ತುರ್ತು ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಬದ್ಧ : ಜೊಲ್ಲೆ
Team Udayavani, Aug 8, 2020, 2:12 PM IST
ಚಿಕ್ಕೋಡಿ: ಕೊಂಕಣ ಭಾಗದಲ್ಲಿ ಅತಿಯಾದ ಮಳೆಯಿಂದ ಉಂಟಾಗುವ ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಶೀಘ್ರ ಕೊಲ್ಲಾಪುರ ಜಿಲ್ಲೆಯ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಹಾರಾಷ್ಟ್ರದ ಜಲಾಶಯಗಳಿಂದ ಬೀಡುವ ನೀರಿನ ಪ್ರಮಾಣದ ಕುರಿತು ಮಾಹಿತಿ ಪಡೆಯಲಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಶುಕ್ರವಾರ ಸದಲಗಾ ಪಟ್ಟಣದ ದೂಧಗಂಗಾ ನದಿಯ ಸಂಭವನೀಯ ಪ್ರವಾಹ ಅವಲೋಕಿಸಿ ಮಾತನಾಡಿ, ಉಕ್ಕಿ ಹರಿಯುತ್ತಿರುವ ದೂಧಗಂಗಾ ನದಿ ನೀರಿನಿಂದ ಜನಸಾಮಾನ್ಯರಿಗೆ ಯಾವುದೇ ರೀತಿಯ ಅನಾಹುತವಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.
ಪ್ರವಾಹ ಪರಿಸ್ಥಿತಿ ಕೈಮೀರಿದಾಗ ಜನ ಸಾಮಾನ್ಯರ ರಕ್ಷಣೆಗೆ ಬೋಟ್ ಗಳ ವ್ಯವಸ್ಥೆ ಪಡೆಯಬೇಕು. ದಿನೇ ದಿನೇ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹದ ತೀವ್ರತೆ ಹೆಚ್ಚಾಗುತ್ತಿರುವುದರಿಂದ ನದಿ ತೀರದ ಜನರು ಆದಷ್ಟು ಬೇಗ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕೆಂದು ಮನವಿ ಮಾಡಿದರು.
ಈ ವೇಳೆ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿರ್ದೇಶಕ ರಾಮಗೊಂಡಾ ಪಾಟೀಲ, ಚಿಕ್ಕೋಡಿ ಸದಲಗಾ ಬಿಜೆಪಿ ಮಂಡಳ ಅಧ್ಯಕ್ಷ ಸಂಜಯ ಪಾಟೀಲ, ಪುರಸಭೆ ಸದಸ್ಯರಾದ ಆನಂದ ಪಾಟೀಲ, ಅಭಿನಂದನ ಪಾಟೀಲ, ಹೇಮಂತ ಶಿಂಗೆ, ಲಕ್ಷ್ಮೀಕಾಂತ ಹಾಲಪ್ಪನ್ನವರ, ಭರತ ಬೋರಗಾಂವೆ, ಕೇತನ ಪಾಟೀಲ, ಅನಿರುದ್ದ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ