ಸ್ಥಳೀಯ ಸಂಸ್ಥೆಗೆ ಶಾಂತಿಯುತ ಮತದಾನ


Team Udayavani, Mar 30, 2021, 12:31 PM IST

ಸ್ಥಳೀಯ ಸಂಸ್ಥೆಗೆ ಶಾಂತಿಯುತ ಮತದಾನ

ಗೋಕಾಕ: ತಾಲೂಕಿನ ತಳಕಟ್ನಾಳ ಗ್ರಾಮ ಪಂಚಾಯತಿಯ 8 ಸ್ಥಾನಗಳಿಗೆ ಚುನಾವಣೆಯು ಸೋಮವಾರ ನಡೆದು ಒಟ್ಟು ಶೇ. 83.89 ಮತದಾನವಾಗಿದೆ. ಗ್ರಾಮದಲ್ಲಿಕೆಲವೊಂದು ಸಣ್ಣ-ಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಚುನಾವಣೆಯು ಬಹುತೇಕ ಶಾಂತಿಯುತವಾಗಿ ಜರುಗಿತು.

ಉಪ ಚುನಾವಣೆ: ಗೋಕಾಕ ನಗರಸಭೆ ಸದಸ್ಯರಿಬ್ಬರ ಅಕಾಲಿಕ ನಿಧನದಿಂದ ತೆರವಾಗಿದ್ದ 13 ಮತ್ತು 26 ನೇ ವಾರ್ಡುಗಳಿಗೆ ಸೋಮವಾರ ಉಪ ಚುನಾವಣೆ ನಡೆದುಶೇ.59.62 ರಷ್ಟು ಮತದಾನವಾಗಿದೆ. ಇಲ್ಲಿಯ ಬಸವ ನಗರದ ಸರ್ಕಾರಿ ಶಾಲೆಯಲ್ಲಿ ವಾರ್ಡ್‌ 13ರ ಮೂರು ಮತಗಟ್ಟೆಗಳು, ಕುರುಬರ ಫೂಲ ಬಳಿಯಿರುವ ಸರ್ಕಾರಿ ಶಾಲೆಯಲ್ಲಿ ವಾರ್ಡ್‌-26ರ ಎರಡು ಮತಗಟ್ಟೆಗಳಲ್ಲಿಮತದಾರರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಮಹಿಳೆಯರು ಉತ್ಸಾಹದಿಂದ ತಮ್ಮ ಮತಗಳನ್ನು ಚಲಾಯಿಸಿದ್ದು ವಿಶೇಷವಾಗಿತ್ತು.

ವಾರ್ಡ್‌ ನಂ 13 ರಲ್ಲಿ ಒಟ್ಟು 2580 ಮತದಾರರ ಪೈಕಿ 1414 ಮತಗಳು ಚಲಾವಣೆಯಾಗಿವೆ. ವಾರ್ಡ ನಂ 26ರಲ್ಲಿ 2342 ಮತದಾರರ ಪೈಕಿ 1536 ಮತಗಳು ಚಲಾವಣೆಯಾಗಿದ್ದು ಶೇಕಡಾ 59.62 ಮತದಾನವಾಗಿದೆ ಎಂದು ಚುನಾವಣಾಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.

ಸಾಮಾನ್ಯ ಕ್ಷೇತ್ರವಾಗಿರುವ ವಾರ್ಡ ನಂ. 13ರಲ್ಲಿ ರಮೇಶ ರಾಮಚಂದ್ರ ಮುರಗುಂಡಿ,ಪ್ರವೀಣ ಪ್ರಭಾಕರ ಚುನಮರಿ, ವಿಷ್ಣುಗೌಡ ಹಣಮಂತ ಪಾಟೀಲ, ಅಭಿಷೇಕ ಸಿದ್ದಲಿಂಗ ದಳವಾಯಿ, ಜ್ಯೋತಿ ಮಹಾಲಿಂಗಪ್ಪ ಕೊಲ್ಹಾರ, ಅರುಣಕುಮಾರ ಚಂದ್ರಪ್ಪ ಕರಣಿ ಕಣದಲ್ಲಿದ್ದಾರೆ. ಹಿಂದುಳಿದ ವರ್ಗ ಅ ಮೀಸಲಾಗಿರುವ ವಾರ್ಡ ನಂ 26 ರಲ್ಲಿ ಬಾಬು ಕೃಷ್ಣಪ್ಪ ಮುಳಗುಂದ, ಇಮಾಮಸಾಬಹುಸೇನಸಾಬ ಪಾಜನಿಗರ ಕಣದಲ್ಲಿದ್ದು ಎಲ್ಲರೂ ಪಕ್ಷೇತರ ಅಭ್ಯರ್ಥಿಗಳಾಗಿದ್ದಾರೆ. ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದ್ದು 31 ರಂದು ಮತ ಎಣಿಕೆ ಜರುಗಲಿದೆ.

ಮತದಾನ ಬಹಿಷ್ಕಾರ: ಗೋಕಾಕ ತಾಲೂಕಿನ ಖನಗಾಂವ ಗ್ರಾಮ ಪಂಚಾಯತ್‌ವ್ಯಾಪ್ತಿಯ ಗುಡನಟ್ಟಿ ಗ್ರಾಮದ ವಾರ್ಡ್‌ ನಂ 5ರಲ್ಲಿ ಎರಡು ಸ್ಥಾನಗಳಿಗೆ ಎಸ್‌. ಟಿ. ಸಾಮಾನ್ಯ ಹಾಗೂ ಎಸ್‌.ಟಿ.ಮಹಿಳೆ ಮೀಸಲು ಹೊರಡಿಸಿ ಚುನಾವಣೆಯನ್ನು ಸೋಮವಾರ ನಿಗದಿಪಡಿಸಲಾಗಿತ್ತು. ಎಸ್‌. ಟಿ. ಸಾಮಾನ್ಯ ಕ್ಷೇತ್ರಕ್ಕೆ 6 ನಾಮಪತ್ರಗಳು, ಎಸ್‌.ಟಿ.ಮಹಿಳಾ ಕ್ಷೇತ್ರಕ್ಕೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿದ್ದು. ಗುಡನಟ್ಟಿ ಗ್ರಾಮದಲ್ಲಿ ಅ ವರ್ಗದ ಮತದಾರರೇ ಹೆಚ್ಚಿಗೆ ಇರುವಾಗ ಮೀಸಲಾತಿಯ ಕುರಿತು ಅಪಸ್ವರವೆದ್ದು ಮತದಾನ ಬಹಿಷ್ಕಾರ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಗ್ರಾಮದ ಅಭಿವೃದ್ಧಿಗಾಗಿ ಇನ್ನೊಂದು ಗ್ರಾಮದವರು ನಮ್ಮ ಗ್ರಾಮದಿಂದ ಸ್ಪರ್ಧಿಸಿ ಆಯ್ಕೆಯಾದರೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ ಎನ್ನುವ ದೃಷ್ಟಿಯಿಂದ ಮತದಾನದ ಪ್ರಕ್ರಿಯೆಯಿಂದ ಹಿಂದೆ ಸರಿಯಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಹಿಂದೆಯೂ ಚುನಾವಣೆಯ ದಿನಾಂಕ ನಿಗದಿಯಾದಾಗ ಯಾವುದೇ ನಾಮಪತ್ರ ಸಲ್ಲಿಕೆಯಾಗದೇ ಚುನಾವಣೆ ಮುಂದೂಡಲಾಗಿತ್ತು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.