ಬೆಳಗಾವಿ:ಗ್ರಾಮ ಪಂಚಾಯತ್ ಸದಸ್ಯನ ಬರ್ಬರ ಹತ್ಯೆ
Team Udayavani, Dec 14, 2018, 3:04 PM IST
ಬೆಳಗಾವಿ: ಜಿಲ್ಲೆಯ ಹೊಸವಂಟಮೂರಿ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಬನ್ನೆಪ್ಪ ಪಾಟೀಲ್ ಎನ್ನುವ ಪಂಚಾಯತ್ ಸದಸ್ಯ ಬರ್ಬರವಾಗಿ ಹತ್ಯೆಯಾಗಿದ್ದು, ಪಂಚಾಯತ್ ಅಧ್ಯಕ್ಷ ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.
ಅಧ್ಯಕ್ಷ ಶಿವಾಜಿ ವಣ್ಣೂರ ದ್ವೇಷದಲ್ಲಿ ಬೆಂಬಲಿಗರಿಂದ ಕೃತ್ಯ ಮಾಡಿಸಿದ್ದಾನೆ ಎಂದು ಆರೋಪ ಮಾಡಲಾಗಿದೆ.
ಶಿವಾಜಿ ವಿರುದ್ಧ ಗ್ರಾಮ ಪಂಚಾಯತ್ನ ಕೆಲ ಸದಸ್ಯರು ಕಳೆದ ಕೆಲ ದಿನಗಳಿಂದ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿದ್ದರು.
ಬನ್ನೆಪ್ಪ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಇದನ್ನು ಹೈಕೋರ್ಟ್ನಲ್ಲಿ ಶಿವಾಜಿ ಪ್ರಶ್ನಿಸಿದ್ದು ತೀರ್ಪು ಹೊರ ಬರುವ ಮುನ್ನವೇ ಹತ್ಯೆ ನಡೆದಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಪ್ರತಿನಿಧಿಸುತ್ತಿರುವ ಯುಮಕನ ಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾಕಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ