್ಯಾನಿಟೈಜರ್‌ ಸಿಂಪಡಿಸಲಾಗುತ್ತಿದೆ. ಕೊಳಚೆ, ಇನ್ನಿತರೆ ಪ್ರದೇಶಗಳಲ್ಲಿ ಹ್ಯಾಂಡ್‌ ಸ್ಪ್ರೆàಯರ್‌ ಮೂಲಕ ಸ್ಯಾನಿಟೈಜರ್‌, ಅಟೋಮೌಂಟೆಡ್‌ ಫಾಗಿಂಗ್‌ ಹ್ಯಾಂಡ್‌ ಫಾಗಿಂಗ್‌ ಮೂಲಕ ಸೊಳ್ಳೆಗಳ ನಿಯಂತ್ರಿಸಲಾಗುತ್ತಿದೆ. ಎಲ್ಲ 31 ವಾರ್ಡುಗಳಲ್ಲಿ ಕೀಟನಾಶಕ ಸಿಂಪಡಣೆ ಮಾಡಲಾಗುತ್ತಿದೆ. 106 ಪೌರಕಾರ್ಮಿಕರಿಗೆ ಎಲ್ಲ ಸುರಕ್ಷತಾ ಸಾಮಗ್ರಿ ಹಾಗೂ ಸ್ಯಾನಿಟೈಜರ್‌, ಮೂರು ಪದರದ ಮಾಸ್ಕ್ ವಿತರಿಸಲಾಗಿದೆ.

ಪೌರ ಕಾರ್ಮಿಕರಿಗೆ ಪ್ರತಿದಿನ ಬೆಳಿಗ್ಗೆ ಹಾಜರಾತಿ ಸಮಯದಲ್ಲಿ ಥರ್ಮಲ್‌ ಸ್ಕ್ಯಾನರ್‌ ಮೂಲಕ ಆರೋಗ್ಯ ತಪಾಸಿಸಲಾಗುತ್ತಿದೆ. ಪೌರಕಾರ್ಮಿಕರು, ವಾಹನ ಚಾಲಕರು ಮತ್ತು ಕಚೇರಿ ಸಿಬ್ಬಂದಿಗೆ ಎರಡು ಹಂತದಲ್ಲಿ ಕೋವಿಡ್‌ ಲಸಿಕೆ ಹಾಕಲಾಗಿದೆ. ಪ್ರತಿನಿತ್ಯ ಘನತ್ಯಾಜ್ಯ ನಿರ್ವಹಣೆ ಮಾಡಲಾಗುತ್ತಿದೆ. ನಗರಸಭೆಯ ಕಂದಾಯ ಅಧಿಕಾರಿ, ಸಿಬ್ಬಂದಿ ಹಾಗೂ ಶಿಕ್ಷಕರ ತಂಡವನ್ನೊಳಗೊಂಡು ತಂಡ ಪ್ರತಿದಿನ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್‌ ಸೋಂಕಿತರು, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ ವ್ಯಕ್ತಿಗಳ ಮನೆಗಳಿಗೆ ಹೋಗಿ ಕ್ವಾರಂಟೈನ್‌ ವಿಸಿಟ್‌ ಆ್ಯಪ್‌ನಲ್ಲಿ ಮಾಹಿತಿ ಕಾಲೋಚಿತ ಗೊಳಿಸುತ್ತಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.