ಕೃಷ್ಣೆಗೆ ಮಹಾ ಬಾಯಾರಿಕೆ
Team Udayavani, May 16, 2019, 2:44 PM IST
ಚಿಕ್ಕೋಡಿ: ಏಪ್ರಿಲ್ ಮತ್ತು ಮೇ ಮೊದಲ ವಾರದಲ್ಲಿ ಉಲ್ಬಣಿಸಿದ ಕುಡಿಯುವ ನೀರಿನ ಸಮಸ್ಯೆ ಇದೀಗ ಅಲ್ಪಸ್ವಲ್ಪ ದೂರವಾಗಿದೆ. ನೆರೆಯ ಮಹಾರಾಷ್ಟ್ರದ ಕಾಳಮ್ಮವಾಡಿ ಜಲಾಶಯದಿಂದ ದೂಧಗಂಗಾ ನದಿಗೆ ಹರಿ ಬಿಟ್ಟಿರುವ ನೀರಿನಿಂದ ನಿಪ್ಪಾಣಿ ಮತ್ತು ಚಿಕ್ಕೋಡಿ ತಾಲೂಕಿನ ನದಿ ಪಾತ್ರದ ಜನರ ನೀರಿನ ಕೊರತೆ ನೀಗಿದೆ.
ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ನದಿ ಪಾತ್ರದ ಹಳ್ಳಿಗಳು ಬಹುತೇಕ ವೇದಗಂಗಾ ಮತ್ತು ದೂಧಗಂಗಾ ನದಿ ನೀರನ್ನೇ ಅವಲಂಬಿಸಿರುವುದರಿಂದ ಈ ಭಾಗದ ಹಳ್ಳಿಗಳಿಗೆ ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಕಾಳಮ್ಮವಾಡಿ ಜಲಾಶಯದಿಂದ ದೂಧಗಂಗಾ ನದಿಗೆ 700 ಕ್ಯೂಸೆಕ್ ನೀರು ನದಿಗೆ ಹರಿಸಿರುವುದರಿಂದ ಸದ್ಯಕ್ಕಂತೂ ಚಿಂತೆಯಿಲ್ಲ. ಆದರೆ ನೀರು ಖಾಲಿಯಾಗುವಷ್ಟರಲ್ಲಿ ದೊಡ್ಡ ಅಡ್ಡ ಮಳೆಯಾದರೆ ಮಾತ್ರ ಈ ಭಾಗದ ಜನರಿಗೆ ಮತ್ತಷ್ಟು ಅನುಕೂಲವಾಗುತ್ತದೆ. ಇಲ್ಲವಾದರೆ ಮತ್ತೆ ಮಹಾರಾಷ್ಟ್ರ ಸರ್ಕಾರದತ್ತ ಮುಖ ಮಾಡಬೇಕಾಗುತ್ತದೆ.
ವೇದಗಂಗಾ ಮತ್ತು ದೂಧಗಂಗಾ ನದಿ ಪಾತ್ರದ ವ್ಯಾಪ್ತಿಯಲ್ಲಿ ಬರುವ ನಿಪ್ಪಾಣಿ ತಾಲೂಕಿನ ಜತ್ರಾಟ, ಭಿವಸಿ, ಬಾರವಾಡ, ಅಕ್ಕೋಳ, ಕಾರದಗಾ, ಭೋಜ, ಕುನ್ನೂರ, ಕೊಗನ್ನೋಳ್ಳಿ, ಮಾಂಗೂರ, ಬೇಡಕಿಹಾಳ ಮತ್ತು ಚಿಕ್ಕೋಡಿ ತಾಲೂಕಿನ ಶಮನೇವಾಡಿ, ಮಲಿಕವಾಡ, ಸದಲಗಾ, ಯಕ್ಸಂಬಾ ಮುಂತಾದ ಹಳ್ಳಿಯ ಜನರಿಗೆ ಸದ್ಯಕ್ಕಂತೂ ಆತಂಕ ದೂರವಾಗಿದೆ.
ಅಂತರ್ಜಲಮಟ್ಟ ವೃದ್ಧಿ: ಗಡಿ ಭಾಗದ ಜನರ ಜೀವನಾಡಿಯಾದ ಕೃಷ್ಣಾ ಮತ್ತು ದೂಧಗಂಗಾ ನದಿ ಬತ್ತಿ ಹೋಗಿದ್ದವು. ಕೃಷ್ಣಾ ನದಿಗೆ ಇನ್ನೂ ನೀರು ಬಂದಿಲ್ಲ ಹೀಗಾಗಿ ಕೃಷ್ಣಾ ನದಿ ತೀರದ ಗ್ರಾಮಗಳ ಜನರಿಗೆ ತೊಂದರೆ ಹೆಚ್ಚಿದೆ. ದೂಧಗಂಗಾ ನದಿ ನೀರಿನಿಂದ ಈ ಭಾಗದಲ್ಲಿ ಅಂತರ್ಜಲಮಟ್ಟವೂ ವೃದ್ಧಿಯಾಗಿದೆ. ಇದೀಗ ಮತ್ತೆ ಕೊಳವೆಬಾವಿ ಮೂಲಕ ಜನರು ನೀರು ಪಡೆದುಕೊಳ್ಳುತ್ತಿದ್ದಾರೆ.
ಉಲ್ಬಣಿಸಿದ ನೀರಿನ ಸಮಸ್ಯೆ: ಕೃಷ್ಣಾ ನದಿ ಖಾಲಿಯಾದ ನಂತರ ಜನರು ನೀರಿಗಾಗಿ ನದಿಯಲ್ಲಿ ಹೊಂಡ ತೋಡಿ ನೀರು ಪಡೆದುಕೊಳ್ಳುತ್ತಿದ್ದರು. ಇದೀಗ ಹೊಂಡ ತೋಡಿದರೂ ನೀರು ಬರುತ್ತಿಲ್ಲ. ಹೀಗಾಗಿ ಕೃಷ್ಣಾ ನದಿ ಪಾತ್ರದಲ್ಲಿ ಬರುವ ಚಿಕ್ಕೋಡಿ ತಾಲೂಕಿನ ಮಾಂಜರಿ, ಅಂಕಲಿ, ಯಡೂರ, ಇಂಗಳಿ, ಯಡೂರವಾಡಿ, ರಾಯಬಾಗ ತಾಲೂಕಿನ ಬಾವನಸವದತ್ತಿ, ಹೊಸ ದಿಗ್ಗೆವಾಡಿ, ಹಳೆ ದಿಗ್ಗೆವಾಡಿ ಸೇರಿದಂತೆ ಅಥಣಿ ತಾಲೂಕಿನ ಹತ್ತಾರು ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಮತ್ತೂ ಹೆಚ್ಚಿದೆ.
ಕೃಷ್ಣಾ ನದಿಗೆ ನೀರು ಹರಿಸಬೇಕೆಂದು ಉತ್ತರ ಕರ್ನಾಟಕದ ಜನಪ್ರತಿನಿಧಿಗಳು ನಿಯೋಗ ತೆಗೆದುಕೊಂಡು ಮಹಾ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿ ಬಂದಿದ್ದಾರೆ. ಅದರಂತೆ ರಾಜ್ಯ ಸರ್ಕಾರದ ನೀರಾವರಿ ಸಚಿವ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ ಇನ್ನೂವರೆಗೆ ಮಹಾ ಸರ್ಕಾರ ನೀರು ಹರಿಸದೇ ಇರುವುದು ಗಡಿ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
• ಡಾ| ಸಂತೋಷ ಬಿರಾದಾರ,ತಹಶೀಲ್ದಾರರು, ಚಿಕ್ಕೋಡಿ
• ರಮೇಶ ಪಾಟೀಲ,ಶೇತಕರಿ ಸಂಘಟನೆ ಮುಖಂಡರು ಭೋಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.