ಮೃಷ್ಟಾನ್ನದ ತುತ್ತು-ಹಾಜರಾತಿಗಿಲ್ಲ ಕುತ್ತು


Team Udayavani, Nov 4, 2020, 9:14 PM IST

bg-tdy-1

ತೆಲಸಂಗ: ಸರ್ಕಾರಿ ಶಾಲೆಗಳು ಮತ್ತು ಅಲ್ಲಿನ ಬಿಸಿಯೂಟವೆಂದರೆ ಮೂಗು ಮುರಿಯುವ ದಿನ ಇದು. ಅಂತಹದರಲ್ಲಿ ಇಲ್ಲಿಯ ಎರಡು ಶಾಲೆಯ ಶಿಕ್ಷಕರು ರುಚಿಕಟ್ಟಾದ ಬಿಸಿಯೂಟ ಮಾಡಿ ಬಡಿಸುವುದರಲ್ಲಿ ಮಾದರಿ ಕೆಲಸ ಮಾಡಿದ್ದಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಮಕ್ಕಳ ಹಾಜರಾತಿ ಹೆಚ್ಚಿಸುವಲ್ಲಿ ಸಫಲರಾಗಿದ್ದಾರೆ.

ಮೃಷ್ಟಾನ್ನ ಭೋಜನ ಮಾಡಿ ಮಕ್ಕಳಿಗೆ ಉಣಬಡಿಸುವ ಮಹತ್ವದ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಾಡಗಿ ಗ್ರಾಮದ

ಮುಧೋಳ ತೋಟದ ವಸತಿ ಸರ್ಕಾರಿಪ್ರಾಥಮಿಕ ಕನ್ನಡ ಶಾಲೆ ಮತ್ತು ಅರಟಾಳ ಗ್ರಾಮದ ಮಾಳಿಂಗರಾಯನ ತೋಟದ ವಸತಿ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರು ಪಾಲಕರ ಹೊಗಳಿಕೆಗೆ ಪಾತ್ರರಾಗಿದ್ದಾರೆ. ಕಾನ್ವೆಂಟ್‌ಗಳಿಗೆ ಸಡ್ಡು ಹೊಡೆಯುವಂತೆ ಕೆಲಸ ಮಾಡುತ್ತಿದ್ದಾರೆ.

ಸರ್ಕಾರ ಮಕ್ಕಳಿಗೆ ಕೊಡುವ ಧಾನ್ಯ-ಸಾಮಗ್ರಿಗಳಲ್ಲಿಯೇ ವಿಭಿನ್ನ ಊಟ ತಯಾರಿಸಿ ನೀಡಬಹುದು ಎಂಬುದಕ್ಕೆ ಶಾಲೆಗಳುನಿದರ್ಶನವಾಗಿವೆ. ವಾರದಲ್ಲಿ ಒಂದೊಂದು ದಿನ ಇಡ್ಲಿ, ಬಜಿ, ಜಾಮೂನ್‌, ದೋಸೆ ಹೀಗೆ ವಿಶಿಷ್ಟ ಅಡುಗೆ ಮಾಡುತ್ತಿದ್ದು, ಮಕ್ಕಳ ಸಂಖ್ಯೆಯೂ ಹೆಚ್ಚಿದೆ. ಶಾಲೆಯಲ್ಲಿ ಓದುವ ಯಾವುದೇ ಮಗುವಿನ ಜನ್ಮದಿನ ಇದ್ದರೆ ಬಿಸಿಯೂಟದಲ್ಲಿ ವಿಶೇಷ ಖಾದ್ಯ ಮತ್ತು ಸಸಿ ನೆಡುವ ಕಾರ್ಯಕ್ರಮ ಮಾಡುತ್ತಾರೆ.

ಇಲ್ಲಿಯ ರೈತ, ಕೂಲಿಕಾರ್ಮಿಕರ ಮಕ್ಕಳಿಗೆ ಅಕ್ಷರ ದಾಸೋಹದೊಂದಿಗೆ ಅನ್ನ ದಾಸೋಹವನ್ನು ಶಿಕ್ಷಕರು ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದ್ದು, ಕನ್ನಡಕ್ಕಾಗಿ ಅಳಿಲು ಸೇವೆ ಸಲ್ಲಿಸುತ್ತಿದ್ದಾರೆ. ಸಮಯಪಾಲನೆ, ಮೈದಾನ ನಿರ್ಮಾಣ, ಸ್ವತ್ಛ ಶೌಚಾಲಯ, ಗುಣಮಟ್ಟದ ಶಿಕ್ಷಣ, ಗಣಕಯಂತ್ರದ ಶಿಕ್ಷಣ ಹೀಗೆ ವಿಭಿನ್ನ ಪ್ರಯೋಗವನ್ನು ಅಚ್ಚುಕಟ್ಟಾಗಿ ಮಾಡುತ್ತಿರುವುದು ಮಕ್ಕಳ ಹಾಜರಾತಿಗೆ ಕಾರಣವಾಗಿದೆ ಎನ್ನುತ್ತಾರೆ ಇಲ್ಲಿಯ ಶಿಕ್ಷಕರು.

ನಮ್ಮಿಂದ ಅನ್ನದಾನ ಮಾಡಲಾಗದಿದ್ದರೂ ಸರ್ಕಾರ ಕೊಡುವುದನ್ನಾದರೂ ಪ್ರಾಮಾಣಿಕವಾಗಿ ಮಾಡುವ ಮೂಲಕ ಆತ್ಮಸಾಕ್ಷಿ ಮೆಚ್ಚುವ ಕೆಲಸ ಮಾಡುತ್ತಿದ್ದೇವೆ. ಇದರಿಂದ ನಮ್ಮ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚುವುದಕ್ಕೆ ಕಾರಣವಾಗಿದ್ದು, ವಿಭಿನ್ನ ಪ್ರಯೋಗಗಳನ್ನು ಮಾಡಿ ಕನ್ನಡ ಶಾಲೆಗಳ ಉಳಿವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ.  –ಯಾಸೀನ ಕರಜಗಿ, ಶಿಕ್ಷಕ, ಅರಟಾಳ

ವಿಶಿಷ್ಟ ಬಿಸಿಯೂಟ ತಯಾರಿಕೆಗೆ ಹೆಚ್ಚಿಗೆ ಹಣ ಬೇಕಿಲ್ಲ. ಸರ್ಕಾರ ಕೊಡುವ ಹಣವೇ ಸಾಕಾಗುತ್ತದೆ. ಮಾಡುವ ಇಚ್ಛಾಶಕ್ತಿ ಇದ್ದರೆ ಇದೆಲ್ಲ ಸುಲಭ ಸಾಧ್ಯ. ನಾವೇನು ಮನೆಯಿಂದ ತಂದು ಮಾಡುವುದಿಲ್ಲ. ಸರ್ಕಾರ ಕೊಡುತ್ತದೆ, ನಾವು ವ್ಯವಸ್ಥಿತವಾಗಿ ಮಾಡಿ ಬಡಿಸುತ್ತೇವೆ. – ಸುರೇಶ ಕುಂಬಾರ, ಶಿಕ್ಷಕ, ಬಾಡಗಿ

ಟಾಪ್ ನ್ಯೂಸ್

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.