73ರ ಅಜ್ಜಿಗೆ ಈಗಲೂ ಯೋಗದ ನಂಟು

ಯೋಗದ ಬೀಜ ಬಿತ್ತುವ ನಿಸ್ವಾರ್ಥ ಸೇವೆ ; ಹದಿಹರೆಯದವರಂತೆ ಓಡಾಡುವ ಹಿರಿಯ ಜೀವ

Team Udayavani, Jun 21, 2019, 5:36 AM IST

YOGA-BEL

ಬೆಳಗಾವಿ: ವಯಸ್ಸು 73, ಆದರೂ ಮುಖ ಬಾಡಿಲ್ಲ, ಬೆನ್ನು ಬಾಗಿಲ್ಲ. ಮೊಣಕಾಲಿನ ನೋವಿಲ್ಲ. ಹದಿ ಹರೆಯದವರಂತೆ ಓಡಾಡುವ ಈ ಅಜ್ಜಿ ಯೋಗ ಶಿಕ್ಷಕಿ. ಬೆಳಗಾವಿ ನಗರದಲ್ಲಿ ಸುಮಾರು 40 ವರ್ಷಗಳಿಂದ ಉಚಿತ ಯೋಗ ಕಲಿಸುತ್ತ ಖ್ಯಾತರಾಗಿದ್ದಾರೆ.

ಇಲ್ಲಿಯ ಸದಾಶಿವ ನಗರದ ಗಣಪತಿ ದೇವಸ್ಥಾನದಲ್ಲಿ ಪ್ರತಿ ನಿತ್ಯ ಯೋಗ ಕಲಿಸಿ ಜನರಲ್ಲಿ ಆರೋಗ್ಯ ಕುರಿತು ಜಾಗೃತಿ ಮೂಡಿಸುತ್ತಿರುವ ಅಂಜಲಿತಾಯಿ ಗಾಡಗೀಳ ಯೋಗ ಶಿಕ್ಷಕಿ. ಪುರುಷ-ಮಹಿಳೆಯರೆನ್ನದೇ ಎಲ್ಲರಿಗೂ ಉಚಿತ ಯೋಗ ಕಲಿಸುವುದು ದಿನ ನಿತ್ಯದ ಕಾಯಕ. 31ನೇ ವಯಸ್ಸಿನಲ್ಲಿ ಯೋಗಕ್ಕೆ ಮನಸೋತು ಉಳಿದವರಿಗೂ ಅದರ ಲಾಭವನ್ನು ಮನದಟ್ಟು ಮಾಡಿಕೊಡುತ್ತಿದ್ದಾರೆ.

ಮೊಣಕಾಲು ನೋವು, ಪಾದಗಳಲ್ಲಿ ಜೀವ ಇಲ್ಲದಂತಾಗುವುದು, ಎದ್ದು ನಡೆಯಲೂ ಆಗದಂತಹ ವಿಪರೀತ ನೋವಿನಿಂದ ಅಂಜಲಿತಾಯಿ ಬಳಲುತ್ತಿದ್ದರು. ಆಗ ತುಮಕೂರಿನ ಕೃಷಿ ಅಧಿಕಾರಿಯಾಗಿದ್ದ ರಾಮಸ್ವಾಮಿ ಅವರು ಬೆಳಗಾವಿಗೆ ವರ್ಗವಾಗಿ ಬಂದಿದ್ದರು. ಆಗ ಅಲ್ಲಲ್ಲಿ ಯೋಗ ಕಲಿಸುತ್ತಿದ್ದರು. ಇದನ್ನು ಗಮನಿಸಿದ ಅಂಜಲಿತಾಯಿ ಅವರ ಬಳಿ ಯೋಗ ಅಭ್ಯಾಸ ಮಾಡಲು ಆರಂಭಿಸಿದ ನಂತರ ಕೆಲವೇ ದಿನಗಳಲ್ಲಿ ಅವರ ಆರೋಗ್ಯ ಸಮಸ್ಯೆಗಳು ದೂರವಾದವು.

ಯೋಗ ಕಲಿಸುವುದು ಹೇಗೆ, ಯೋಗದಿಂದ ಲಾಭವೇನು ಎಂಬುದರ ಬಗ್ಗೆಯೇ ರಾಮಸ್ವಾಮಿ ತರಬೇತಿ ನೀಡಿದ್ದರು. ಉಚಿತವಾಗಿ ಯೋಗ ಕಲಿಸಿ ತಾವೂ ಉಚಿತವಾಗಿ ತರಬೇತಿ ನೀಡುವಂತೆ ಹೇಳುತ್ತಿದ್ದರು. ಹೀಗಾಗಿ ಇವರ ಪ್ರೇರಣೆಯಂತೆ ಅಂಜಲಿತಾಯಿ ಈಗಲೂ ಉಚಿತವಾಗಿಯೇ ಯೋಗ ಕಲಿಸಿ ಸ್ಫೂರ್ತಿದಾಯಕರಾಗಿದ್ದಾರೆ. ಹರಿದ್ವಾರದ ರಾಮದೇವ ಬಾಬಾ ಅವರ ಬಳಿಯೂ ಹೋಗಿ ಬಂದಿದ್ದಾರೆ.

ಸುಮಾರು 40ಕ್ಕೂ ಹೆಚ್ಚು ಯೋಗಾಸನ ಹಾಗೂ ಪ್ರಾಣಾಯಾಮ ಕಲಿಸುತ್ತಿರುವ ಅಂಜಲಿತಾಯಿ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬರುತ್ತಾರೆ. ನಿಸ್ವಾರ್ಥ ಸೇವೆ ರೂಢಿಸಿಕೊಂಡಿರುವ ಇವರು ಯಾವುದೇ ಪ್ರಶಸ್ತಿಯ ಬೆನ್ನು ಹತ್ತಿದವರಲ್ಲ. ಪ್ರಚಾರದಿಂದ ದೂರವೇ ಉಳಿದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಿಕಾದಲ್ಲಿ ಸೇವೆ ಸಲ್ಲಿಸುತ್ತಾರೆ. ಈಗ ಕೆಲ ವರ್ಷಗಳಿಂದ ಶಿರ್ಷಾಸಾನ ಮಾಡುವುದನ್ನು ನಿಲ್ಲಿಸಿ, ಇನ್ನುಳಿದ ಸರ್ವಾಂಗಾಸನಗಳನ್ನು ಮಾಡುತ್ತಿದ್ದಾರೆ.

ಉತ್ತಮ ಜೀವನ ಪದ್ಧತಿ,ಮನಸ್ಸಿನ ಸಮತೋಲನ ಕಾಪಾಡಿಕೊಳ್ಳಲು ಯೋಗ ಸಂಜೀವಿನಿ. ನನ್ನ ಜೀವನದಲ್ಲಿ ಆದ ಪರಿವರ್ತನೆಯಿಂದಲೇ ಯೋಗ ಕಲಿತಿದ್ದೇನೆ. ಈವರೆಗೆ ನನಗೆ ಯಾವುದೇ ಅನಾರೋಗ್ಯವಿಲ್ಲ. ನನ್ನ ಪತಿ ಸಿವಿಲ್‌ ಎಂಜಿನಿಯರ್‌ ಆಗಿ ನಿವೃತ್ತರಾಗಿದ್ದಾರೆ. ಈಗ ಅವರಿಗೆ 81 ವಯಸ್ಸು. ನಿತ್ಯ ಪ್ರಾಣಾಯಾಮ ಮಾಡುತ್ತಾರೆ.
ಮಗ ಎಂಜಿನಿಯರ್‌, ಮಗಳು ದಂತ ವೈದ್ಯೆ. ಅವರೂ ಯೋಗಾಸನ ರೂಢಿಸಿಕೊಂಡಿದ್ದಾರೆ.
– ಅಂಜಲಿತಾಯಿ ಗಾಡಗೀಳ,
ಯೋಗ ಶಿಕ್ಷಕಿ

-ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.