ಗೋಸಬಾಳ ಮಾರುತಿ ದೇವರ ಓಕುಳಿ ಸಂಪನ್ನ
Team Udayavani, May 16, 2019, 2:51 PM IST
ಬೆಟಗೇರಿ: ಸಮೀಪದ ಗೋಸಬಾಳ ಗ್ರಾಮದ ಮಾರುತಿ ದೇವರ ಓಕುಳಿ ಸಂಪನ್ನಗೊಂಡಿತು. ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೇದ್ಯ ಸಮರ್ಪಣೆ, ಹರಕೆ ತಿರಿಸುವ ಕಾರ್ಯಕ್ರಮ ನಡೆಯಿತು. ವಿವಿಧ ಗ್ರಾಮಗಳಿಂದ ಆಗಮಿಸಿದ ವಿವಿಧ ದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳಲಾಯಿತು.
ಸಂಜೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ವಿವಿಧ ದೇವರುಗಳ ಓಕಳಿ ಕೊಂಡಕ್ಕೆ ಪಲ್ಲಕ್ಕಿ ಪ್ರದಕ್ಷಿಣೆ ಸಂಭ್ರಮದಿಂದ ನಡೆದ ಬಳಿಕ ನೀರು ಎರಚುವ ಕಡೆ ಓಕಳಿ ಜರುಗಿತು. ನಂತರ ಮಹಾಪ್ರಸಾದ ನಡೆಯಿತು.
ಶ್ರೀ ಮಾರುತಿ ದೇವರ ಓಕುಳಿ ಉತ್ಸವ ಆಚರಣಾ ಸಮಿತಿ ಅಧ್ಯಕ್ಷ ಶಿವಾನಂದ ಬುಳ್ಳಿ, ರಾಮಯ್ಯ ಮಠದ, ಸತ್ತೆಪ್ಪ ಹೊಸಟ್ಟಿ, ಬಾಳಪ್ಪ ಬುಳ್ಳಿ, ಬಸವರಾಜ ಬುಳ್ಳಿ, ಸುರೇಶ ಮಠದ, ಪ್ರಕಾಶ ಪಾಟೀಲ ಸೇರಿದಂತೆ ಗ್ರಾಮದ ವಿವಿಧ ಸಮುದಾಯದ ಹಿರಿಯರು, ಇಲ್ಲಿಯ ಮಾರುತಿ ದೇವರ ಓಕುಳಿ ಉತ್ಸವ ಆಚರಣಾ ಸಮಿತಿ ಸದಸ್ಯರು, ಗ್ರಾಮಸ್ಥರು ಸೇರಿದಂತೆ ನೂರಾರು ಭಕ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ