ಪುತ್ತೂರು ಅಂಬೇಡ್ಕರ್‌ ಶಾಲೆಗೆ ಅನುದಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ


Team Udayavani, Dec 28, 2022, 6:50 PM IST

ಪುತ್ತೂರು ಅಂಬೇಡ್ಕರ್‌ ಶಾಲೆಗೆ ಅನುದಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಸುವರ್ಣ ವಿಧಾನಸೌಧ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಡಾ|ಬಿ.ಆರ್‌.ಅಂಬೇಡ್ಕರ್‌ ವಸತಿ ಶಾಲೆಗೆ ಬರುವ ಆರ್ಥಿಕ ವರ್ಷದಲ್ಲಿ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ಮಂಜೂರು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬುಧವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಅವರು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದರು.

2016-17ರಲ್ಲಿ ಮಂಜೂರಾದ ಈ ವಸತಿ ಶಾಲೆಯು ಅದೇ ವರ್ಷದಿಂದ ಬಾಡಿಗೆ ಕಟ್ಟಡದಲ್ಲಿ ಕಾರ್ಯಾರಂಭಿಸಿದೆ, ವಸತಿ ಶಾಲೆಯ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಬಜತ್ತೂರು ಗ್ರಾಮದಲ್ಲಿ 6.20 ಎಕ್ರೆ ಜಮೀನು ಮಂಜೂರಾಗಿದೆ. ಆದರೆ ಶಾಲಾ ಕಟ್ಟಡ ನಿರ್ಮಾಣಕ್ಕೆ 25 ಕೋಟಿ ರೂ. ಅಂದಾಜು ಪಟ್ಟಿಗೆ ಅನುದಾನ ಬಿಡುಗಡೆ ಮಾಡಲು ಕೋರಲಾಗಿತ್ತು.

ಆರ್ಥಿಕ ಇಲಾಖೆಯು ಪ್ರಸ್ತುತ ಆರ್ಥಿಕ ಸಂದಿಗ್ಧ ಪರಿಸ್ಥಿತಿಯಲ್ಲಿ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ, ಹಾಗಾಗಿ ಮುಂದಿನ ಸಾಲಿಗೆ ಇದನ್ನು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಹಾವೇರಿಯಲ್ಲಿ ಈ ಬಾರಿ ಕುಸ್ತಿಹಬ್ಬ: ಕೋಟ
ಬೆಳಗಾವಿ: ಕೆಲವು ವರ್ಷಗಳಿಂದ ನಿಂತು ಹೋಗಿರುವ ಕುಸ್ತಿ ಹಬ್ಬವನ್ನು ಮತ್ತೆ ಆರಂಭಿಸಲಾಗುವುದು ಹಾಗೂ ಈ ಬಾರಿ ಹಾವೇರಿಯಲ್ಲಿ ನಡೆಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ವಿಧಾನಸಭೆಯಲ್ಲಿ ಬುಧವಾರ ಕಲಘಟಗಿ ಶಾಸಕ ನಿಂಬಣ್ಣನವರ್‌ ಪ್ರಶ್ನೆಗೆ ಕ್ರೀಡಾ ಸಚಿವರ ಪರವಾಗಿ ಉತ್ತರಿಸಿದ ಅವರು, ಕುಸ್ತಿಪಟುಗಳಿಗೆ 2022-23ರ ಸಾಲಿನಲ್ಲಿ ಕುಸ್ತಿ ಹಾಗೂ ಕುಸ್ತಿಯೇತರ ಕ್ರೀಡಾಪಟುಗಳಿಗೆ ಮಾಸಾಶನವನ್ನು ಹೆಚ್ಚಿಸಲಾಗಿದೆ, ಇದರಿಂದಾಗಿ 469.24 ಲಕ್ಷ ರೂ. ಹೆಚ್ಚುವರಿ ಅನುದಾನ ಕೊರತೆಯಾಗಿದೆ. ಪ್ರಸ್ತುತ ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅಗತ್ಯವಿರುವ ಈ ಮೊತ್ತವನ್ನುಮಂಜೂರು ಮಾಡಲಾಗಿದೆ. ಕುಸ್ತಿ ಪಟುಗಳಿಗೆ ಬಾಕಿ ಇರುವ ಮಾಸಾಶನವನ್ನು ಶೀಘ್ರ ಪಾವತಿಸಲಾಗುವುದು ಎಂದರು.

ಪ್ರವರ್ಗ-3ಬಿಯಲ್ಲಿ ಸೇರ್ಪಡೆಗೆ ಶಿಫಾರಸು
ಸುವರ್ಣ ವಿಧಾನಸೌಧ: ವೈಶ್ಯವಾಣಿ ಜಾತಿಯನ್ನು ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ಪ್ರವರ್ಗ-3(ಬಿ) ಅಡಿ ಸೇರಿಸಬೇಕೆಂಬ ಸಲಹೆಯು ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಹರತಾಳು ಹಾಲಪ್ಪ ಪ್ರಶ್ನೆಗೆ ಉತ್ತರಿಸಿದರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿನಿಯಮದಂತೆ ಪ್ರವರ್ಗ-3ಬಿಯಲ್ಲಿ ಸೇರ್ಪಡೆಗೆ ಶಿಫಾರಸು ಮಾಡಿರುತ್ತದೆ ಎಂದೂ ತಿಳಿಸಿದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.