ಚನ್ನಮ್ಮ ವೃತ್ತದಲ್ಲಿ ಗೂಡ್ಸ್ ಟೆಂಪೋ ಬ್ರೇಕ್ ಫೇಲ್: ಸರಣಿ ಅಪಘಾತ
Team Udayavani, May 26, 2022, 12:19 PM IST
ಬೆಳಗಾವಿ: ನಗರದ ಚನ್ನಮ್ಮ ವೃತ್ತದಲ್ಲಿ ಗುರುವಾರ ಬೆಳಗ್ಗೆ ಗೂಡ್ಸ್ ವಾಹನ ಬ್ರೇಕ್ ಫೇಲ್ ಆಗಿ ಬಸ್ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಡಾ. ಅಂಬೇಡ್ಕರ್ ಉದ್ಯಾನವನ ಕಡೆಯಿಂದ ಬರುತ್ತಿದ್ದ ಟೆಂಪೋ ಬ್ರೇಕ್ ಫೇಲ್ ಆಗಿದೆ. ಚಾಲಕನ ನಿಯಂತ್ರಣಕ್ಕೆ ಬಾರದ ವಾಹನ ನೇರವಾಗಿ ಗಣೇಶ ಮಂದಿರ ಕಡೆಯಿಂದ ಬಸ್ ಕೋರ್ಟ್ ರಸ್ತೆ ಕಡೆಗೆ ಹೊರಟಿದ್ದ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಸ್ ಸಣ್ಣ ಪ್ರಮಾಣದಲ್ಲಿ ಜಖಂಗೊಂಡಿದೆ. ಮತ್ತೊಂದು ವಾಹನಕ್ಕೆ ಢಿಕ್ಕಿಯಾಗಿದೆ. ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಇದನ್ನೂ ಓದಿ: ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಸಿಲಿಂಡರ್ ಸ್ಫೋಟ: ಯುವಕ ಸಾವು
ಅಂಬೇಡ್ಕರ್ ಉದ್ಯಾನವನದಿಂದ ಚನ್ನಮ್ಮ ಸರ್ಕಲ್ ಕಡೆಗೆ ಬರುವಾಗ ತುಸು ಇಳಿಜಾರು ಇದ್ದು, ಗೂಡ್ಸ್ ಟೆಂಪೋ ಜೋರಾಗಿ ಬರುತ್ತ ಬ್ರೇಕ್ ಫೇಲ್ ಆಗಿದೆ. ಇತ್ತ ಕಡೆಯಿಂದ ಸಿಗ್ನಲ್ ಬಿಟ್ಟಾಗ ಬಸ್ ಬಂದಾಗ ಢಿಕ್ಕಿ ಹೊಡೆದಿದೆ. ಒಂದು ವೇಳೆ ಬಸ್ ಬರದಿದ್ದರೆ ನೇರವಾಗಿ ಗೂಡ್ಸ್ ವಾಹನ ಚನ್ನಮ್ಮ ಪ್ರತಿಮೆಗೆ ಟೆಂಪೋ ಢಿಕ್ಕಿ ಹೊಡೆಯುವ ಸಾಧ್ಯತೆ ಇತ್ತು. ಸರಣಿ ಅಪಘಾತದಿಂದ ಕೆಲಕಾಲ ವೃತ್ತದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಪೊಲೀಸರು ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ