ಗ್ರಾಮದೇವಿಯರ ಭವ್ಯ ಮೆರವಣಿಗೆ; ಅಸಂಖ್ಯಾತ ಭಕ್ತರು ಭಾಗಿ

ಬೀದಿದೀಪ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ತಯಾರಿ ಮಾಡಲಾಗಿತ್ತು

Team Udayavani, Mar 2, 2023, 2:20 PM IST

ಗ್ರಾಮದೇವಿಯರ ಭವ್ಯ ಮೆರವಣಿಗೆ; ಅಸಂಖ್ಯಾತ ಭಕ್ತರು ಭಾಗಿ

ಕಲಘಟಗಿ: ಶ್ರೀ ಗ್ರಾಮದೇವಿಯರ 9 ದಿನಗಳ ಕಾಲ ಜರುಗಲಿರುವ ಜಾತ್ರಾ ಮಹೋತ್ಸವದ ದೇವಿಯರ ಮೆರವಣಿಗೆ ಬುಧವಾರ ಮಧ್ಯಾಹ್ನ ಶ್ರೀ ಗ್ರಾಮದೇವಿ ದೇವಸ್ಥಾನದಿಂದ ಆರಂಭಗೊಂಡಿತು. ಅಸಂಖ್ಯಾತ ಭಕ್ತಸಾಗರದ ಮಧ್ಯೆ ಸಾಗಿ ಬಂದ ಶ್ರೀ ದುರ್ಗವ್ವ ಮತ್ತು ಶ್ರೀ ದ್ಯಾಮವ್ವರ ಮೂರ್ತಿಗಳನ್ನು ಅಕ್ಕಿ ಓಣಿಯಲ್ಲಿರುವ ಚೌತ ಮನೆಕಟ್ಟೆಯ ಜಾತ್ರಾ ಮಂಟಪದಲ್ಲಿ ವಿರಾಜಮಾನಗೊಳಿಸಲಾಯಿತು.

ಶ್ರೀ ಗ್ರಾಮದೇವಿಯರನ್ನು ಸಂಭ್ರಮ ಸಡಗರ, ಸಕಲ ಮಂಗಲ ವಾದ್ಯ ಮೇಳಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಜೋಳದ ಓಣಿ, ಮಾರ್ಕೆಟ್‌ ರೋಡ ಮುಖಾಂತರ ಅಕ್ಕಿ ಓಣಿಯಲ್ಲಿರುವ ಜಾತ್ರಾ ಮಂಟಪಕ್ಕೆ ಭಕ್ತ ಸಮೂಹದ ಜೈಕಾರದೊಂದಿಗೆ ಸಹಸ್ರಾರು ಭಕ್ತರು ಹೊತ್ತುಕೊಂಡು ಬಂದು ಪುನೀತರಾದರು.

ದಾರಿಯುದ್ದಕ್ಕೂ ತಳಿರು ತೋರಣ ಹಾಗೂ ಕೇಸರಿ ಬಾವುಟಗಳಿಂದ ಶೃಂಗರಿಸಲಾಗಿತ್ತು. ಮನೆ, ಅಂಗಡಿ ಮುಂಗ್ಗಟ್ಟುಗಳ ಮುಂದೆ ಮಹಿಳೆಯರೆಲ್ಲರೂ ಚಿತ್ರಿಸಿದ ರಂಗೋಲಿ ಮನರಂಜಿಸಿತು. ಮೆರವಣಿಗೆಯಲ್ಲಿ ಕರಡಿ ಮಜಲು, ಝಾಂಜ್‌ಮೇಳ, ಹೆಜ್ಜೆ ಮೇಳ, ಕೋಲಾಟ, ಬೇಡರ ವೇಷ, ದಕ್ಷಿಣಕನ್ನಡ ಜಿಲ್ಲೆಯ ಚಂಡೆ ಮದ್ದಳೆ, ಹುಲಿವೇಷ, ಕೀಲಕುದುರೆ ಸಕಲವಾದ್ಯ ಮೇಳಗಳ ಜತೆಗೆ ರಾಣಿಗೇರ, ಮಾತಂಗಿಯರು, ಜೋಗಮ್ಮಗಳು ಸಾಗಿದರೆ, ಸಹಸ್ರಾರು ಭಕ್ತರು ಉಧೋ ಉಧೋ
ಎಂಬ ಜಯಘೋಷ ಹಾಕಿದರು.

ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರೊಂದಿಗೆ ಅಲ್ಲಲ್ಲಿ ತಾತ್ಕಾಲಿಕ ನಲ್ಲಿಗಳ ಜೋಡಣೆ ಮಾಡಿ ಕುಡಿಯುವ ನೀರು, ಸಂಚಾರಿ ಶೌಚಾಲಯ, ಮೂತ್ರಾಲಯಗಳ ವ್ಯವಸ್ಥೆ ಮಾಡಿದ್ದರು. ಸ್ವತ್ಛತೆ ಹಾಗೂ ಬೀದಿದೀಪ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ತಯಾರಿ ಮಾಡಲಾಗಿತ್ತು. ಸರಕಾರಿ ನೌಕರರ ಮುಷ್ಕರ ಇದ್ದರೂ ಪಟ್ಟಣದ ಜಾತ್ರಾ ವ್ಯವಸ್ಥೆಗೆ ಯಾವುದೇ ಅನಾನುಕೂಲ ಉಂಟಾಗದಿರಲು ಸಾರ್ವಜನಿಕರ ಹಿತಾಸಕ್ತಿಗೋಸ್ಕರ ಪೌರ ಕಾರ್ಮಿಕರು ಮತ್ತು ನೀರು ಸರಬರಾಜು ಸಿಬ್ಬಂದಿ ಸೇವಾ ನಿರತರಾಗಿ ಜನ ಮೆಚ್ಚುಗೆಗೆ ಪಾತ್ರರಾದರು.

ಪೊಲೀಸರು ಹೆಚ್ಚುವರಿ ಪೊಲೀಸ್‌ ಹಾಗೂ ಹೋಂ ಗಾರ್ಡ್‌ ಗಳನ್ನು ನೇಮಿಸಿದ್ದರು. ಸೂಕ್ಷ್ಮ ಪ್ರದೇಶಗಳಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸಿ ನಿಗಾ ವಹಿಸಿದ್ದರು. ಆರೋಗ್ಯ ಇಲಾಖೆಯವರು ಜಾತ್ರಾ ಸ್ಥಳದಲ್ಲಿಯೇ ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಠಿಕಾಣಿ ಹೂಡಿದ್ದರು. ಹೆಸ್ಕಾಂ ಹಾಗೂ ಅಗ್ನಿಶಾಮಕದವರು ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಮತ್ತು ಯಾವುದೇ ಅಗ್ನಿ ಅವಘಡಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.

ಮಾ.2ರಿಂದ ಉಡಿ ತುಂಬುವ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪ್ರತಿ ದಿನ ರಾತ್ರಿ 10 ಗಂಟೆಗೆ ಮಹಾ ಮಂಗಳಾರತಿ, ನಂತರ ಭಕ್ತಿ ಗೀತೆ, ಜಾನಪದ ಗೀತೆ, ಡೊಳ್ಳಿನ ಪದ, ಸೋಬಾನ ಪದ ಮುಂತಾದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆಲ್ಲ ಬೆಳಿಗ್ಗೆ 11ರಿಂದ ರಾತ್ರಿಯವರೆಗೂ ನಿರಂತರ ಅನ್ನ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿದೆ. ದೇವಸ್ಥಾನದ ಟ್ರಸ್ಟ್‌ ಕಮೀಟಿ, ಶ್ರೀ ಗ್ರಾಮದೇವಿ ಜಾತ್ರಾ ಉತ್ಸವ ಸಮಿತಿ ಜತೆಗೆ ಪಟ್ಟಣದ ಯುವಕರು, ವಿವಿಧ ಸಂಘ-ಸಂಸ್ಥೆಗಳವರು, ಕಲಘಟಗಿ ಸುತ್ತಲಿನ ಗ್ರಾಮಗಳ ಭಕ್ತ ಜನರು ಜಾತ್ರಾ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.